ಕಣ್ವ ಗ್ರೂಪ್‌ಗೆ ಸೇರಿದ 85 ಕೋಟಿ ರೂ. ಆಸ್ತಿ ಜಪ್ತಿ!

Published : Feb 28, 2021, 07:22 AM ISTUpdated : Feb 28, 2021, 09:21 AM IST
ಕಣ್ವ ಗ್ರೂಪ್‌ಗೆ ಸೇರಿದ 85 ಕೋಟಿ ರೂ. ಆಸ್ತಿ ಜಪ್ತಿ!

ಸಾರಾಂಶ

ಕಣ್ವ ಗ್ರೂಪ್‌ಗೆ ಸೇರಿದ 85 ರೂ., ಕೋಟಿ ಆಸ್ತಿ ಜಪ್ತಿ| ಜಾರಿ ನಿರ್ದೇಶನಾಲಯದಿಂದ ಮುಟ್ಟುಗೋಲು| ಕರ್ನಾಟಕ, ಆಂಧ್ರಪ್ರದೇಶದಲ್ಲಿನ ಸ್ಥಿರಾಸ್ತಿ ವಶ

ಬೆಂಗಳೂರು(ಫೆ.28): ವಂಚಕ ಹಣಕಾಸು ವ್ಯವಹಾರಗಳ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ತನ್ನ ಸಮರ ಮುಂದುವರಿಸಿದೆ. ಹೆಚ್ಚಿನ ಬಡ್ಡಿ ದರ ನೀಡುವುದಾಗಿ ನಂಬಿಸಿ ಸಾರ್ವಜನಿಕರಿಗೆ ಕೋಟ್ಯಂತರ ರು. ವಂಚನೆ ಮಾಡಿದ ಆರೋಪದ ಮೇಲೆ ಕಣ್ವ ಗ್ರೂಪ್‌ಗೆ ಸೇರಿದ ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿನ 84.40 ಕೋಟಿ ರು. ಮೌಲ್ಯದ ಸ್ಥಿರಾಸ್ತಿಯನ್ನು ಇ.ಡಿ. ಜಪ್ತಿ ಮಾಡಿದೆ.

ಈವರೆಗೆ ಕಣ್ವ ಗ್ರೂಪ್‌ನ 255.17 ಕೋಟಿ ರು. ಮೌಲ್ಯದ ಚರಾಸ್ತಿ ಮತ್ತು ಸ್ಥಿರಾಸ್ತಿವನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು. ಇದೀಗ 84.4 ಕೋಟಿ ರು. ಜಪ್ತಿಯೊಂದಿಗೆ, ಒಟ್ಟು 339.57 ಕೋಟಿ ರು. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿಕೊಂಡಂತಾಗಿದೆ.

ಎಲ್ಲೆಲ್ಲಿ ಜಪ್ತಿ?:

ಕಣ್ವ ಗ್ರೂಪ್‌ನ ನಿರ್ದೇಶಕ ಎನ್‌.ನಂಜುಂಡಯ್ಯ, ಮತ್ತವರ ಕುಟುಂಬ ಸದಸ್ಯರು, ಸಂಸ್ಥಾಪಕ ನಿರ್ದೇಶಕ ಎಸ್‌.ಹರೀಶ್‌ ಹಾಗೂ ಶ್ರೀ ಕಣ್ವ ಸೌಹಾರ್ದ ಕೋ-ಆಪರೇಟಿವ್‌ ಕ್ರೆಡಿಟ್‌ ಲಿ.ಗೆ ಸೇರಿದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ. ಕರ್ನಾಟಕದಲ್ಲಿ ನೆಲಮಂಗಲ, ಕೊರಟಗೆರೆ, ಚಿಕ್ಕಬಳ್ಳಾಪುರ, ಶ್ರೀರಂಗಪಟ್ಟಣ ಮತ್ತು ಬೆಂಗಳೂರಿನಲ್ಲಿನ ಆಸ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆಂಧ್ರಪ್ರದೇಶದಲ್ಲಿನ ಮಡಕಶಿರಾದಲ್ಲಿನ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಇ.ಡಿ. ಅಧಿಕಾರಿಗಳು ತಿಳಿಸಿದ್ದಾರೆ.

ವಂಚನೆ ಏನು?:

ಕಣ್ವ ಗ್ರೂಪ್‌ನ ವಂಚನೆ ಬಗ್ಗೆ ಸಹಕಾರ ಸಂಘದ ರಿಜಿಸ್ಟ್ರಾರ್‌ ಅವರು ನೀಡಿದ ದೂರಿನ ಮೇರೆಗೆ ಇ.ಡಿ. ತನಿಖೆ ಕೈಗೊಂಡಿತ್ತು. ಈ ವೇಳೆ, ಜನರಿಗೆ ಹೆಚ್ಚಿನ ಬಡ್ಡಿಯ ಅಮಿಷವೊಡ್ಡಿ 650 ಕೋಟಿ ರು.ನಷ್ಟುಹಣವನ್ನು ಸಾರ್ವಜನಿಕರಿಂದ ಸಂಗ್ರಹಿಸಲಾಗಿದೆ. ಕಮಿಷನ್‌ ಏಜೆಂಟ್‌ಗಳಿಂದ ಸೂಕ್ತ ದಾಖಲೆಗಳಿಲ್ಲದೆ ಹಣ ಸಂಗ್ರಹಿಸಲಾಗಿದೆ. ನಿಯಮಗಳನ್ನು ಸಹ ಪಾಲನೆ ಮಾಡಿಲ್ಲ. ಸರಿಯಾದ ಖಾತೆಯನ್ನು ಸಹ ನಿರ್ವಹಣೆ ಮಾಡಿಲ್ಲ ಎಂಬುದು ತನಿಖೆ ವೇಳೆ ಗೊತ್ತಾಗಿದೆ.

ಸಾರ್ವಜನಿಕರನ್ನು ಮೋಸಗೊಳಿಸುವ ಉದ್ದೇಶದಿಂದ ಅನಧಿಕೃತ ಸಂಗ್ರಹ ಕೇಂದ್ರ ತೆರೆಯಲಾಗಿದೆ ಮತ್ತು ಏಜೆಂಟ್‌ರ ಮೂಲಕ ಸುಮಾರು 13 ಸಾವಿರಕ್ಕೂ ಹೆಚ್ಚಿನ ಮಂದಿಯಿಂದ ಶ್ರೀಕಣ್ವ ಸೌಹಾರ್ದ ಕೋ-ಆಪರೇಟಿವ್‌ ಕ್ರೆಡಿಟ್‌ ಲಿ. ಕೋಟ್ಯಂತರ ರು. ಸಂಗ್ರಹಿಸಿದೆ. ಸಾರ್ವಜನಿಕರಿಗೆ ಶೇ.12ರಿಂದ ಶೇ.15ರಷ್ಟುಬಡ್ಡಿ ನೀಡುವುದಾಗಿ ನಂಬಿಸಿ ಹಣ ಪಡೆಯಲಾಗಿದೆ. ಆದರೆ, ಭರವಸೆ ನೀಡಿದ ಬಡ್ಡಿದರದಲ್ಲಿ ಹಣ ಪಾವತಿಸಿಲ್ಲ. ಅಲ್ಲದೇ, ಜನರಿಂದ ಸಂಗ್ರಹಿಸಿದ ಹಣವನ್ನು ಆರೋಪಿ ನಂಜುಂಡಯ್ಯ ತಮ್ಮ ಮತ್ತು ಕುಟುಂಬ ಸದಸ್ಯರ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಗಸ್ಟ್‌ನಲ್ಲೇ ಮುಖ್ಯ ಆರೋಪಿ ನಂಜುಂಡಯ್ಯನನ್ನು ಬಂಧಿಸಲಾಗಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್