ರಾಹುಲ್ ಗಾಂಧಿ ವಿರುದ್ಧ ತಿರುಗಿಬಿದ್ದ ರೈತ ಸಂಘಟನೆ; ಇಟಲಿ ಪ್ರಯಾಣಕ್ಕೆ ಪ್ರತಿಕ್ರಿಯೆ!

Published : Dec 27, 2020, 10:33 PM IST
ರಾಹುಲ್ ಗಾಂಧಿ ವಿರುದ್ಧ ತಿರುಗಿಬಿದ್ದ ರೈತ ಸಂಘಟನೆ; ಇಟಲಿ ಪ್ರಯಾಣಕ್ಕೆ ಪ್ರತಿಕ್ರಿಯೆ!

ಸಾರಾಂಶ

ರೈತ ಪ್ರತಿಭಟನೆಗೆ ಬೆಂಬಲ ಸೂಚಿಸಿದ ರಾಹುಲ್ ಗಾಂಧಿ, ಪ್ರತಿಭಟನೆ ನಡುವೆ ಇಟಲಿಗೆ ಪ್ರಯಾಣ ಮಾಡಿದ್ದಾರೆ. ಇದು ತೀವ್ರ ಟೀಕೆಗೆ ಕಾರಣವಾಗಿದೆ. ಇತ್ತ ರಾಹುಲ್ ಇಟಲಿ ಪ್ರಯಾಣದ ಕುರಿತು ರೈತ ಸಂಘಟನೆ ಖಡಕ್ ಪ್ರತಿಕ್ರಿಯೆ ನೀಡಿದೆ.

ನವದೆಹಲಿ(ಡಿ.27): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದಿಢೀರ್ ಇಟಲಿಗೆ ಹಾರಿದ್ದಾರೆ. ಇದೀಗ ಕಾಂಗ್ರೆಸ್ ಕೂಡ ರಾಹುಲ್ ವಿದೇಶಕ್ಕೆ ತೆರಳಿರುವುದನ್ನು ಖಚಿತಪಡಿಸಿದೆ. ಆದರೆ ಇತರ ಮಾಹಿತಿಗಳನ್ನು ಬಹಿರಂಗ ಪಡಿಸಿಲ್ಲ. ಇತ್ತ ವಿದೇಶ ಪ್ರಯಾಣಕ್ಕೆ ರಾಹುಲ್ ಗಾಂಧಿ ವಿರುದ್ಧ ಟೀಕೆ ವ್ಯಕ್ತವಾಗಿದೆ. ರೈತ ಪ್ರತಿಭಟನೆ ನಡುವೆ ವಿದೇಶ ಪ್ರಯಾಣವನ್ನು ಹಲವು ಪ್ರಶ್ನಿಸಿದ್ದಾರೆ. ಇದೀಗ ಪ್ರತಿಭಟನಾ ನಿರತ ರೈತ ಸಂಘಟನೆ ರಾಹುಲ್ ವಿರುದ್ಧ ವಾಗ್ದಾಳಿ ನಡೆಸಿದೆ.

ರೈತರ ಪ್ರತಿಭಟನೆ, ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ನಡುವೆ ಇಟಲಿಗೆ ಹಾರಿದ ರಾಹುಲ್ ಗಾಂಧಿ!

ರಾಹುಲ್ ಪ್ರಯಾಣದ ಕುರಿತು ಪ್ರತಿಭಟನಾ ನಿರತ ಭಾರತೀಯ ಕಿಸಾನ್ ಯುನಿಯನ್(BKU)ನಾಯಕ ರಾಕೇಶ್ ಟಿಕೈಟ್ ಪ್ರತಿಕ್ರಿಯೆ ನೀಡಿದ್ದಾರೆ. ರಾಹುಲ್ ಗಾಂಧಿ ಇದುವರೆಗೆ ನಮ್ಮ ಜೊತೆಯಾಗಲಿ, ಪ್ರತಿಭಟನಾ ನಿರತ ರೈತರ ಜೊತೆ ಮಾತನಾಡಿಲ್ಲ. ಇಲ್ಲಿಗೆ ಬೇಟಿ ನೀಡಿಲ್ಲ. ನಮ್ಮ ವಿರೋಧ ಪಕ್ಷ ತುಂಬಾ ದುರ್ಬಲವಾಗಿದೆ ಎಂದು ಆರೋಪಿಸಿದ್ದಾರೆ.

ರಾಹುಲ್ ಗಾಂಧಿ ಹಳೇ ವಿಡಿಯೋ ಶೇರ್ ಮಾಡಿದ ಜೆಪಿ ನಡ್ಡಾ; ಇಕ್ಕಟ್ಟಿಗೆ ಸಿಲುಕಿದ ಕಾಂಗ್ರೆಸ್!

ಕೇಂದ್ರ ಕೃಷಿ ಕಾಯ್ದೆ ವಿರುದ್ಧ ಹೋರಾಟ ನಡೆಸುತ್ತಿರುವ ರೈತರಿಗೆ ಕಾಂಗ್ರೆಸ್ ಪಕ್ಷ ಬೆಂಬಲ ನೀಡಿದೆ. ರೈತರ ಜೊತೆ ನಾವು ನಿಲ್ಲಲಿದ್ದೇವೆ ಎಂದಿತ್ತು.  ರಾಹುಲ್ ಗಾಂಧಿ ಇತ್ತೀಚೆಗೆ ವಾಗ್ದಾಳಿ ನೆಡೆಸಿದ್ದರು. ಕೃಷಿ ಮಸೂದೆ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದರು. ರೈತರ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ರಾಹುಲ್ ಗಾಂಧಿ ವಿದೇಶಕ್ಕೆ ಪ್ರಯಾಣ ಮಾಡಿರುವುದು ಇದೀಗ ರೈತರನ್ನೇ ಕೆರಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಟಿಹಾರ್ ಜಂಕ್ಷನ್‌ನಲ್ಲಿ ಮಹಿಳೆಯ ಭಯಾನಕ ಅನುಭವ: 30-40 ಪುರುಷರು ನುಗ್ಗಲು ಯತ್ನ, ಶೌಚಾಲಯದಲ್ಲಿ ಸಿಲುಕಿದ ಮಹಿಳೆ!
ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!