
ಕೋಲ್ಕತಾ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಹೊರಿಸಿ ನಟ, ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ವಿರುದ್ಧ ಬಿದಾನ್ನಗರ್ ಪೊಲೀಸರು ಬುಧವಾರ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಇತ್ತೀಚೆಗೆ ಬಿಜೆಪಿ ಸಭೆಯಲ್ಲಿ ಮಿಥುನ್, 2026ರಲ್ಲಿ ಪಶ್ಚಿಮ ಬಂಗಾಳದ ಸಿಂಹಾಸನ ಬಿಜೆಪಿಗೆ ಸೇರಲಿದ್ದು, ಅದನ್ನು ಸಾಧಿಸಲು ಸಾಧ್ಯವಾದುದನ್ನೆಲ್ಲಾ ಮಾಡುತ್ತೇವೆ. ವಿಧಾನಸಭೆ ಚುನಾವಣೆಯಲ್ಲಿ ಮತ ಚಲಾ ಯಿಸದಂತೆ ಬಿಜೆಪಿ ಮತದಾರರಿಗೆ ಯಾರೂ ಬೆದರಿಸಬಾರದು' ಎಂದು ಟಿಎಂಸಿಗೆ ಎಚ್ಚರಿಸಿದ್ದರು.
ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನು ಸೇಡಿನ ರಾಜಕೀಯ ಎಂದು ಕರೆದಿರುವ ಕೇಂದ್ರ ಸಚಿವ ಸುಕಾಂತ್ ಮಜುಂದಾರ್, 'ಮಿಥುನ್ ಭಾಷಣದಲ್ಲಿ ಪ್ರಚೋದನಕಾರಿ ಎನಿಸುವಂಥದ್ದು ಏನೂ ಇರಲಿಲ್ಲ. ಇದು ಪೊಲೀಸರನ್ನು ರಾಜಕೀಯ ಅಸ್ತ್ರವಾಗಿ ಬಳಸಿ ಅವರನ್ನು ಬೆದರಿಸುವ ಸಂಚು' ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ