ಆಶಾ ಕಾರ್ಯಕರ್ತೆಯರ ಗೌರವಧನ 18 ಸಾವಿರಕ್ಕೆ ಏರಿಸಿದ ಸರ್ಕಾರ, ಮುಖ್ಯಮಂತ್ರಿಗೆ ಹೂವಿನ ಮಳೆ ಸುರಿಸಿ ಸನ್ಮಾನ!

Published : Mar 26, 2025, 10:28 PM ISTUpdated : Mar 26, 2025, 10:52 PM IST
ಆಶಾ ಕಾರ್ಯಕರ್ತೆಯರ ಗೌರವಧನ 18 ಸಾವಿರಕ್ಕೆ ಏರಿಸಿದ ಸರ್ಕಾರ, ಮುಖ್ಯಮಂತ್ರಿಗೆ ಹೂವಿನ ಮಳೆ ಸುರಿಸಿ ಸನ್ಮಾನ!

ಸಾರಾಂಶ

ಪುದುಚೇರಿಯ ಎನ್‌ಡಿಎ ಸರ್ಕಾರವು ಆಶಾ ಕಾರ್ಯಕರ್ತೆಯರ ಗೌರವಧನವನ್ನು 18000 ರೂಪಾಯಿಗೆ ಹೆಚ್ಚಿಸಿದೆ.

ಚೆನ್ನೈ (ಮಾ.26): ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನವನ್ನು ಭಾರೀ ಪ್ರಮಾಣದಲ್ಲಿ ಮುಖ್ಯಮಂತ್ರಿ ಎನ್. ರಂಗಸ್ವಾಮಿ ಹೆಚ್ಚಿಸಿದ್ದಾರೆ. ಗೌರವಧನವನ್ನು ಒಂದೇ ಬಾರಿಗೆ 10,000 ರೂಪಾಯಿಂದ 18,000 ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಘೋಷಿಸಲಾಗಿದೆ. ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳು ಈ ಘೋಷಣೆ ಮಾಡಿದ್ದಾರೆ. ಶಾಸಕರ ಕೋರಿಕೆಯ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ನಂತರ ಆಶಾ ಕಾರ್ಯಕರ್ತೆಯರು ಮುಖ್ಯಮಂತ್ರಿಯನ್ನು ಅಭಿನಂದಿಸಿದ್ದಲ್ಲದೆ, ಮುಖ್ಯಮಂತ್ರಿಯ ಕಾರ್‌ನ ಮೇಲೆ ಹೂಮಳೆ ಸುರಿಸಿ ಅವರ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

ಕರ್ನಾಟಕದಲ್ಲಿ ಎಷ್ಟಿದೆ?: ವಿವಿಧ ರಾಜ್ಯಗಳಲ್ಲಿ ಆಶಾ ಕಾರ್ಯಕತೆಯರ ಗೌರವಧನ ಭಿನ್ನವಾಗಿರುತ್ತದೆ. ರಾಜ್ಯದಲ್ಲಿ ಕಳೆದ ಬಾರಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆಯ ವೇಳೆ ಸರ್ಕಾರ ಏಪ್ರಿಲ್‌ 1 ರಿಂದ ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ 10 ಸಾವಿರ ಗೌರವಧನ ನೀಡುವುದಾಗಿ ತಿಳಿಸಿದ್ದರು. ರಾಜ್ಯ ಸರ್ಕಾರ ಭರವಸೆ ನೀಡಿರುವಂತೆ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹10 ಸಾವಿರ ಗೌರವಧನ ನೀಡುವ ಅಧಿಕೃತ ಆದೇಶವನ್ನು ಕೂಡಲೇ ಹೊರಡಿಸಬೇಕು ಹಾಗೂ ಬಜೆಟ್‌ನಲ್ಲಿ ಘೋಷಣೆ ಮಾಡಿರುವಂತೆ ₹1 ಸಾವಿರ ಗೌರವಧನವನ್ನು ಏಪ್ರಿಲ್‌ನಿಂದ ಅನ್ವಯವಾಗುವಂತೆ ನೀಡಲು ಆದೇಶಿಸಬೇಕು ಎಂದು ಇತ್ತೀಚೆಗೆ ಆಶಾ ಕಾರ್ಯಕರ್ತೆಯರು ಮನವಿ ಮಾಡಿದ್ದರು,

ಪುದುಚೇರಿ ವಿಚಾರಕ್ಕೆ ಬರುವುದಾದರೆ, ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಎನ್ ರಂಗಸಾಮಿ ಅವರು ಮಂಡಿಸಿದ 2025 ರ ವಿನಿಯೋಗ ಮಸೂದೆಯನ್ನು ಪುದುಚೇರಿ ಪ್ರಾದೇಶಿಕ ವಿಧಾನಸಭೆ ಬುಧವಾರ ಅಂಗೀಕರಿಸಿತು. ವಿವಿಧ ಇಲಾಖೆಗಳಿಗೆ ಅನುದಾನ ಬೇಡಿಕೆಗಳ ಮೇಲಿನ ಚರ್ಚೆ ಮುಗಿದ ನಂತರ ಮತ್ತು ಸಚಿವರು ಉತ್ತರಗಳನ್ನು ನೀಡುತ್ತಿದ್ದ ನಂತರ, ಮುಖ್ಯಮಂತ್ರಿಗಳು 2025-26 ನೇ ಹಣಕಾಸು ವರ್ಷಕ್ಕೆ ಪುದುಚೇರಿ ಕೇಂದ್ರ ಪ್ರದೇಶದ ಏಕೀಕೃತ ನಿಧಿಯಿಂದ 13,600 ಕೋಟಿ ರೂ.ಗಳನ್ನು ಮೀಸಲಿಡುವ ವಿನಿಯೋಗ ಮಸೂದೆಯನ್ನು ಮಂಡಿಸಿದರು. ಈ ಹಿಂದೆ ಮುಖ್ಯಮಂತ್ರಿಗಳು ಇಲ್ಲಿನ ಪುದುಚೇರಿ ಮತ್ತು ಉಝವರ್ಕರೈ ಪುರಸಭೆಗಳನ್ನು ವಿಲೀನಗೊಳಿಸಿ ಜನರ ಆಕಾಂಕ್ಷೆಗಳನ್ನು ಪೂರೈಸಲು ಪುರಸಭೆಯನ್ನು ರಚಿಸಲಾಗುವುದು ಎಂದು ಹೇಳಿದರು.

ವಿವಿಧ ವರ್ಗದ ಉದ್ಯೋಗಿಗಳಿಗೆ ವೇತನ ಹೆಚ್ಚಳವನ್ನು ಘೋಷಿಸಿದ ಮುಖ್ಯಮಂತ್ರಿಗಳು, ಯಾವುದೇ ವರ್ಗದ ಕಾರ್ಮಿಕರು ಮಾಸಿಕ ವೇತನವಾಗಿ 10,000 ರೂ.ಗಳಿಗಿಂತ ಕಡಿಮೆ ಪಡೆಯಬಾರದು ಎಂದು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದರು. ಈಗ 10,000 ರೂ.ಗಳನ್ನು ಪಡೆಯುತ್ತಿರುವ ಆಶಾ ಕಾರ್ಯಕರ್ತರಿಗೆ ತಿಂಗಳಿಗೆ 18,000 ರೂ.ಗಳನ್ನು ಪಾವತಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಆಶಾ ಕಾರ್ಯಕರ್ತೆಯರಿಗೆ ಗುಡ್‌ನ್ಯೂಸ್ ಕೊಟ್ಟ ಆಂಧ್ರ ಸರ್ಕಾರ; ನಮ್ಮಲ್ಲಿಯೂ ಸಿಗುತ್ತಾ?

ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಷನ್ ಅಡಿಯಲ್ಲಿ ಕೆಲಸ ಮಾಡುವವರಿಗೆ 26,000 ರೂ.ಗಳನ್ನು ಪಾವತಿಸಲಾಗುವುದು. ಮಾರ್ಚ್ 12 ರಂದು ವಿಧಾನಸಭೆಯಲ್ಲಿ ಮಂಡಿಸಿದ 13,600 ಕೋಟಿ ರೂ.ಗಳ ಬಜೆಟ್ ಎಲ್ಲಾ ವರ್ಗದ ಜನರ ನಿರೀಕ್ಷೆಗಳನ್ನು ಪೂರೈಸಲು ವಿನ್ಯಾಸಗೊಳಿಸಲಾಗಿದೆ ಎಂದು ಅವರು ಹೇಳಿದರು. ವಿನಿಮಯ ಮಸೂದೆಯನ್ನು ಅಂಗೀಕರಿಸಿದ ನಂತರ ಸ್ಪೀಕರ್ ಆರ್. ಸೆಲ್ವಂ ಗುರುವಾರ ಬೆಳಿಗ್ಗೆ 9.30 ರವರೆಗೆ ಕಲಾಪವನ್ನು ಮುಂದೂಡಿದರು.

ನಮ್ಮಿಂದ ಪಕ್ಷಕ್ಕೆ ಡ್ಯಾಮೇಜ್‌ ಆಗಿಲ್ಲ, ನಾವೇ ಆಶಾಕಿರಣ: ಯತ್ನಾಳ್‌

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್