
ನವದೆಹಲಿ[ಮಾ.07]: 40 ಮಂದಿ ಸಿಆರ್ಪಿಎಫ್ ಯೋಧರನ್ನು ಬಲಿ ಪಡೆದ ಪುಲ್ವಾಮಾ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ- ಎನ್ಐಎ ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದೆ. ಬಂಧಿತ ಆರೋಪಿಗಳನ್ನು ಶ್ರೀನಗರದ ಬಾಗ್ ಎ ಮೆಹತಾಬ್ ನಿವಾಸಿ ವೈಝ್ ಉಲ್ ಇಸ್ಲಾಮ್ (19) ಹಾಗೂ ಪುಲ್ವಾಮಾ ನಿವಾಸಿ ಮೊಹದ್ ಅಬ್ಬಾಸ್ ರಾಧರ್ ಎಂದು ಗುರುತಿಸಲಾಗಿದೆ.
ವಿಚಾರಣೆಯ ವೇಳೆ ಈ ವೈಝ್ ಉಲ್ ಇಸ್ಲಾಂ, ತಾನು ಐಇಡಿ ಬಾಂಬ್ ತಯಾರಿಕೆಗೆ ಬೇಕಾದ ರಾಸಾಯನಿಕ ಸಾಮಗ್ರಿಗಳು, ಬ್ಯಾಟರಿಗಳು ಮತ್ತು ಇತರ ಉಪಕರಣಗಳನ್ನು ಪಾಕಿಸ್ತಾನದ ಜೈಷ್ ಎ ಮೊಹಮ್ಮದ್ ಉಗ್ರರ ನಿರ್ದೇಶನದಂತೆ ಅಮೆಜಾನ್ನಲ್ಲಿ ಆನ್ಲೈನ್ ಮೂಲಕ ತರಿಸಿಕೊಂಡಿದ್ದೆ ಎಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾನೆ.
ಪುಲ್ವಾಮಾ ದಾಳಿಯ ಭಾಗವಾಗಿ ತರಿಸಲಾದ ವಸ್ತುಗಳನ್ನು ತಾನೇ ಸ್ವತಃ ಜೈಷ್ ಉಗ್ರರಿಗೆ ತಲುಪಿಸಿದ್ದಾಗಿಯೂ ಆತ ಹೇಳಿಕೆ ನೀಡಿದ್ದಾನೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ