
ನವದೆಹಲಿ: ಕೆಂಪುಕೋಟೆ ಸಮೀಪ ಕಾರು ಸ್ಫೋಟಿಸಿ 13 ಜನರ ಸಾವಿಗೆ ಕಾರಣವಾದ ಕಿಲ್ಲರ್ ಡಾಕ್ಟರ್ ಉಮರ್ ನಬಿಯ ಕಾಶ್ಮೀರದ ಪುಲ್ವಾಮದಲ್ಲಿರುವ ಮನೆಯನ್ನು ಭದ್ರತಾ ಪಡೆ ಸಿಬ್ಬಂದಿ ರಾತ್ರೋರಾತ್ರಿ ನೆಲಸಮಗೊಳಿಸಿದ್ದಾರೆ.
ಗುರುವಾರ ರಾತ್ರಿ ವೇಳೆ ಅಧಿಕಾರಿಗಳ ತಂಡ ಎರಡು ಅಂತಸ್ತಿನ ಮನೆಯನ್ನು ಧ್ವಂಸಗೊಳಿಸಿದೆ.
ಡಿಎನ್ಎ ಪರೀಕ್ಷೆಯಲ್ಲಿ, ಸ್ಫೋಟದ ಹಿಂದೆ ಡಾ.ನಬಿ ಕೈವಾಡ ದೃಢವಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಈ ಹಿಂದೆ ಪಹಲ್ಗಾಂ ದಾಳಿಯಲ್ಲಿ ಕೈವಾಡವಿದ್ದವರ ಮನೆಯನ್ನೂ ಇದೇ ರೀತಿ ಧ್ವಂಸಗೊಳಿಸಲಾಗಿತ್ತು. ಇದೀಗ ಉಮರ್ ಮನೆಯನ್ನು ಕೆಡುವುದರ ಮೂಲಕ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುವವರಿಗೆ ಕಠಿಣ ಸಂದೇಶವನ್ನು ಸರ್ಕಾರ ರವಾನಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ