
ಪುಣೆ: ಅಪ್ರಾಪ್ತ ಬಾಲಕನ ಪೋರ್ಷೆ ಅಪಘಾತ ಪ್ರಕರಣದ ತನಿಖೆಯ ದಿಕ್ಕು ತಪ್ಪಿಸುವ ಯತ್ನದ ಕುರಿತು ಮತ್ತಷ್ಟು ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಘಟನೆ ನಡೆದ ದಿನ ಕಾರಿನಲ್ಲಿದ್ದ ಚಾಲಕ ಮತ್ತು ಅಪ್ರಾಪ್ತ ಬಾಲಕನ ರಕ್ತದ ಮಾದರಿ ಬದಲಾಯಿಸಲಾಗಿತ್ತು. ಈ ಮೂಲಕ ಬಾಲಕ ಮದ್ಯ ಸೇವನೆ ಮಾಡಿಲ್ಲ ಎಂದು ಬಿಂಬಿಸಲು ಯತ್ನಿಸಲಾಗಿದೆ ಎಂಬ ವಿಷಯ ಬೆಳಕಿಗೆ ಬಂದಿದೆ. ಇದು ದಶಕಗಳ ಹಿಂದೆ ಕನ್ನಡದ ಆ್ಯಕ್ಸಿಂಡೆಟ್ ಚಿತ್ರದ ಕಥೆಯನ್ನೇ ಹೋಲುವಂತಿದೆ.
ಮೇ 19ರ ಅಪಘಾತ ಮಾಡಿದ 17 ವರ್ಷದ ಅಪ್ರಾಪ್ತನ ರಕ್ತ ಮಾದರಿ ಸಂಗ್ರಹಿಸಲು ಸಸೂನ್ ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿ ವಿಧಿವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಅಜಯ್ ತಾವಡೆ ಸೂಚನೆ ಮೇರೆಗೆ ಮುಖ್ಯ ವೈದ್ಯಾಧಿಕಾರಿ ಡಾ. ಹರಿ ಹಾರ್ನೋರ್ ಈ ದುಷ್ಕೃತ್ಯ ಎಸಗಿದ್ದಾರೆ. ಇದಕ್ಕೆ ಪೂರಕವೆಂಬಂತೆ ಡಾ. ಅಜಯ್ ತಾವಡೆ ಅಪ್ರಾಪ್ತ ಬಾಲಕನ ತಂದೆಯ ಜೊತೆ ತಮ್ಮ ಮೊಬೈಲ್ನಲ್ಲಿ ಹಲವು ಬಾರಿ ಸಂಭಾಷಣೆ ಮಾಡಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಬಾಲಕನ ತಂದೆ ವೈದ್ಯರಿಗೆ ಆಮಿಷವೊಡ್ಡಿ ಬೇರೊಂದು ರಕ್ತ ಮಾದರಿಯ ವರದಿಯನ್ನು ನೀಡಲು ಆಗ್ರಹಿಸಿದ್ದರು ಎಂಬುದಾಗಿ ನಗರ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ತಿಳಿಸಿದ್ದಾರೆ.
ಪೊರ್ಶೆ ಕಾರು ಅಪಘಾತಕ್ಕೂ ಮೊದಲು ಪಾರ್ಟಿಗಾಗಿ 48,000 ರೂ ಖರ್ಚು ಮಾಡಿದ್ದ ಉದ್ಯಮಿ ಪುತ್ರ!
ರಕ್ತ ಮಾದರಿ ತಾಳೆಯಾಗದ ಹಿನ್ನೆಲೆಯಲ್ಲಿ ಸಾಕ್ಷಿಯ ಕೊರತೆಯ ನೆಪವೊಡ್ಡಿ ಬಾಲಾಪರಾಧ ನ್ಯಾಯಮಂಡಳಿ ಅಪ್ರಾಪ್ತನಿಗೆ ಕೇವಲ 15 ಗಂಟೆಯಲ್ಲಿ ಜಾಮೀನು ನೀಡಿತ್ತು. ಇದಕ್ಕೂ ಮೊದಲು ಪೊಲೀಸರು ಯುವಕನ ಮತ್ತೊಂದು ರಕ್ತದ ಮಾದರಿಯನ್ನು ಸಂಗ್ರಹಿಸಿ ಬೇರೊಂದು ಆಸ್ಪತ್ರೆಗೆ ಯುವಕನ ಡಿಎನ್ಎ ಕಣಗಳೊಂದಿಗೆ ತಾಳೆ ಮಾಡಲು ಕಳುಹಿಸಿದ್ದರು. ಅಲ್ಲಿ ಯುವಕನ ರಕ್ತ ಮಾದರಿ ಆತನ ಡಿಎನ್ಎ ಜೊತೆಗೆ ತಾಳೆ ಆಗದ ಹಿನ್ನೆಲೆಯಲ್ಲಿ ಬದಲು ಮಾಡಿರುವುದು ಬಯಲಾಗಿದೆ. ಈ ಹಿನ್ನೆಲೆಯಲ್ಲಿ ಸಸೂನ್ ಆಸ್ಪತ್ರೆಯ ಇಬ್ಬರು ಹಿರಿಯ ವೈದ್ಯರನ್ನು ಬಂಧಿಸಲಾಗಿದೆ.
ಪೋರ್ಶೆ ಕಾರು ಹತ್ತಿಸಿ ಇಬ್ಬರ ಕೊಂದ ಬಿಲ್ಡರ್ ಪುತ್ರನಿಗೆ ಬಿರಿಯಾನಿ, ಪಿಜ್ಜಾ ಕೊಟ್ರಾ ಪೊಲೀಸರು?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ