
Pune Ketan Agarwal Murder Case: ದೇಶದಲ್ಲಿ ಭಾರಿ ಸಂಚಲನಕ್ಕೆ ಕಾರಣವಾಗಿರುವ ಪುಣೆಯ ಕೇತನ್ ಅಗರ್ವಾಲ್ ಕೊಲೆ ಪ್ರಕರಣದ ಒಂದೊಂದೇ ಕತೆಗಳು ಹೊರಬರುತ್ತಿವೆ. ಭಾವಿ ಪತಿ ಕೇತನ್ನನ್ನು ಆತನ ಭಾವಿ ಪತ್ನಿ ಸಿಯಾ ಗೋಯಲ್ ಟ್ರೆಕ್ಕಿಂಗ್ಗೆ ಕರೆದೊಯ್ದ ಅಲ್ಲಿ ಪ್ರಿಯಕರನ ಜೊತೆಗೂಡಿ 400 ಅಡಿ ಆಳದ ಕಂದಕಕ್ಕೆ ತಳ್ಳಿ ಹತ್ಯೆಗೈಯುವ ಮುನ್ನ ಇಂಥದ್ದೇ 2 ಯತ್ನವನ್ನು ಮೊದಲು ಮಾಡಿದ್ದಳು. ಆದರೆ ಅವು ವಿಫಲವಾಗಿದ್ದವು. 3ನೇ ಯತ್ನದಲ್ಲಿ ಯಶ ಕಂಡಳು ಎಂದು ಪೊಲೀಸ್ ತನಿಖೆ ವೇಳೆ ಗೊತ್ತಾಗಿದೆ.
ಮೊದಲಿಗೆ ಮೇ 31ರಂದು ಇಬ್ಬರೂ ಮಹಾರಾಷ್ಟ್ರದ ಲೋಹಗಢ ಕೋಟೆಗೆ ಚಾರಣಕ್ಕೆ ಹೋಗಿದ್ದಾಗ ಕೇತನ್ನನ್ನು ಗೊತ್ತಾಗದಂತೆ ಪ್ರಪಾತಕ್ಕೆ ತಳ್ಳಲು ಪ್ರಯತ್ನ ನಡೆಸಲಾಗಿತ್ತು, ಆದರೆ ಅದು ವಿಫಲವಾಯಿತು.
ನಂತರ ಜೂನ್ 14 ರಂದು ಕೇತನ್ ಕೊಲ್ಲಲು ಎರಡನೇ ಪ್ರಯತ್ನ ನಡೆದಿತ್ತು. ಆಗಲೂ ಸಿಯಾ, ಕೇತನ್ ಅವರನ್ನು ಮಹಾರಾಷ್ಟ್ರದ ಲೋಹಗಢ ಕೋಟೆಗೆ ಕರೆದೊಯ್ದಿದ್ದಳು. ಸಿಯಾ ಪ್ರೇಮಿ ಚೇತನ್ ಚೌಧರಿ ಕೂಡ ಇದರಲ್ಲಿ ಕೈಜೋಡಿಸಿದ್ದ. ಹಾವಿನ ನೆಪ ಹೇಳಿದ ಸಿಯಾ, ಕೇತನ್ನನ್ನು ತಬ್ಬಿಕೊಳ್ಳುವ ನಾಟಕ ಆಡಿ ಪ್ರಪಾತಕ್ಕೆ ತಳ್ಳುವ ಯತ್ನ ನಡೆಸಿದ್ದಳು. ಆದರೆ ಕೇತನ್ ಬಚಾವ್ ಆಗಿದ್ದ. ಸಿಯಾ, ಹಾವು ಅಂತ ಕಿರಿಚಿದ್ದರಿಂದ ಆತನ ಗಮನ ಬೇರೆಡೆ ಹೋಗಿತ್ತು. ಹೀಗಾಗಿ ಇದೊಂದು ಸಂಚು ಎಂಬ ಸತ್ಯ ಕೇತನ್ ಅರಿವಿಗೆ ಬರ್ಲಿಲ್ಲ.
ಕೊನೆಗೆ ಜೂನ್ 19 ರಂದು ಮಹಾಬಲೇಶ್ವರದ ಐಷಾರಾಮಿ ರೆಸಾರ್ಟ್ನಲ್ಲಿ ಸ್ನೇಹಿತರೊಂದಿಗೆ ಪಾರ್ಟಿ ಆಯೋಜಿಸಿ, ಅದೇ ನೆಪದಲ್ಲಿ ಲೋಹಗಢ ಕೋಟೆಗೆ ಪುನಃ ಪ್ರವಾಸಕ್ಕೆ ಕೇತನ್ನನ್ನು ಕರೆದೊಯ್ಯಲಾಯಿತು. ಆಗ ಕೇತನ್ನನ್ನು ಪ್ರಪಾತಕ್ಕೆ ತಳ್ಳಿ, ಇದೊಂದು ಅಪಘಾತ ಎಂಬಂತೆ ಕಥೆ ಕಟ್ಟಿದ್ದಳು. ಈ ಮೂಲಕ ಸಿಯಾ, ಕೇತನ್ ಕಥೆ ಮುಗಿಸೋದ್ರಲ್ಲಿ ಯಶಸ್ವಿಯಾಗಿದ್ದಳು ಎಂದು ಗೊತ್ತಾಗಿದೆ.
ಸ್ವತಃ ರಿಯಲ್ ಎಸ್ಟೇಟ್ ಕಂಪನಿ ಹೊಂದಿದ್ದ ಕೇತನ್, ಜೂ.18ರಂದು ತಮ್ಮ ಭಾವಿ ಪತ್ನಿ ಸಿಯಾ ಜತೆ ಲೋಹಗಡ್ ಕೋಟೆಗೆ ಬಂದಿದ್ದರು. ಅಲ್ಲಿ ಫೋಟೋ ತೆಗೆದುಕೊಳ್ಳುತ್ತಿದ್ದಾಗ 400 ಅಡಿ ಆಳದ ಕಂದಕಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿದ್ದರು. ಕೂಡಲೇ ಲೊನಾವಲಾ ಪೊಲೀಸ್ ಠಾಣೆಗೆ ಧಾವಿಸಿದ ಸಿಯಾ, ಕೇತನ್ ಕಾಲುಜಾರಿ ಬಿದ್ದನೆಂದು ದೂರು ದಾಖಲಿಸಿದ್ದು, 3 ತಾಸಿನ ಕಾರ್ಯಾಚರಣೆ ಬಳಿಕ ದೇಹವನ್ನು ಮೇಲೆತ್ತಲಾಗಿತ್ತು. ಅದಾದ ಬೆನ್ನಲ್ಲೇ ಇನ್ಸ್ಟಾಗ್ರಾಂನಲ್ಲಿ ಸಿಯಾ, ‘ನಾನು ನಿನ್ನನ್ನು ಅಷ್ಟೊಂದು ಪ್ರೀತಿಸುತ್ತಿದ್ದೆ. ಆದರೆ ನೀನು ನನ್ನ ಜನ್ಮದಿನದಂದೇ ಬಿಟ್ಟುಹೋದೆ’ ಎಂಬ ಭಾವನಾತ್ಮಕ ಸ್ಟೋರಿ ಹಾಕಿದ್ದಳು.
ಸಿಯಾಳ ಪ್ರಿಯಕರ ಚೇತನ್ ಚೌಧರಿ ಸಿಕ್ಕಿಬಿದ್ದಿದ್ದೂ ಒಂದು ಕುತೂಹಲಕಾರಿ ಕತೆ. ಸಿಯಾ ಹಾಗೂ ಭಾವಿ ಪತಿ ಕೇತನ್ನನ್ನು ಹುಡಿ ಧರಿಸಿದ ವ್ಯಕ್ತಿಯೊಬ್ಬ ಹಿಂಬಾಲಿಸುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿಗಳು ಸೆರೆಹಿಡಿದ್ದವು. ತಾಪಮಾನ 33 ಡಿಗ್ರಿ ಇದ್ದರೂ ಆ ವ್ಯಕ್ತಿ ಹೂಡಿ ಧರಿಸಿರುವುದು ಪೊಲೀಸರಿಗೆ ಅಸಾಮಾನ್ಯವೆನಿಸಿತು ಮತ್ತು ಅವನ ಒಟ್ಟಾರೆ ಅನುಮಾನಾಸ್ಪದ ಚಲನವಲನಗಳು ಸಂದೇಹ ಹುಟ್ಟು ಹಾಕಿ ಚೌಧರಿ ಬಂಧನಕ್ಕೆ ನಾಂದಿ ಹಾಡಿತು.
ಡಿಸೆಂಬರ್ 3, 2003 ರಂದು ಬೆಂಗಳೂರಿನ ಹೊರವರ್ತುಲ ರಸ್ತೆಯಲ್ಲಿ ಹತ್ಯೆಯೊಂದು ನಡೆದಿತ್ತು. ಗಿರೀಶ್ ಎಂಬಾತನ ಜೊತೆ ನಿಶ್ಚಿತಾರ್ಥವಾಗಿದ್ದರೂ, ಪ್ರಿಯಕರ ಅರುಣ್ ವರ್ಮಾ ಜತೆ ಮದುವೆಯಾಗಲು ಶುಭಾ ಎಂಬಾಕೆ ಸಂಚು ರೂಪಿಸಿ ರಿಂಗ್ ರೋಡಲ್ಲಿ ಹತ್ಯೆ ಮಾಡಿಸಿದ್ದಳು. ಪುಣೆ ಘಟನೆ ಇದನ್ನೇ ನೆನಪಿಸುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ