
ಚಂಡೀಗಢ: ಪಂಜಾಬ್ನ ಆಡಳಿತ ಪಕ್ಷ ಆಮ್ ಆದ್ಮಿಯ ಶಾಸಕ ಅಮೃತ್ ರತನ್ ಕೋಟ್ಫಟ್ಟಾ (Amrit Ratan Kotphatta)ಅವರನ್ನು ಲಂಚ ಪ್ರಕರಣದಲ್ಲಿ ರಾಜ್ಯ ವಿಚಕ್ಷಣಾ ದಳ ಗುರುವಾರ ಬಂಧಿಸಿದೆ. ಇತ್ತೀಚಿಗೆ ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ಬಂಧಿತರಾದ ರಶೀಮ್ ಗರ್ಗ್ (Rashim Garg) ಅವರೊಂದಿಗೆ ಅಮೃತ್ ಆಪ್ತ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಲಾಗಿತ್ತು. ಇದರ ಬೆನ್ನಲ್ಲೇ ಅಮೃತ್ರನ್ನು ಬಂಧಿಸಲಾಗಿದೆ. ಇವರನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, 4 ದಿನಗಳ ಕಾಲ ಕಸ್ಟಡಿಗೆ ಪಡೆಯಲಾಗಿದೆ. ಅಮೃತ್ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಪಟ್ಟ2ನೇ ಆಪ್ ಶಾಸಕರಾಗಿದ್ದಾರೆ. ಕಳೆದ ವರ್ಷ ಆರೋಗ್ಯ ಸಚಿವ ವಿಜಯ್ ಸಿಂಘ್ಲಾರನ್ನು (Vijay Singhla) ಬಂಧಿಸಲಾಗಿತ್ತು.
ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಆಪ್ತನ ವಿಚಾರಣೆ
ಮತ್ತೊಂದೆಡೆ ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯವು (ED.) ಗುರುವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಆಪ್ತ ಸಹಾಯಕ ಬಿಭವ್ ಕುಮಾರ್ನನ್ನು ವಿಚಾರಣೆ ನಡೆಸಿದೆ. ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಬಿಭವ್ ಕುಮಾರ್ ಸೇರಿದಂತೆ 36 ಜನ ಆರೋಪಿಗಳು ಸಾವಿರಾರು ಕೋಟಿ ರು.ಗಳ ಅಕ್ರಮ ನಡೆಸಲು ಬಳಸಿದ್ದರೆನ್ನಲಾದ 170 ಮೊಬೈಲ್ ಫೋನ್ಗಳನ್ನು ನಾಶಪಡಿಸಿದ ಆರೋಪ ಹೊತ್ತಿದ್ದಾರೆ. ಇ.ಡಿ.ಯು ಈ ಹಿಂದೆ ಕೋರ್ಟ್ಗೆ ಸಲ್ಲಿಸಿದ್ದ ಚಾರ್ಜ್ಶೀಟ್ನಲ್ಲಿ ಬಿಭವ್ ಕುಮಾರ್ ಮೊಬೈಲ್ನ ಐಎಮ್ಇಐ (IMEI) ಸಂಖ್ಯೆಯು 2021ರಿಂದ 2022ರ ವರೆಗೆ 4 ಬಾರಿ ಬದಲಾವಣೆಗೊಂಡಿದೆ ಎಂದು ಉಲ್ಲೇಖಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ