
ಚಂಡೀಗಢ(ಆ.25): ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ವಿರುದ್ಧ ನಾಲ್ವರು ಸಚಿವರು ಹಾಗೂ ಹಲವು ಕಾಂಗ್ರೆಸ್ ಶಾಸಕರು ಬಹಿರಂಗವಾಗಿಯೇ ಬಂಡಾಯ ಸಾರಿದ್ದು, ಮುಖ್ಯಮಂತ್ರಿ ಬದಲಾವಣೆಗೆ ಆಗ್ರಹಿಸಿದ್ದಾರೆ.
ಚುಣಾವಣೆಯಲ್ಲಿ ನೀಡಿದ್ದ ಭರವಸೆಯನ್ನು ಈಡೇರಿಸುವಲ್ಲಿ ಅಮರೀಂದರ್ ಸಿಂಗ್ ವಿಫಲರಾಗಿದ್ದು, ಅವರ ಮೇಲೆ ನಾವು ನಂಬಿಕೆಯನ್ನು ಕಳೆದುಕೊಂಡಿರುವುದಾಗಿ ಬಂಡಾಯ ಮುಖಂಡರು ಹೇಳಿದ್ದಾರೆ. ಅಲ್ಲದೇ ಈ ಸಂಬಂಧ ಹೈಕಮಾಂಡ್ ಮೊರೆ ಹೋಗಲು ತೀರ್ಮಾನಿಸಿದ್ದಾರೆ.
ಸಚಿವರಾದ ಸುಖಜಿಂದರ್ ರಂಧಾವಾ, ತೃಪ್್ತ ರಾಜಿಂದರ್ ಬಜ್ವಾ, ಸುಖಬಿಂದರ್ ಸರ್ಕಾರಿಯಾ, ಚರಣ್ಜಿತ್ ಚನ್ನಿ ಹಾಗೂ 23 ಮಂದಿ ಕಾಂಗ್ರೆಸ್ ಶಾಸಕರು ಬಜ್ವಾ ಅವರ ನಿವಾಸದಲ್ಲಿ ಸಭೆ ಸೇರಿ ಚರ್ಚೆ ನಡೆಸಿದ್ದಾರೆ. ಶೀಘ್ರದಲ್ಲೇ ನಿಯೋಗ ಸಮೇತ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಆಗಿ ಅಹವಾಲು ಸಲ್ಲಿಸಲಿದ್ದಾರೆ ಎಂದು ಎನ್ನಲಾಗಿದೆ.
ಮುಖ್ಯಮಂತ್ರಿ ಬದಲಾವಣೆ ವಿಚಾರ ಪಕ್ಷದ ಹೈಕಮಾಂಡ್ಗೆ ಬಿಟ್ಟಿದ್ದು. ಆದರೆ, ನಾವು ಅಮರೀಂದರ್ ಸಿಂಗ್ ಅವರಲ್ಲಿ ನಂಬಿಕೆ ಕಳೆದುಕೊಂಡಿದ್ದೇವೆ ಎಂದು ಸಚಿವರಾದ ಸುಖಜಿಂದರ್ ರಾಂಧವ್ ಹಾಗೂ ಚರಣ್ಜಿತ್ ಚನ್ನಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.
ಸಿಧು ಆಪ್ತರ ವಜಾಕ್ಕೆ ಆಗ್ರಹ:
ಇದೇ ವೇಳೆ ಕಾಶ್ಮೀರ ಹಾಗೂ ಪಾಕಿಸ್ತಾನದ ಕುರಿತಂತೆ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸಿಧು ಅವರ ಆಪ್ತರು ನೀಡಿರುವ ವಿವಾದಿತ ಹೇಳಿಕೆ ಪಕ್ಷದ ವರಿಷ್ಠರನ್ನು ಕೆರಳಿಸಿದೆ. ಅವರನ್ನು ವಜಾ ಮಾಡಬೇಕು ಎಂದು ಅಮರೀಂದರ್ ಸಿಂಗ್ ಅವರ ಬಣ ಆಗ್ರಹಿಸಿದೆ. ಈ ಸಂಬಂಧ ಸಿಧು ತಮ್ಮ ರಾಜಕೀಯ ಸಲಹೆಗಾರರಾದ ಮಾಲ್ವಿಂದರ್ ಸಿಂಗ್ ಮಾಲಿ ಹಾಗೂ ಪ್ಯಾರೆಲಾಲ್ ಗರ್ಗ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದಾರೆ. ಪಕ್ಷದ ಹೈಕಮಾಂಡ್ ಕೂಡ ಸಿಧು ಆಪ್ತರ ಬಗ್ಗೆ ಕೆರಳಿದೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ