ಪಂಜಾಬ್‌ ಮಾಜಿ ಸಿಎಂ ಚನ್ನಿ ಕೂಡ ಬಿಜೆಪಿಗೆ? ಜಲಂಧರ್‌ ಉಪಚುನಾವಣೆಯಲ್ಲಿ ಸ್ಪರ್ಧೆ ಸಾಧ್ಯತೆ

Published : Apr 09, 2023, 10:06 AM IST
ಪಂಜಾಬ್‌ ಮಾಜಿ ಸಿಎಂ ಚನ್ನಿ ಕೂಡ ಬಿಜೆಪಿಗೆ? ಜಲಂಧರ್‌ ಉಪಚುನಾವಣೆಯಲ್ಲಿ ಸ್ಪರ್ಧೆ ಸಾಧ್ಯತೆ

ಸಾರಾಂಶ

ಸಿಧುಗೂ ಚನ್ನಿಗೂ ಸಂಬಂಧ ಅಷ್ಟಕ್ಕಷ್ಟೇ. ಹೀಗಾಗಿ ಅವರು ಬಿಜೆಪಿ ಸೇರುವ ಸಾಧ್ಯತೆ ಇದೆ. ಈಗ ಜಲಂಧರ್‌ ವಿಧಾನಸಭೆ ಉಪಚುನಾವಣೆ ನಡೆಯಲಿದ್ದು, ಅಲ್ಲಿ ಸ್ಪರ್ಧಿಸುವ ಉತ್ಸುಕತೆ ಚನ್ನಿ ಅವರಿಗೆ ಇದೆ. ಅದಕ್ಕೂ ಮುನ್ನವೇ ಅವರು ಬಿಜೆಪಿ ಸೇರಬಹುದು ಎಂದು ಮೂಲಗಳು ಹೇಳಿವೆ.

ಜಲಂಧರ್‌ (ಏಪ್ರಿಲ್ 9, 2023): ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಕಿರಣ್‌ ಕುಮಾರ್‌ ರೆಡ್ಡಿ ಬಿಜೆಪಿ ಸೇರಿದ ಬೆನ್ನಲ್ಲೇ ಪಂಜಾಬ್‌ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಮುಖಂಡ ಚರಣ್‌ಜಿತ್‌ ಸಿಂಗ್‌ ಚನ್ನಿ ಕೂಡ ಕೇಸರಿ ಪಕ್ಷ ಸೇರುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ. ಇತ್ತೀಚೆಗೆ ಜೈಲಿನಲ್ಲಿದ್ದ ಪಂಜಾಬ್‌ ಪ್ರದೇಶ ಕಾಂಗ್ರೆಸ್‌ ಸಮಿತಿ ಮಾಜಿ ಅಧ್ಯಕ್ಷ ನವಜೋತ್‌ ಸಿಂಗ್‌ ಸಿಧು ಬಿಡುಗಡೆ ಆಗಿದ್ದು, ಮತ್ತೆ ಸಕ್ರಿಯ ರಾಜಕೀಯಕ್ಕೆ ಧುಮುಕುವ ಸುಳಿವು ನೀಡಿದ್ದಾರೆ. ಇದರ ಬೆನ್ನಲ್ಲೇ ಚನ್ನಿ ಬಿಜೆಪಿ ಸೇರುವ ಸಾಧ್ಯತೆ ಇದೆ. ಪಂಜಾಬ್‌ ಬಿಜೆಪಿಯ ಕೆಲವು ನಾಯಕರನ್ನು ಚನ್ನಿ ಇತ್ತೀಚೆಗೆ ಭೇಟಿ ಮಾಡಿದ್ದರು ಎಂದು ಮೂಲಗಳು ಹೇಳಿವೆ.

ಸಿಧುಗೂ (Navjot Singh Sidhu) ಚನ್ನಿಗೂ (Charanjit Singh Channi) ಸಂಬಂಧ ಅಷ್ಟಕ್ಕಷ್ಟೇ. ಹೀಗಾಗಿ ಅವರು ಬಿಜೆಪಿ (BJP) ಸೇರುವ ಸಾಧ್ಯತೆ ಇದೆ. ಈಗ ಜಲಂಧರ್‌ ವಿಧಾನಸಭೆ ಉಪಚುನಾವಣೆ (Jalandhar Vidhana Sabha By Election) ನಡೆಯಲಿದ್ದು, ಅಲ್ಲಿ ಸ್ಪರ್ಧಿಸುವ ಉತ್ಸುಕತೆ ಚನ್ನಿ ಅವರಿಗೆ ಇದೆ. ಅದಕ್ಕೂ ಮುನ್ನವೇ ಅವರು ಬಿಜೆಪಿ ಸೇರಬಹುದು ಎಂದು ಮೂಲಗಳು ಹೇಳಿವೆ.

ಇದನ್ನು ಓದಿ: ಕಾಂಗ್ರೆಸ್‌ಗೆ ದೊಡ್ಡ ಶಾಕ್‌: ಆಂಧ್ರ ಮಾಜಿ ಸಿಎಂ ಕಿರಣ್‌ ಕುಮಾರ್ ರೆಡ್ಡಿ ರಾಜೀನಾಮೆ; ಬಿಜೆಪಿಗೆ ಸೇರ್ಪಡೆ..!

ಕಳೆದ ಪಂಜಾಬ್‌ ಚುನಾವಣಾ ಸೋಲಿನ ನಂತರ ಚನ್ನಿ ನೇಪಥ್ಯಕ್ಕೆ ಸರಿದಿದ್ದು, ಬಹಿರಂಗವಾಗಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿಲ್ಲ. ಭಾರತ್‌ ಜೋಡೋ ಯಾತ್ರೆ ಸೇರಿದಂತೆ ಕೆಲವು ಸಂದರ್ಭದಲ್ಲಿ ಮಾತ್ರ ಕಾಣಿಸಿಕೊಂಡಿದ್ದರು.

ಇನ್ನು ಹಲವು ತಿಂಗಳ ಹಿಂದೆ ಪಂಜಾಬ್‌ ಮಾಜಿ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌ ಕೂಡ ಬಿಜೆಪಿ ಸೇರಿದ್ದರು. ಅಮರೀಂದರ್‌ ಉತ್ತರಾಧಿಕಾರಿಯಾಗಿ ಚನ್ನಿ ನೇಮಕವಾಗಿದ್ದರು. ಆದರೆ, ಬಿಜೆಪಿ ಸೇರುವ ಸುದ್ದಿ ಕೇವಲ ಊಹಾಪೋಹ, ಸುಳ್ಳು ಸುದ್ದಿ ಎಂದು ಪಂಜಾಬ್‌ ಮಾಜಿ ಸಿಎಂ ಚರಣ್‌ಸಿಂಗ್ ಸಿಂಗ್ ಚನ್ನಿ ರಾಷ್ಟ್ರೀಯ ಮಾಧ್ಯಮವೊಂದಕ್ಕೆ ಹೇಳಿದ್ದಾರೆ. 

ಇದನ್ನೂ ಓದಿ: ಒಂದೇ ವಾಕ್ಯದಲ್ಲಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ಆಂಧ್ರ ಮಾಜಿ ಸಿಎಂ!

ರಾಜಗೋಪಾಲಾಚಾರಿ ಮರಿ ಮೊಮ್ಮಗ ಕೇಶವನ್‌ ಬಿಜೆಪಿಗೆ
ನವದೆಹಲಿ: ಸ್ವಾತಂತ್ರ ಹೋರಾಟಗಾರ, ಭಾರತದ ಕೊನೆಯ ಗವರ್ನರ್‌ ಜನರಲ್‌ ಆಗಿದ್ದ ಸಿ.ರಾಜಗೋಪಾಲಾಚಾರಿ ಅವರ ಮರಿಮೊಮ್ಮಗ ಸಿ.ಆರ್‌ ಕೇಶವನ್‌ ಶನಿವಾರ ಬಿಜೆಪಿ ಸೇರ್ಪಡೆಯಾದರು. ತಮಿಳುನಾಡು ಮೂಲದ ಕೇಶವನ್‌ ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದು, ಇದೀಗ ಬಿಜೆಪಿ ಸೇರ್ಪಡೆ ದಕ್ಷಿಣದಲ್ಲಿ ಇನ್ನಷ್ಟು ಬೇರುಬಿಡುವ ಕಮಲ ಪಕ್ಷದ ಆಶಯಕ್ಕೆ ನೆರವಾಗಲಿದೆ ಎನ್ನಲಾಗಿದೆ. ಕಾಂಗ್ರೆಸ್‌ ನಾಯಕರಾದ ಎ.ಕೆ.ಆ್ಯಂಟನಿ ಪುತ್ರ ಅನಿಲ್‌, ಆಂಧ್ರದ ಮಾಜಿ ಸಿಎಂ, ಕಿರಣ್‌ಕುಮಾರ್‌ ರೆಡ್ಡಿ ಬಿಜೆಪಿ ಸೇರ್ಪಡೆ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಇದನ್ನೂ ಓದಿ: C R Kesavan: ಮಾಜಿ ಕಾಂಗ್ರೆಸ್‌ ನಾಯಕ ಸಿಆರ್‌ ಕೇಶವನ್‌ ಬಿಜೆಪಿಗೆ ಸೇರ್ಪಡೆ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!