ದೆಹಲಿಯಲ್ಲಿ ಕೊರೆಯುವ ಚಳಿ: ಪ್ರತಿಭಟನೆ ನಡೆಸುತ್ತಿದ್ದ ರೈತ ಸಾವು

Published : Dec 17, 2020, 04:57 PM ISTUpdated : Dec 17, 2020, 06:36 PM IST
ದೆಹಲಿಯಲ್ಲಿ ಕೊರೆಯುವ ಚಳಿ: ಪ್ರತಿಭಟನೆ ನಡೆಸುತ್ತಿದ್ದ ರೈತ ಸಾವು

ಸಾರಾಂಶ

ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತ ಮೃತಪಟ್ಟಿದ್ದಾರೆ. ಇದಕ್ಕೆ ವಿಪರೀತ ಚಳಿ ಕಾರಣ ಎನ್ನಲಾಗುತ್ತಿದೆ.

ನವದೆಹಲಿ(ಡಿ.17): ದೆಹಲಿ-ಹರಿಯಾಣ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಪಂಜಾಬ್‌ನ ರೈತ ಮೃತಪಟ್ಟಿದ್ದಾರೆ. ದೆಹಲಿಯ ಡಿಸೆಂಬರ್‌ ಅತಿ ಚಳಿಗೆ ರೈತ ಮೃತಪಟ್ಟಿರುವುದಾಗಿ ಹೇಳಲಾಗಿದೆ.

ಕೆಂದ್ರ ಸರ್ಕಾರದ ಕೃಷಿ ನೀತಿಗೆದುರಾಗಿ 22 ದಿನಗಳಿಂದ ಪ್ರತಿಭಟಿಸುತ್ತಿದ್ದ ಮೂರು ಮಕ್ಕಳ ತಂದೆ ನಿಧನರಾಗಿದ್ದಾರೆ. 10, 12, 14 ವರ್ಷದ ಮಕ್ಕಳನ್ನು ಅಗಲಿದ ರೈತ ದೆಹಲಿಯ ವಿಪರೀತ ಚಳಿಯಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಅಯೋಧ್ಯೆ ಮಸೀದಿಗೆ ಶಂಕುಸ್ಥಾಪನೆಗೆ ಡೇಟ್ ಫಿಕ್ಸ್, ಇದು ಬಾಬ್ರಿ ಮಸೀದಿಗಿಂತಲೂ ದೊಡ್ಡದು

ದೆಹಲಿ-ಹರಿಯಾಣ ಗಡಿಯಲ್ಲಿ ನಡೆದ ಪ್ರತಿಭಟನೆಯ ಕೇಂದ್ರ ಸ್ಥಳದಲ್ಲಿ ಸಿಖ್ ಪಾದ್ರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಕೆಲವೇ ಗಂಟೆಗಳ ನಂತರ ಈ ಸಾವಿನ ವರದಿಗಳು ಹೊರಬಿದ್ದಿದೆ.

ಹರಿಯಾಣದ ಗುರುದ್ವಾರದ ಅರ್ಚಕ ಬಾಬಾ ರಾಮ್ ಸಿಂಗ್ ಅವರು ಪ್ರತಿಭಟನೆಯನ್ನು ಬಲವಾಗಿ ಬೆಂಬಲಿಸಿದ್ದರು ಮತ್ತು ಸರ್ಕಾರದ ಅನ್ಯಾಯದ ಬಗ್ಗೆ ಕೋಪ ಮತ್ತು ನೋವು ಅನುಭವಿಸಿದ್ದೇನೆ ಎಂದು ಬರೆದಿದ್ದರು.

ಶಾಂತಗೊಂಡ ಫ್ರಾನ್ಸ್‌ನಲ್ಲಿ ಮತ್ತೆ ಆತಂಕ; ಅಧ್ಯಕ್ಷ ಇಮಾನ್ಯುಯೆಲ್ ಮ್ಯಾಕ್ರೋನ್‌ಗೆ ಕೊರೋನಾ!

ನವೆಂಬರ್ ಅಂತ್ಯದಲ್ಲಿ ಆಂದೋಲನ ಪ್ರಾರಂಭವಾದಾಗಿನಿಂದ 20 ಕ್ಕೂ ಹೆಚ್ಚು ಪ್ರತಿಭಟನಾಕಾರರು ಸಾವನ್ನಪ್ಪಿದ್ದಾರೆ ಎಂದು ರೈತ ಗುಂಪುಗಳು ಹೇಳಿಕೊಂಡಿವೆ. ದೆಹಲಿ ಬಳಿಯ ಹೆದ್ದಾರಿಗಳಲ್ಲಿ ವಿವಿಧ ಸ್ಥಳಗಳನ್ನು ಆಕ್ರಮಿಸಿಕೊಂಡಿರುವ ರೈತರು ಹಲವಾರು ಹೊದಿಕೆಗಳು ಕಂಬಳಿಯೊಂದಿಗೆ ಭೇಟಿ ನೀಡುತ್ತಿದ್ದಾರೆ. ಪ್ರತಿಭಟನಾಕಾರರು ಬೆಚ್ಚಗಿರಲು ಬೆಂಕಿಯನ್ನು ಉರಿಸಿ ಚಳಿ ಕಾಯಿಸಿಕೊಳ್ಳುತ್ತಿರುವುದನ್ನೂ ಕಾಣಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..