Punjab Elections: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಚನ್ನಿ, ಸಿದ್ದುಗೆ ಟಿಕೆಟ್ ಸಿಕ್ಕಿದೆ ನೋಡಿ

Published : Jan 15, 2022, 04:33 PM ISTUpdated : Jan 15, 2022, 04:39 PM IST
Punjab Elections: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಚನ್ನಿ, ಸಿದ್ದುಗೆ ಟಿಕೆಟ್ ಸಿಕ್ಕಿದೆ ನೋಡಿ

ಸಾರಾಂಶ

* ಪಂಜಾಬ್ ಚುನಾವಣಾ ಕಣದಲ್ಲಿ ಪಕ್ಷಗಳ ಕಸರತ್ತು * ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್ * ಚನ್ನಿ, ಸಿದ್ದು ಸ್ಪರ್ಧೆ ಯಾವ ಕ್ಷೇತ್ರದಿಂದ

ಚಂಡೀಗಢ(ಜ.15): ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ 86 ಸ್ಥಾನಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ಇದರಲ್ಲಿ ಸಿಎಂ ಚರಂಜಿತ್ ಸಿಂಗ್ ಚನ್ನಿ ಚಮ್ಕೌರ್ ಸಾಹಿಬ್ (ಎಸ್‌ಸಿ)ಯಿಂದ ಸ್ಪರ್ಧಿಸಲಿದ್ದಾರೆ. ರಾಜ್ಯಾಧ್ಯಕ್ಷ ನವಜೋತ್ ಸಿಂಗ್ ಸಿಧು ಅಮೃತಸರ ಪೂರ್ವದಿಂದ ಸ್ಪರ್ಧಿಸಲಿದ್ದಾರೆ. ಪ್ರತಾಪ್ ಸಿಂಗ್ ಬಾಜ್ವಾ ಕಡಿಯಾನ್‌ನಿಂದ ಮತ್ತು ಗಾಯಕ ಸಿಧು ಮೂಸೆವಾಲಾ ಮಾನಸಾದಿಂದ ಸ್ಪರ್ಧಿಸಲಿದ್ದಾರೆ. ಇದಲ್ಲದೇ ನಟ ಸೋನು ಸೂದ್ ಸಹೋದರಿ ಮಾಳವಿಕಾ ಸೂದ್ ಅವರಿಗೆ ಪಕ್ಷ ಮೊಗದಿಂದ ಟಿಕೆಟ್ ನೀಡಿದೆ. ಡೇರಾ ಬಾಬಾ ನಾನಕ್‌ನಿಂದ ಗೃಹ ಸಚಿವ ಸುಖಜೀಂದರ್ ಸಿಂಗ್ ರಾಂಧವಾ, ಅಮೃತಸರ ಸೆಂಟ್ರಲ್‌ನಿಂದ ಪಂಜಾಬ್ ಉಪ ಮುಖ್ಯಮಂತ್ರಿ ಓಂ ಪ್ರಕಾಶ್ ಸೋನಿ ಅವರನ್ನು ಕಣಕ್ಕಿಳಿಸಲಾಗಿದೆ. ಸನೋರ್ ವಿಧಾನಸಭಾ ಕ್ಷೇತ್ರದಿಂದ ಹರಿಂದರ್ ಪಾಲ್ ಸಿಂಗ್ ಮಾನ್ ಕಣಕ್ಕಿಳಿದಿದ್ದಾರೆ.

ಈ ಅಭ್ಯರ್ಥಿಗಳಿಗೂ ಟಿಕೆಟ್

* ಸುಲ್ತಾನಪುರದಿಂದ ನರೇಶ್ ಪುರಿಗೆ

* ಪಠಾಣ್‌ಕೋಟ್‌ನಿಂದ ಅಮಿತ್ ವಿಜ್

* ಗುರುದಾಸ್‌ಪುರದಿಂದ ಬರಿಂದರ್ಜಿತ್ ಸಿಂಗ್ ಪಹ್ರಾ

* ದೀನಾನಗರದ ಅರುಣಾ ಚೌಧರಿ

* ಶ್ರೀಹರಗೋವಿಂದಪುರದಿಂದ ಮನದೀಪ್ ಸಿಂಗ್ ರಂಗರ್

* ರಾಜಿಂದರ್ ಸಿಂಗ್ ಬಾಜ್ವಾ ಫತೇಘರ್ ಚುಡಿಯಾನ್‌ನಿಂದ ಕಣಕ್ಕಿಳಿಯಲಿದ್ದಾರೆ

ಫೆಬ್ರವರಿ 14 ರಂದು ಮತದಾನ, ಮಾರ್ಚ್ 10 ರಂದು ಫಲಿತಾಂಶ

ಪಂಜಾಬ್‌ನಲ್ಲಿ ಫೆಬ್ರವರಿ 14 ರಂದು ಮತದಾನ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ. 2017ರ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿತ್ತು. ಪಕ್ಷ 77 ಸ್ಥಾನಗಳನ್ನು ಗೆದ್ದಿತ್ತು. ಆಮ್ ಆದ್ಮಿ ಪಕ್ಷ 20 ಸ್ಥಾನಗಳನ್ನು ಗೆಲ್ಲುವ ಮೂಲಕ ಎರಡನೇ ಸಂಖ್ಯೆಯ ಪಕ್ಷವಾಯಿತು. ಅದೇ ಸಮಯದಲ್ಲಿ ಶಿರೋಮಣಿ ಅಕಾಲಿದಳಕ್ಕೆ ಕೇವಲ 15 ಸ್ಥಾನಗಳು ಮತ್ತು ಬಿಜೆಪಿಗೆ ಮೂರು ಸ್ಥಾನಗಳು ದೊರೆತವು. ಪಂಜಾಬ್‌ನಲ್ಲಿ 117 ವಿಧಾನಸಭಾ ಸ್ಥಾನಗಳಿವೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!