ಕರ್ನಾಲ್‌ ಡೀಸಿಗೆ ಕಡ್ಡಾಯ ರಜೆ: ರೈತ ಪ್ರತಿಭಟನೆ ಅಂತ್ಯ!

Published : Sep 12, 2021, 11:08 AM IST
ಕರ್ನಾಲ್‌ ಡೀಸಿಗೆ ಕಡ್ಡಾಯ ರಜೆ: ರೈತ ಪ್ರತಿಭಟನೆ ಅಂತ್ಯ!

ಸಾರಾಂಶ

* ಕಳೆದ ತಿಂಗಳು ಹರ್ಯಾಣದಲ್ಲಿ ನಡೆದ ಪೊಲೀಸ್‌ ಮತ್ತು ರೈತರ ನಡುವೆ ನಡೆದ ಸಂಘರ್ಷ * ಕರ್ನಾಲ್‌ ಡೀಸಿಗೆ ಕಡ್ಡಾಯ ರಜೆ: ರೈತ ಪ್ರತಿಭಟನೆ ಅಂತ್ಯ

ಕರ್ನಾಲ್‌(ಸೆ.12): ಕಳೆದ ತಿಂಗಳು ಹರ್ಯಾಣದಲ್ಲಿ ನಡೆದ ಪೊಲೀಸ್‌ ಮತ್ತು ರೈತರ ನಡುವೆ ನಡೆದ ಸಂಘರ್ಷವನ್ನು ನ್ಯಾಯಾಂಗ ತನಿಖೆ ನಡೆಸಲು ಸರ್ಕಾ​ರ ಆದೇಶಿಸಿದೆ. ಜೊತೆಗೆ ರೈತರ ಮೇಲೆ ಲಾಠಿಚಾರ್ಜ್‌ಗೆ ಆದೇಶಿಸಿದ್ದ ಐಎಎಸ್‌ ಅಧಿಕಾರಿಯನ್ನು ರಜೆಯ ಮೇಲೆ ಕಳುಹಿಸಲಾಗಿದೆ. ಹಾಗಾಗಿ ಕರ್ನಾಲ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರು ತಮ್ಮ ಪ್ರತಿಭಟನೆಯನ್ನು ಅಂತ್ಯಗೊಳಿಸಿದ್ದಾರೆ.

ಜಿಲ್ಲಾ​ಧಿ​ಕಾ​ರಿ ಆಯುಷ್‌ ಸಿನ್ಹಾ ರೈತರ ಮೇಲೆ ಲಾಠಿ ಪ್ರಹಾರ ನಡೆಸುವಂತೆ ಪೊಲೀಸರಿಗೆ ಆದೇಶ ನೀಡಿದ್ದರು. ಅವರನ್ನು ಅಮಾನತು ಮಾಡಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ರೈತರು ಕರ್ನಾಲ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು.

ಪ್ರತಿ​ಭ​ಟ​ನೆಗೆ ಸರ್ಕಾರ ಮಣಿ​ದಿದ್ದು, ‘ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಈ ತನಿಖೆ ನಡೆಯಲಿದೆ. ಒಂದು ತಿಂಗಳಲ್ಲಿ ತನಿಖೆ ಪೂರ್ಣಗೊಳ್ಳಲಿದೆ ಅಲ್ಲಿ​ಯ​ವ​ರೆಗೆ ಸಿನ್ಹಾ ರಜೆಯಲ್ಲಿ ಇರಲಿದ್ದಾರೆ’ ಎಂದು ಹರ್ಯಾಣ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ದೇವೇಂದ್ರ ಸಿಂಗ್‌ ಹೇಳಿದ್ದಾರೆ. ನಂತರ ರೈತ ನಾಯಕ ಗುರ್‌ನಾಮ್‌ ಸಿಂಗ್‌ ಚೌದಾನಿ ಪ್ರತಿಭಟನೆ ಅಂತ್ಯಗೊಳಿಸುತ್ತದ್ದೇವೆ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

PM Modi Israel visit: ಭಯೋತ್ಪಾದನೆ ವಿರುದ್ಧ ನಾವು ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತೇವೆ: ಇಸ್ರೇಲ್‌ ನೆಲದಲ್ಲಿ ನಿಂತು ಪಾಕ್‌ಗೆ ಮೋದಿ ಎಚ್ಚರಿಕೆ!
Food Adulteration: ಹೋಳಿ ಹಬ್ಬದ ಹೊತ್ತಲ್ಲೇ ಆಹಾರ ಕಲಬೆರಕೆ ವಿರುದ್ಧ ದೆಹಲಿಯಲ್ಲಿ ಬಿಗ್ ಆಪರೇಷನ್!