ಹಿಂದೂ ಮಹಾಸಾಗರದಲ್ಲಿ 120 ಯುದ್ಧನೌಕೆಗಳ ಠಿಕಾಣಿ!

Published : Dec 12, 2020, 01:05 PM IST
ಹಿಂದೂ ಮಹಾಸಾಗರದಲ್ಲಿ 120 ಯುದ್ಧನೌಕೆಗಳ ಠಿಕಾಣಿ!

ಸಾರಾಂಶ

ಹಿಂದೂ ಮಹಾಸಾಗರದಲ್ಲಿ 120 ಯುದ್ಧನೌಕೆಗಳ ಠಿಕಾಣಿ| ಹಿಡಿತಕ್ಕಾಗಿ ವಿವಿಧ ದೇಶಗಳ ಪೈಪೋಟಿ| ಸಶಸ್ತ್ರ ಪಡೆಗಳ ಮುಖ್ಯಸ್ಥ ಜ| ರಾವತ್‌ ಹೇಳಿಕೆ| ಭಾರತಕ್ಕೆ ತೀರಾ ಮಹತ್ವವಾದ ಪ್ರದೇಶ ಇದು

ನವದೆಹಲಿ(ಡಿ.12): ಹಿಂದೂ ಮಹಾಸಾಗರ ಪ್ರದೇಶದಲ್ಲಿ ಪ್ರಾಬಲ್ಯ ಸಾಧಿಸಲು ಪೈಪೋಟಿ ಹೆಚ್ಚಿದೆ. ಈಗ ವಿವಿಧ ದೇಶಗಳ 120 ಯುದ್ಧನೌಕೆಗಳು ಅಲ್ಲಿ ಬೀಡುಬಿಟ್ಟಿವೆ ಎಂದು ಭಾರತದ ಸಶಸ್ತ್ರಪಡೆಗಳ ಮುಖ್ಯಸ್ಥ ಜ| ಬಿಪಿನ್‌ ರಾವತ್‌ ಹೇಳಿದ್ದಾರೆ.

ಜಾಗತಿಕ ಭದ್ರತಾ ಶೃಂಗದಲ್ಲಿ ಶುಕ್ರವಾರ ಆಶಯ ಭಾಷಣ ಮಾಡಿದ ಅವರು, ‘ಹಿಂದೂ ಮಹಾಸಾಗರದ ವ್ಯೂಹಾತ್ಮಕ ಪ್ರದೇಶಗಳ ಮೇಲೆ ಹಿಡಿತ ಸಾಧಿಸಲು ಪೈಪೋಟಿ ನಡೆದಿದೆ. ಇದು ಮುಂಬರುವ ದಿನಗಳಲ್ಲಿ ಇನ್ನೂ ತೀವ್ರಗೊಳ್ಳಲಿದೆ. ಈಗ 120 ಯುದ್ಧನೌಕೆಗಳು ವಿವಿಧ ಉದ್ದೇಶಗಳಿಗೆಂದು ಇಲ್ಲಿ ಬೀಡು ಬಿಟ್ಟಿವೆ. ಆದಾಗ್ಯೂ ಈ ಪ್ರದೇಶವು ಈವರೆಗೂ ಶಾಂತವಾಗಿದೆ’ ಎಂದು ಹೇಳಿದರು.

ಹಿಂದೂ ಮಹಾಸಾಗರವು ಭಾರತದ ‘ಬ್ಯಾಕ್‌ಯಾರ್ಡ್‌’ (ಹಿತ್ತಿಲು) ಎಂದು ಪರಿಗಣಿತವಾಗಿದೆ. ಇದು ಭಾರತಕ್ಕೆ ವ್ಯೂಹಾತ್ಮಕವಾಗಿ ಮಹತ್ವದ್ದಾಗಿದೆ. ಈ ಪ್ರದೇಶದಲ್ಲಿ ಚೀನಾ ಪ್ರಾಬಲ್ಯ ಸಾಧಿಸಲು ಅವಿರತ ಯತ್ನ ನಡೆಸಿದೆ ಎಂಬುದು ಇಲ್ಲಿ ಗಮನಾರ್ಹ.

ಇನ್ನು ತಮ್ಮ ಭಾಷಣದಲ್ಲಿ ಚೀನಾ ಬಗ್ಗೆ ಪರೋಕ್ಷವಾಗಿ ಪ್ರಸ್ತಾಪಿಸಿದ ಜ| ರಾವತ್‌, ‘ಭಾರತವು ತನ್ನ ‘ಕಠಿಣ ನೆರೆದೇಶ’ ಹಾಗೂ ‘ಗಡಿ ಸಂಘರ್ಷ’ ಹೊಂದಿದ್ದರೂ ಜಾಗತಿಕ ಶಕ್ತಿಯಾಗಿ ರೂಪುಗೊಳ್ಳಬೇಕಿದೆ. ಇದಕ್ಕಾಗಿ ಶಾಂತ ಹಾಗೂ ಸ್ಥಿರ ಭದ್ರತಾ ವಾತಾವರಣ ಬೇಕು. ನಮ್ಮ ವ್ಯೂಹಾತ್ಮಕ ಸ್ವಾಯತ್ತೆಯನ್ನು ಹಾಗೂ ಬಲವಾದ ಪ್ರಾದೇಶಿಕ ಸಹಕಾರವನ್ನು ಹೊಂದಬೇಕು’ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

India Latest News Live: ಭಾರತ-ಆಫ್ರಿಕಾ ಫೈನಲ್ ಫೈಟ್ - ಟೆಸ್ಟ್ ಸೋಲಿಗೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಡಿಕೆಗೆ ದಿಲ್ಲಿ ಪೊಲೀಸ್‌ ನೋಟಿಸ್‌