
ನವದೆಹಲಿ(ಜು. 29) ರಫೇಲ್ ಯುದ್ದ ವಿಮಾನ ಭಾರತಕ್ಕೆ ಬಂದಿದೆ. ರಫೇಲ್ ಯುದ್ದ ವಿಮಾನ ಭಾರತಕ್ಕೆ ಬಂದಿದ್ದಕ್ಕೆಏರ್ ಫೋಸ್೯ ಸಿಬ್ಬಂದಿಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿನಂದಿಸಿದ್ದಾರೆ.
ಇದರೊಂದಿಗೆ ನಯವಾಗಿ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿರುವ ಗಾಂಧಿ ಸೋಶಿಯಲ್ ಮೀಡಿಯಾ ಮೂಲಕ ಪ್ರಶ್ನೆಗಳ ಬಾಣ ಎಸೆದಿದ್ದಾರೆ. ರಾಹುಲ್ ಗಾಂಧಿ ಕೇಂದ್ರ ಸರ್ಕಾರಕ್ಕೆ ಹಲವು ಪ್ರಶ್ನೆ ಕೇಳಿದ್ದಾರೆ.
'ರಾಹುಲ್ ಗಾಂಧಿ ಭವಿಷ್ಯ ಈಗಾಗಲೇ ಮುಗಿದಿದೆ'
ರಫೇಲ್ ಯುದ್ಧ ವಿಮಾನದ ವಿಚಾರದಲ್ಲಿ ಕೇಂದ್ರ ಸರ್ಕಾರ್ ಮೇಲೆ ಮೊದಲಿನಿಂದಲೂ ರಾಹುಲ್ ಗಾಂಧಿ ಆರೋಪ ಮಾಡಿಕೊಂಡೇ ಬಂದಿದ್ದಾರೆ. ಉತ್ತರ ಕೊಡಿ ಎಂದು ಕೇಂದ್ರ ಸರ್ಕಾರದ ಮೇಲೆ ಹಲವು ಸಾರಿ ಮುಗಿಬಿದ್ದಿದ್ದಾರೆ. ಈಗ ಮತ್ತೆ ಪ್ರಶ್ನೆಗಳನ್ನು ಮುಂದೆ ಇಟ್ಟಿದ್ದಾರೆ.
* 526 ಕೋಟಿ ರುಪಾಯಿ ಬೆಲೆ ಬಾಳುವ ಒಂದೊಂದು ವಿಮಾನಕ್ಕೆ 1670 ಕೋಟಿ ನೀಡಿದ್ದು ಯಾಕೆ?
* 126 ರ ಯುದ್ದ ವಿಮಾನಗಳ ಬದಲಾಗಿ 36 ಖರೀದಿ ಮಾಡಿದ್ದು ಯಾಕೆ?
* ಎಚ್ ಎ ಎಲ್ ಗೆ ಬದಲಾಗಿ ದಿವಾಳಿಯಾಗಿರುವ ಅನಿಲ್ ಅಂಬಾನಿಗೆ 33 ಸಾವಿರ ಕೋಟಿ ಗುತ್ತಿಗೆ ಕೊಟ್ಟಿದ್ದು ಯಾಕೆ?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ