
ಥಾಣೆ (ಆ.21): ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬದ್ಲಾಪುರದ ಪ್ರತಿಷ್ಠಿತ ಶಾಲೆಯೊಂದಲ್ಲಿ ನರ್ಸರಿ ಓದುತ್ತಿರುವ ಇಬ್ಬರು ಮಕ್ಕಳ ಮೇಲೆ ಅದೇ ಶಾಲೆಯ ಗುಮಾಸ್ತ ಲೈಂಗಿಕ ದೌರ್ಜನ್ಯ ಎಸಗಿದ ಭೀಕರ ಘಟನೆ ನಡೆದಿದೆ. ಆ.17ರಂದು ಶಾಲೆಯ ಶೌಚಾಲಯದಲ್ಲಿ ಆರೋಪಿ, 3 ಮತ್ತು 4 ವರ್ಷದ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ.
ಮಕ್ಕಳು ಪೋಷಕರಿಗೆ ವಿಷಯ ತಿಳಿಸಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದ್ದು, ಅದಾದ ಬಳಿಕ ಗುಮಾಸ್ತನನ್ನು ಬಂಧಿಸಲಾಗಿದೆ. ಆದರೆ ಈ ಸುದ್ದಿ ಮಂಗಳವಾರ ಒಬ್ಬರಿಂದ ಒಬ್ಬರಿಗೆ ಹಬ್ಬಿ ಸಾವಿರಾರು ಜನರು ಬೀದಿಗಿಳಿದು ಹೋರಾಟ ಮಾಡಿದ್ದಾರೆ. ಶಾಲೆಗೆ ನುಗ್ಗಿದ ಪೋಷಕರು ಮತ್ತು ಸಾರ್ವಜನಿಕರು ಕಟ್ಟಡ ಧ್ವಂಸ ಮಾಡಿದ್ದಾರೆ. ಜೊತೆಗೆ ಸಮೀಪದಲ್ಲೇ ಇದ್ದ ರೈಲ್ವೆ ನಿಲ್ದಾಣದ ಮೇಲೂ ದಾಳಿ ನಡೆಸಿ, ರೈಲು ತಡೆ ನಡೆಸಿದ್ದಾರೆ. ಹೀಗಾಗಿ ಬದ್ಲಾಪುರ ಮಾರ್ಗವಾಗಿ ಚಲಿಸಬೇಕಿದ್ದ ಹಲವು ರೈಲುಗಳ ಸಂಚಾರ ಬದಲಿಸಲಾಗಿದೆ.
ಈ ನಡುವೆ ಪೋಷಕರ ಆಕ್ರೋಶಕ್ಕೆ ಬೆಚ್ಚಿದ್ದ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲ ಹಾಗೂ ಇಬ್ಬರು ಸಿಬ್ಬಂದಿ ಅಮಾನತು ಮಾಡಿದೆ. ಈ ನಡುವೆ ಘಟನೆ ಕುರಿತು ದೂರು ನೀಡಿದರೂ ಕ್ರಮ ಕೈಗೊಳ್ಳದ ಸ್ಥಳೀಯ ಪೊಲೀಸ್ ಠಾಣೆಯ ಸ್ಟೇಷನ್ ಇನ್ಚಾರ್ಸ್ ಅನ್ನು ವರ್ಗ ಮಾಡಲಾಗಿದೆ.
ಹುಡುಗಿಯರು ಲೈಂಗಿಕ ಕಾಮನೆ ನಿಯಂತ್ರಿಸಿಕೊಳ್ಳಬೇಕು ಎಂಬ ಆದೇಶ ರದ್ದು: ಸುಪ್ರೀಂ ಕೋರ್ಟ್
ಇದೇ ವೇಳೆ ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಪ್ರಕರಣದ ತನಿಖೆಗೆ ಎಸ್ಟಿಐ ರಚನೆ ಮಾಡಲಾಗುವುದು. ಶೀಘ್ರ ತನಿಖೆಗೆ ಮುಕ್ತಾಯಕ್ಕೂ ಕ್ರಮ ಕೈಗೊಳ್ಳಲಾಗುವುದು, ಇದಕ್ಕಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಿಸಲಾಗುವುದು. ಆರೋಪಿ ವಿರುದ್ಧ ಅತ್ಯಾಚಾರದ ಪ್ರಕರಣ ದಾಖಲಿಗೂ ಪೊಲೀಸರಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ