ಅತೃಪ್ತರ ಸಂಧಾನ ದಿನವೇ ರಾಹುಲ್‌ ಆಪ್ತೆ ರಾಜೀನಾಮೆ!

Published : Dec 20, 2020, 11:25 AM IST
ಅತೃಪ್ತರ ಸಂಧಾನ ದಿನವೇ  ರಾಹುಲ್‌ ಆಪ್ತೆ ರಾಜೀನಾಮೆ!

ಸಾರಾಂಶ

ಅತೃಪ್ತರ ಸಂಧಾನ ದಿನವೇ ರಾಹುಲ್‌ ಆಪ್ತೆ ರಾಜೀನಾಮೆ| ಎನ್‌ಎಸ್‌ಯುಐ ಅಧ್ಯಕ್ಷ ಸ್ಥಾನಕ್ಕೆ ರುಚಿ ಗುಡ್‌ಬೈ

ನವದೆಹಲಿ(ಡಿ.20): ನಾಯಕತ್ವದ ವಿರುದ್ಧ ದನಿ ಎತ್ತಿದ್ದ ಮುಖಂಡರ ಜತೆ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಾತುಕತೆ ನಡೆಸಿದ ದಿನವೇ ಪಕ್ಷದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಕಾಂಗ್ರೆಸ್‌ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಆಪ್ತೆಯಾಗಿರುವ ರುಚಿ ಗುಪ್ತಾ ಅವರು ಪಕ್ಷದ ವಿದ್ಯಾರ್ಥಿ ವಿಭಾಗವಾದ ಎನ್‌ಎಸ್‌ಯುಐಗೆ ಶನಿವಾರ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರು ಸಂಘಟನಾತ್ಮಕ ಬದಲಾವಣೆ ತರಲು ನಿರಂತರವಾಗಿ ವಿಳಂಬ ಮಾಡುತ್ತಿದ್ದಾರೆ. ಇದರಿಂದ ಪಕ್ಷಕ್ಕೆ ಹಾನಿಯಾಗುತ್ತಿದೆ ಎಂದು ಪಕ್ಷದ ಜಂಟಿ ಕಾರ್ಯದರ್ಶಿ ಕೂಡ ಆಗಿರುವ ರುಚಿ ಗುಪ್ತಾ ಅವರು ಹೇಳಿದ್ದಾರೆ.

ರಾಜೀನಾಮೆ ನೀಡಿದ್ದೇನೆ ಎಂದು ವಿಷಾದದಿಂದ ಪ್ರಕಟಿಸುತ್ತೇನೆ. ಅವಕಾಶ ನೀಡಿದ ರಾಹುಲ್‌ ಹಾಗೂ ಸೋನಿಯಾ ಅವರಿಗೆ ಆಭಾರಿಯಾಗಿದ್ದೇನೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಲಿಯೋನಲ್ ಮೆಸ್ಸಿಗೆ ಪಾಸ್ ವೈಡ್ ಪಾಸ್ ಕೊಟ್ಟು ವೈರಲ್ ಆದ ಸಿಎಂ ರೇವಂತ್ ರೆಡ್ಡಿ
ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಬಿಹಾರದ ಸಚಿವ ನಿತಿನ್ ನಬಿ ಆಯ್ಕೆ, ಶುಭಕೋರಿದ ಜೆಪಿ ನಡ್ಡಾ