‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!

‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!

Published : May 23, 2026, 02:50 PM IST

ಪ್ರಧಾನಿ ಮೋದಿಯವರ ಇಟಲಿ ಪ್ರವಾಸ ಮತ್ತು 'ಮೆಲೋಡಿ' ಘಟನೆಯನ್ನು 'ನಾಟಕ' ಎಂದು ಕರೆದ ರಾಹುಲ್ ಗಾಂಧಿ, ಮೋದಿ ಮತ್ತು ಅಮಿತ್ ಶಾ ಅವರನ್ನು 'ದೇಶದ್ರೋಹಿಗಳು' ಎಂದು ತೀವ್ರವಾಗಿ ಟೀಕಿಸಿದ್ದಾರೆ. ಆರ್ಥಿಕ ಬಿಕ್ಕಟ್ಟಿನ ನಡುವೆ ಪ್ರಧಾನಿಯ ವಿದೇಶಿ ಪ್ರವಾಸವನ್ನು ಪ್ರಶ್ನಿಸಿದ್ದಾರೆ.

ನವದೆಹಲಿ(ಮೇ.23):  ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಅವರನ್ನು 'ದೇಶದ್ರೋಹಿಗಳು. ಎಂದು ಕರೆದಿದ್ದಾರೆ ಮತ್ತು "ಮೆಲೋಡಿ" (Melodi) ಕೃತ್ಯವನ್ನು "ನೌಟಂಕಿ (ನಾಟಕ)" ಎಂದು ಟೀಕಿಸಿದ್ದಾರೆ. ಕಾಂಗ್ರೆಸ್ ನಾಯಕನ ಈ ಹೇಳಿಕೆಗೆ ತಿರುಗೇಟು ನೀಡಿರುವ ಭಾರತೀಯ ಜನತಾ ಪಾರ್ಟಿ (ಬಿಜೆಪಿ), ಇದು "ಖೇದಕರ" ಮತ್ತು "ಅವರ ಅರಾಜಕ ಹಾಗೂ ವಿಭಜಕ ಮನಸ್ಥಿತಿಯನ್ನು ಬಹಿರಂಗಪಡಿಸುವಂತಹದ್ದಾಗಿದೆ" ಎಂದು ಕರೆದಿದೆ.

ಪ್ರಧಾನಿ ಮೋದಿ ಅವರು ಇಟಲಿ ಪ್ರವಾಸದ ಅಂತಿಮ ಹಂತದಲ್ಲಿರುವಾಗ, ತಮ್ಮ ಇಟಲಿ ದೇಶದ ಕೌಂಟರ್‌ಪಾರ್ಟ್ (ಪ್ರಧಾನಿ) ಜಾರ್ಜಿಯಾ ಮೆಲೋನಿ ಅವರಿಗೆ 'ಮೆಲೋಡಿ ಟಾಫಿ'ಗಳನ್ನು (ಮಿಠಾಯಿ) ಉಡುಗೊರೆಯಾಗಿ ನೀಡಿದ ಅವರ ಕೃತ್ಯವು ಪ್ರಮುಖ ಗುರಿಯಾಗಿ ಹೊರಹೊಮ್ಮಿತು. ಈ ಕುರಿತು ಬೆಟ್ಟು ಮಾಡಿದ ರಾಹುಲ್, "ನಮ್ಮ ತಲೆಯ ಮೇಲೆ ಆರ್ಥಿಕ ಬಿರುಗಾಳಿ ಬೀಸುತ್ತಿದೆ, ಆದರೆ ನಮ್ಮ ಪ್ರಧಾನಿ ಇಟಲಿಗೆ ಹೋಗಿ ಸಿಹಿ ಹಂಚುತ್ತಿದ್ದಾರೆ!" ಎಂದು ಲೇವಡಿ ಮಾಡಿದರು.

Rahul Gandhi: ಪತ್ರಕರ್ತರು ಪ್ರಶ್ನೆ ಕೇಳಿದಾಗ ಪ್ರಧಾನಿ ಮೋದಿ ಓಡಿಹೋಗಿದ್ದೇಕೆ? ರಾಹುಲ್ ಗಾಂಧಿ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಮಧ್ಯೆ ಇಂಧನ ಉಳಿಸುವಂತೆ ಮತ್ತು ವಿದೇಶಿ ಪ್ರವಾಸಗಳನ್ನು ನಿರ್ಬಂಧಿಸುವಂತೆ ಜನರಿಗೆ ಮನವಿ ಮಾಡಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಐದು ದೇಶಗಳ ಪ್ರವಾಸ ಕೈಗೊಂಡಿರುವುದು ವಿರೋಧ ಪಕ್ಷಗಳ ತೀವ್ರ ವಾಗ್ದಾಳಿಗೆ ಕಾರಣವಾಗಿದೆ.

 

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
Read more