ಅಗ್ನಿವೀರ್ ಯೋಜನೆ ವಿರುದ್ಧ ರಾಷ್ಟ್ರಪತಿಗೆ ರಾಹುಲ್‌ ಗಾಂಧಿ ದೂರು!

Published : Jun 02, 2024, 06:34 AM IST
ಅಗ್ನಿವೀರ್ ಯೋಜನೆ ವಿರುದ್ಧ ರಾಷ್ಟ್ರಪತಿಗೆ ರಾಹುಲ್‌ ಗಾಂಧಿ ದೂರು!

ಸಾರಾಂಶ

: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ,ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ, ಅಗ್ನಿಪಥ್ ಯೋಜನೆಯ ವಿರುದ್ಧ ಪತ್ರ ಬರೆದಿದ್ದಾರೆ. ‘ಈ ಯೋಜನೆಯ ಸ್ವರೂಪದಲ್ಲಿ ತಾರತಮ್ಯವಿದ್ದು, ಹುತಾತ್ಮ ಸೈನಿಕರ ಕುಟುಂಬಗಳಿಗೆ ನೀಡಲಾಗುವ ಸೌಲಭ್ಯದಲ್ಲಿ ತಾರತಮ್ಯವಿದ್ದು, ಮಧ್ಯಪ್ರವೇಶಿಸಿ, ನ್ಯಾಯ ನೀಡಿ’ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ,ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ, ಅಗ್ನಿಪಥ್ ಯೋಜನೆಯ ವಿರುದ್ಧ ಪತ್ರ ಬರೆದಿದ್ದಾರೆ. ‘ಈ ಯೋಜನೆಯ ಸ್ವರೂಪದಲ್ಲಿ ತಾರತಮ್ಯವಿದ್ದು, ಹುತಾತ್ಮ ಸೈನಿಕರ ಕುಟುಂಬಗಳಿಗೆ ನೀಡಲಾಗುವ ಸೌಲಭ್ಯದಲ್ಲಿ ತಾರತಮ್ಯವಿದ್ದು, ಮಧ್ಯಪ್ರವೇಶಿಸಿ, ನ್ಯಾಯ ನೀಡಿ’ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.

ರಾಷ್ಟ್ರಪತಿಯವರಿಗೆ ಎರಡು ಪುಟಗಳ ಪತ್ರ ಬರೆದಿರುವ ರಾಹುಲ್,‘ ದೇಶಕ್ಕಾಗಿ ಪ್ರಾಣ ನೀಡುವ ಯೋಧರಿಗೆ ನ್ಯಾಯಕ್ಕಾಗಿ ಈ ಪತ್ರವನ್ನು ಬರೆಯುತ್ತಿದ್ದೇನೆ. ಸಾಮಾನ್ಯ ಸೈನಿಕರಿಗೆ ಹೋಲಿಸಿದರೆ, ಹತ್ಯೆಗೀಡಾದ ಅಗ್ನಿವೀರರ ಕುಟುಂಬಗಳಿಗೆ ನೀಡುವ ಸೌಲಭ್ಯ ಬಹಳ ಕಡಿಮೆಯಾಗಿದೆ. 

ಇಂಡಿಯಾ ಕೂಟ ಗೆದ್ದರೆ ಅಗ್ನಿವೀರ ಕಸದ ಬುಟ್ಟಿಗೆ: ರಾಹುಲ್ ಗಾಂಧಿ

ನಿಮ್ಮ ತುರ್ತು ಗಮನಕ್ಕೆ ಇದು ಅರ್ಹವಾಗಿದೆ. ಈ ಅನ್ಯಾಯದ ಕಾರಣಕ್ಕಾಗಿಯೇ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿ ಕೂಡ ಅಗ್ನಿವೀರ್ ಯೋಜನೆಯನ್ನು ವಿರೋಧಿಸಿವೆ. ಇಂಡಿಯಾ ಕೂಟ ಅಧಿಕಾರಕ್ಕೆ ಬಂದರೆ ಅದನ್ನು ರದ್ದುಗೊಳಿಸುವುದಾಗಿ ಭರವಸೆ ನೀಡಿದ್ದೇವೆ. ಈ ವಿಷಯದ ಗಂಭೀರತೆ ಅರಿತು ನೀವು ಮಧ್ಯಪ್ರವೇಶಿಸಬೇಕು. ದೇಶಕ್ಕಾಗಿ ಪ್ರಾಣ ಅರ್ಪಿಸುವ ಅಗ್ನಿವೀರ್ ಯೋಧರಿಗೆ ನ್ಯಾಯ ದೊರಕಿಸಿಕೊಡಬೇಕು’ ಎಂದು ರಾಹುಲ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!