
ಗುವಹಾಟಿ(ಡಿ.28): ಆರ್ಎಸ್ಎಸ್ ಕುರಿತು ಕೀಳು ಹೇಳಿಕೆ ನೀಡಿದ ರಾಹುಲ್ ಗಾಂಧಿ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಗುವಹಾಟಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಆರ್ಎಸ್ಎಸ್ನ್ನು ಉಲ್ಲೇಖಿಸಿ 'ಚೆಡ್ಡಿವಾಲಾಗಳು..'ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಅಸ್ಸಾಂ ರಾಜ್ಯವನ್ನು ನಾಗಪುರ್ದ ಆರ್ಎಸ್ಎಸ್ ಕೇಂದ್ರ ಕಚೇರಿಯಿಂದ ಆಳುವ ಪ್ರಯತ್ನ ನಡೆಯುತ್ತಿದ್ದು, ಅಸ್ಸಾಂನ್ನು ಸ್ಥಳೀಯರೇ ಆಳಬೇಕೆ ಹೊರತು ಆರ್ಎಸ್ಎಸ್ ಅಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
‘ಕ್ಷಮೆ ಕೇಳಲು ನಾನು ರಾಹುಲ್ ಸಾವರ್ಕರ್ ಅಲ್ಲ, ರಾಹುಲ್ ಗಾಂಧಿ’!
ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯ ಮೂಲಕ ಕೇಂದ್ರ ಸರ್ಕಾರ ಅಸ್ಸಾಂನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ಹುನ್ನಾರ ನಡೆಸಿದ್ದು, ಇದರ ವಿರುದ್ಧ ರಾಜ್ಯದ ಯುವ ಜನತೆ ಪ್ರತಿಭಟನೆಗಿಳಿದಿದ್ದಾರೆ ಎಂದು ರಾಹುಲ್ ಹೇಳಿದರು.
ರಾಹುಲ್, ಪ್ರಿಯಾಂಕಾ ಜೀವಂತ ಪೆಟ್ರೋಲ್ ಬಾಂಬ್ ಇದ್ದಂಗೆ: ಅನಿಲ್ ವಿಜ್!
ಬಿಜೆಪಿ ಹೋದಲ್ಲೆಲ್ಲಾ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದು, ಶಾಂತವಾಗಿದ್ದ ಅಸ್ಸಾಂನ್ನು ಅಶಾಂತಿಯ ಗೂಡನ್ನಾಗಿ ಪರಿವರ್ತಿಸಲಾಗಿದೆ ಎಂದು ರಾಹುಲ್ ತೀವ್ರ ವಾಗ್ದಾಳಿ ನಡೆಸಿದರು.
ಆದರೆ ಆರ್ಎಸ್ಎಸ್ ಕಾರ್ಯಕರ್ತರನ್ನು 'ಚೆಡ್ಡಿವಾಲಾ'ಎಂದು ಕರೆದು ರಾಹುಲ್ ಇದೀಗ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಆರ್ಎಸ್ಎಸ್, ಇದು ಸಭ್ಯತೆ ಇರುವವರು ಮಾತನಾಡುವ ಪರಿಯಲ್ಲ ಎಂದು ಹರಿಹಾಯ್ದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ