ಇವಿಎಂ ತಿರುಚಬಹುದು: ಎಲಾನ್‌ ಮಸ್ಕ್‌ ನುಡಿ ಭಾರತದಲ್ಲಿ ಭಾರಿ ವಿವಾದ!

Published : Jun 17, 2024, 05:05 AM IST
ಇವಿಎಂ ತಿರುಚಬಹುದು: ಎಲಾನ್‌ ಮಸ್ಕ್‌ ನುಡಿ ಭಾರತದಲ್ಲಿ ಭಾರಿ ವಿವಾದ!

ಸಾರಾಂಶ

‘ಎಲೆಕ್ಟ್ರಾನಿಕ್‌ ವೋಟಿಂಗ್‌ ಮಷಿನ್‌ (ಇವಿಎಂ) ಹ್ಯಾಕ್‌ಗೆ ತುತ್ತಾಗುವ ಸಾಧ್ಯತೆ ಇದ್ದೇ ಇದೆ. ಹೀಗಾಗಿ ಈ ಮುಂಚೆ ಜಾರಿಯಲ್ಲಿದ್ದ ಬ್ಯಾಲೆಟ್‌ ಪೇಪರ್‌ ವ್ಯವಸ್ಥೆಯೇ ಸೂಕ್ತ’ ವಿಶ್ವದ ನಂ.1 ಶ್ರೀಮಂತ, ಖ್ಯಾತ ಉದ್ಯಮಿ ಎಲಾನ್‌ ಮಸ್ಕ್‌ ನೀಡಿದ ಹೇಳಿಕೆಯೊಂದು ಭಾರತದಲ್ಲಿ ಬಿರುಗಾಳಿ ಎಬ್ಬಿಸಿದೆ.

ನವದೆಹಲಿ (ಜೂ.17): ‘ಎಲೆಕ್ಟ್ರಾನಿಕ್‌ ವೋಟಿಂಗ್‌ ಮಷಿನ್‌ (ಇವಿಎಂ) ಹ್ಯಾಕ್‌ಗೆ ತುತ್ತಾಗುವ ಸಾಧ್ಯತೆ ಇದ್ದೇ ಇದೆ. ಹೀಗಾಗಿ ಈ ಮುಂಚೆ ಜಾರಿಯಲ್ಲಿದ್ದ ಬ್ಯಾಲೆಟ್‌ ಪೇಪರ್‌ ವ್ಯವಸ್ಥೆಯೇ ಸೂಕ್ತ’ ವಿಶ್ವದ ನಂ.1 ಶ್ರೀಮಂತ, ಖ್ಯಾತ ಉದ್ಯಮಿ ಎಲಾನ್‌ ಮಸ್ಕ್‌ ನೀಡಿದ ಹೇಳಿಕೆಯೊಂದು ಭಾರತದಲ್ಲಿ ಬಿರುಗಾಳಿ ಎಬ್ಬಿಸಿದೆ.

ಮಸ್ಕ್‌ ಹೇಳಿಕೆಯನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌ ಯಾದವ್‌ ಬೆಂಬಲಿಸಿದ್ದಾರೆ. ಆದರೆ ಇಂಥ ಹೇಳಿಕೆ ‘ಯಾರೂ ಸುರಕ್ಷಿತ ಡಿಜಿಟಲ್‌ ಹಾರ್ಡ್‌ವೇರ್‌ ಮಾಡಲು ಅಸಾಧ್ಯ ಎಂಬ ಅಭಿಪ್ರಾಯ ಸೃಷ್ಟಿಸಿದೆ’ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ತಿರುಗೇಟು ನೀಡಿದ್ದಾರೆ. ಜೊತೆಗೆ ಈ ವಿಷಯ ಮಸ್ಕ್‌ ಮತ್ತು ರಾಜೀವ್‌ ನಡುವೆ ಟ್ವೀಟರ್‌ನಲ್ಲಿ ಚರ್ಚೆಗೂ ನಾಂದಿ ಹಾಡಿದೆ.

ಆಮಿಷ, ಒತ್ತಡ ಹೇರಿ ಸ್ಪೆಸ್‌ಎಕ್ಸ್ ಮಹಿಳಾ ಉದ್ಯೋಗಿ ಜೊತೆ ಸೆಕ್ಸ್, ಸಂಕಷ್ಟದಲ್ಲಿ ಸಿಲುಕಿದ ಎಲಾನ್ ಮಸ್ಕ್!

ಮಸ್ಕ್‌ ಹೀಗೆ ಹೇಳಿಕೆಗೆ ಕಾರಣ ಏನು?: ಇತ್ತೀಚೆಗೆ ಪೋರ್ಟೊರಿಕೋ ದೇಶದಲ್ಲಿ ನಡೆದ ಚುನಾವಣೆ ವೇಳೆ ಸಾಫ್ಟ್‌ವೇರ್‌ ದೋಷದಿಂದಾಗಿ ಇವಿಎಂಗಳಲ್ಲಿ ಚಲಾವಣೆಯಾಗಿದ್ದ ಮತಗಳ ಎಣಿಕೆಯಲ್ಲಿ ವ್ಯತ್ಯಯ ಕಂಡುಬಂದಿತ್ತು. ಆದರೆ ಪೇಪರ್‌ ಟ್ರಯಲ್‌ ಇದ್ದ ಕಾರಣ, ಅವುಗಳಲ್ಲಿನ ಮತಗಳನ್ನು ಆಧರಿಸಿ ಫಲಿತಾಂಶ ಘೋಷಣೆ ಮಾಡಲಾಗಿತ್ತು. ಈ ಇವಿಎಂಗಳನ್ನು ಅಮೆರಿಕದ ಕಂಪನಿಯೊಂದು ಪೂರೈಸಿತ್ತು. ಈ ವಿಷಯವೇ ಮಸ್ಕ್‌ ಅವರು ಇವಿಎಂ ಸಂದೇಹಿಸಲು ಕಾರಣವಾಗಿದೆ.

ಮಸ್ಕ್‌ ಹೇಳಿದ್ದೇನು?: ಇದೇ ವರ್ಷ ಅಮೆರಿಕದಲ್ಲೂ ಅಧ್ಯಕ್ಷೀಯ ಚುನಾವಣೆ ಇದೆ. ಈ ಹಿನ್ನೆಲೆಯಲ್ಲಿ ಕಳವಳ ವ್ಯಕ್ತಪಡಿಸಿ ಟ್ವೀಟ್‌ ಮಾಡಿದ್ದ ಮಸ್ಕ್‌ ‘ಪೋರ್ಟೊರಿಕೋದಲ್ಲಿ ನೂರಾರು ಇವಿಎಂ ಮಷಿನ್‌ಗಳಲ್ಲಿ ಅಕ್ರಮ ಬೆಳಕಿಗೆ ಬಂದಿದೆ. ಆದರೆ ಅದೃಷ್ಟವಶಾತ್‌ ಪೇಪರ್‌ ಟ್ರಯಲ್‌ ಇದ್ದ ಕಾರಣ ಅವುಗಳ ಮತ ಎಣಿಸಿ ಅಕ್ರಮ ಸರಿಪಡಿಸಲಾಗಿದೆ. ಇವಿಎಂಗಳನ್ನು ಹ್ಯಾಕ್‌ ಮಾಡುವ ಅವಕಾಶ ಮತ್ತು ಅವುಗಳ ಮಾಹಿತಿಯನ್ನು ತಿರುಚವ ಸಂಭವನೀಯ ಅವಕಾಶ ಇದ್ದೇ ಇದೆ. ಹೀಗಾಗಿ ಹಿಂದಿನಂತೆ ಪೇಪರ್‌ ಬ್ಯಾಲೆಟ್‌ ವ್ಯವಸ್ಥೆಗೆ ಮೊರೆ ಹೋಗುವುದು ಸೂಕ್ತ’ ಎಂದಿದ್ದಾರೆ.

ರಾಹುಲ್‌, ಯಾದವ್‌ ದನಿ: ಮಸ್ಕ್‌ ಅಭಿಪ್ರಾಯ ಬೆಂಬಲಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ ಗಾಂಧಿ, ‘ಭಾರತದಲ್ಲಿನ ಇವಿಎಂಗಳು ಬ್ಲ್ಯಾಕ್‌ ಬಾಕ್ಸ್‌ ಇದ್ದಂತೆ. ಯಾರಿಗೂ ಅದನ್ನು ಪರಿಶೀಲಿಸಲು ಬಿಡುವುದಿಲ್ಲ. ನಮ್ಮ ಚುನಾವಣಾ ವ್ಯವಸ್ಥೆಯಲ್ಲಿನ ಪಾರದರ್ಶಕತೆ ಕುರಿತು ಗಂಭೀರ ಕಳವಳ ವ್ಯಕ್ತಪಡಿಸಲಾಗಿದೆ’ ಎಂದಿದ್ದಾರೆ. ಇನ್ನೊಂದೆಡೆ, ‘ವಿಶ್ವದೆಲ್ಲಡೆಯ ತಾಂತ್ರಿಕ ತಜ್ಞರು ಇವಿಎಂಗಳ ಅಪಾಯದ ಕುರತು ಬಹಿರಂಗವಾಗಿಯೇ ಕಳವಳ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಭವಿಷ್ಯದಲ್ಲಿ ನಮ್ಮ ದೇಶದಲ್ಲಿನ ಚುನಾವಣೆಗಳಲ್ಲಿ ಮತಪತ್ರಗಳನ್ನು ಬಳಸುವ ಹಳೆಯ ಪದ್ಧತಿಯ ಮರು ಜಾರಿಗೆ ಮತ್ತೆ ನಾವು ಒತ್ತಾಯಿಸುತ್ತೇವೆ’ ಎಂದು ಅಖಿಲೇಶ್‌ ಯಾದವ್‌ ಹೇಳಿದ್ದಾರೆ.

ರಾಜೀವ್‌ ತಿರುಗೇಟು: ಈ ನಡುವೆ ಮಸ್ಕ್‌ ಹೇಳಿಕೆಗೆ ತಿರುಗೇಟು ನೀಡಿರುವ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಮಾಹಿತಿ ಮತ್ತು ತಂತ್ರಜ್ಞಾನ ಖಾತೆ ಸಚಿವರಾಗಿದ್ದ ರಾಜೀವ್‌ ಚಂದ್ರಶೇಖರ್‌, ‘ಮಸ್ಕ್‌ರ ಹೇಳಿಕೆ ಯಾರೂ ಸುರಕ್ಷಿತ ಡಿಜಿಟಲ್‌ ಸಾಧನ ಮಾಡಲು ಸಾಧ್ಯವೇ ಇಲ್ಲ ಎನ್ನವಂತಿದೆ. ಇದು ತಪ್ಪು. ಸುರಕ್ಷಿತ ಇವಿಎಂ ತಯಾರಿಸುವುದು ಹೇಗೆ ಎಂಬುದರ ಬಗ್ಗೆ ಉಚಿತವಾಗಿ ಪಾಠ ಮಾಡಲು ಸಿದ್ಧ’ ಎಂದು ಹೇಳಿದ್ದಾರೆ.

ಜೊತೆಗೆ, ‘ಮಸ್ಕ್‌ ಹೇಳಿಕೆ ಅಮೆರಿಕದ ಇವಿಎಂಗಳಿಗೆ ಅನ್ವಯವಾಗಬಹುದು. ಏಕೆಂದರೆ ಅವರ ಇವಿಎಂ ಮಷಿನ್‌ಗಳು ಇಂಟರ್ನೆಟ್‌ ಕನೆಕ್ಟ್‌ ಆಗಿರುವ ವ್ಯವಸ್ಥೆ ಹೊಂದಿವೆ. ಆದರೆ ಭಾರತದ ಇವಿಎಂ ವ್ಯವಸ್ಥೆ ಸಂಪೂರ್ಣ ವಿಭಿನ್ನ. ಇಲ್ಲಿ ಅಂತರ್ಜಾಲ ಸೇರಿದಂತೆ ಯಾವುದೇ ಬಾಹ್ಯ ವ್ಯವಸ್ಥೆ ಜೊತೆ ಇವಿಎಂ ಸಂಪರ್ಕ ಹೊಂದಿರುವುದಿಲ್ಲ. ಇದರಲ್ಲಿನ ಪ್ರೋಗ್ರಾಮ್‌ಗಳನ್ನು ಬದಲಾಯಿಸಲು ಕೂಡಾ ಸಾಧ್ಯವಿಲ್ಲ. ಭಾರತದಂತೆ ಬೇರೆಯವರು ಕೂಡಾ ಇವಿಎಂ ತಯಾರಿಸಬಹುದು ಎಂದಿದ್ದಾರೆ.

ಒಂದು ವರ್ಷದಲ್ಲಿ ಎಲ್ಲಾ ರೀತಿ ಬೆಲೆ ಏರಿಕೆ ಭಾಗ್ಯ: ವಿಜಯೇಂದ್ರ, ಎಚ್‌ಡಿಕೆ ಆಕ್ರೋಶ

ಆದರೆ ರಾಜೀವ್‌ ಹೇಳಿಕೆಗೂ ಪ್ರತಿಕ್ರಿಯೆ ನೀಡಿರುವ ಮಸ್ಕ್‌ ‘ಯಾವುದನ್ನು ಬೇಕಾದರೂ ಹ್ಯಾಕ್‌ ಮಾಡಬಹುದು’ ಎಂದಿದ್ದಾರೆ. ಇದಕ್ಕೆ ಮತ್ತೆ ತಿರುಗೇಟು ನೀಡಿರುವ ರಾಜೀವ್‌, ‘ಯಾವುದು ಬೇಕಾದರೂ ಸಾಧ್ಯವಿದೆ, ಕನಿಷ್ಠ ಪುಸ್ತಕದಲ್ಲಿ ಸಾಧ್ಯವಿದೆ. ಕ್ವಾಂಟಮ್‌ ಕಂಪ್ಯೂಟ್‌ನ ಸಾಮಾನ್ಯ ಜ್ಞಾನ ಹೊಂದಿದ್ದರೆ, ಯಾವುದೇ ಕೋಡ್‌ ಅನ್ನು ಬೇಕಾದರೂ ಬೇಧಿಸಬಹುದು, ವಿಮಾನಗಳ ಕಾಕ್‌ಪೀಟ್‌ ಕೂಡಾ ಹ್ಯಾಕ್‌ ಮಾಡಬಹುದು. ಆದರೆ ಅದೆಲ್ಲಾ ಬೇರೆ ವಿಷಯ. ಅದು ಬೇರೆ ರೀತಿಯ ಚರ್ಚೆ. ಇವಿಎಂ ವಿಷಯದಲ್ಲಿ ಅದು ಸಾಧ್ಯವಿಲ್ಲ. ಇದು ಅತ್ಯಂತ ಸುರಕ್ಷಿತ ಮತ್ತು ವಿಶ್ವಾಸಾರ್ಹ’ ಎಂದು ಭಾರತದ ಇವಿಎಂಗಳನ್ನು ಸಮರ್ಥಿಸಿಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
ಪುಟಿನ್ ಔತಣಕೂಟಕ್ಕೆ ರಾಹುಲ್ ಗಾಂಧಿ-ಖರ್ಗೆಗಿಲ್ಲ ಆಮಂತ್ರಣ, ಶಶಿ ತರೂರ್‌ಗೆ ಜಾಕ್‌ಪಾಟ್