
ನವದೆಹಲಿ: ಲೋಕಸಭೆ ಸ್ಪೀಕರ್ ಆಯ್ಕೆಗೂ ಒಂದು ದಿನ ಮೊದಲೇ ಕಾಂಗ್ರೆಸ್ ತನ್ನ ನಾಯಕನ ಹೆಸರನ್ನು ಅಂತಿಮಗೊಳಿಸಿ ಘೋಷಣೆ ಮಾಡಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ಸಂಸದ ರಾಹುಲ್ ಗಾಂಧಿಯವರನ್ನು (Rahul Gandhi) ಕಾಂಗ್ರೆಸ್ ಆಯ್ಕೆ ಮಾಡಿದೆ. ಈ ಕುರಿತು ಹಂಗಾಮಿ ಸಭಾಪತಿಗಳಿಗೆ ಕಾಂಗ್ರೆಸ್ ಮಾಹಿತಿ ರವಾನಿಸಿದೆ. ರಾಹುಲ್ ಗಾಂಧಿ ರಾಯಬರೇಲಿ ಕ್ಷೇತ್ರದ ಸಂಸದರಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕರಿಸುವ ವೇಳೆ ಸಂವಿಧಾನವನ್ನು ಸದನಕ್ಕೆ ತೋರಿಸಿದ್ದರು. ರಾಹುಲ್ ಗಾಂಧಿ ಮಾದರಿಯಲ್ಲಿಯೇ ಐಎನ್ಡಿಐಎ ಬ್ಲಾಕ್ ಸಂಸದರು ಕೈಯಲ್ಲಿ ಸಂವಿಧಾನದ ಪ್ರತಿ ಹಿಡಿದು ಪ್ರಮಾಣವಚನ ಸ್ವೀಕರಿಸುವ ದೃಶ್ಯಗಳು ಕಂಡು ಬಂದವು. ರಾಯಬರೇಲಿ ಮತ್ತು ವಯನಾಡು ಕ್ಷೇತ್ರದಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ, ಎರಡರಲ್ಲಿಯೂ ಗೆಲುವು ಸಾಧಿಸಿದ್ದರು.
ವಯನಾಡು ಕ್ಷೇತ್ರ ತ್ಯಜಿಸಿರುವ ರಾಹುಲ್ ಗಾಂಧಿ ರಾಯಬರೇಲಿ ಉಳಿಸಿಕೊಂಡಿದ್ದಾರೆ. ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ಹೆಸರನ್ನು ಅಂತಿಮಗೊಳಿಸಲಾಗಿದೆ. ಕಳೆದ ಬಾರಿ ಅಧೀರ್ ರಂಜನ್ ಚೌಧರಿ ವಿರೋಧ ಪಕ್ಷದ ನಾಯಕರಾಗಿದ್ದರು. 2014ರಲ್ಲಿ ಮಲ್ಲಿಕಾರ್ಜುನ ಖರ್ಗೆ ವಿಪಕ್ಷ ನಾಯಕರಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ