
ನವದೆಹಲಿ (ಫೆ.20): ಕಾಂಗ್ರೆಸ್ ಹಿರಿಯ ಮುಖಂಡ ಸತೀಶ್ ಶರ್ಮಾ ಅವರ ಅಂತ್ಯ ಸಂಸ್ಕಾರವನ್ನು ದೆಹಲಿಯಲ್ಲಿ ಶುಕ್ರವಾರ ನೆರವೇರಿಸಲಾಯಿತು.
ಈ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶವಕ್ಕೆ ಹೆಗಲು ಕೊಡುವ ಮೂಲಕ ಅಂತ್ಯಕ್ರಿಯೆಗೆ ನೆರವಾದರು. ಗಾಂಧಿ ಕಟುಂಬಕ್ಕೆ ನಿಷ್ಠರಾಗಿದ್ದ ಸತೀಶ್ ಶರ್ಮಾ (73) ಅವರು ಗೋವಾದಲ್ಲಿ ಬುಧವಾರ ನಿಧನರಾಗಿದ್ದರು.
ಸಿದ್ದರಾಮಯ್ಯ ಪ್ರಸ್ತಾಪಕ್ಕೆ ಓಕೆ ಎಂದ ರಾಹುಲ್: ಇನ್ಮುಂದೆ ಟಗರು ಆಟ ಶುರು .
ರಾಹುಲ್ ಗಾಂಧಿ ಅವರಿಗೆ ರಾಜಕೀಯದ ಆರಂಭಿಕ ದಿನಗಳಲ್ಲಿ ಗುರುವಿನ ಸ್ಥಾನದಲ್ಲಿದ್ದು ಮಾರ್ಗದರ್ಶನ ಮಾಡಿದ್ದರು. ಈ ಹಿನ್ನೆಲೆಯಲ್ಲಿ ರಾಹುಲ್ ತಮ್ಮ ರಾಜಕೀಯ ಗುರುವಿನ ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಈ ವೇಳೆ ಕಾಂಗ್ರೆಸ್ನ ಹಲವು ಮುಖಂಡರು ಭಾಗಿಯಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ