ಮೋದಿ ವಿರುದ್ದ ಹರಿಹಾಯ್ದ ರಾಹುಲ್ ಗಾಂಧಿಗೆ ಸಂಕಷ್ಟ, ಹೈಕೋರ್ಟ್ ಮಹತ್ವದ ಸೂಚನೆ!

Published : Dec 21, 2023, 06:48 PM IST
ಮೋದಿ ವಿರುದ್ದ ಹರಿಹಾಯ್ದ ರಾಹುಲ್ ಗಾಂಧಿಗೆ ಸಂಕಷ್ಟ, ಹೈಕೋರ್ಟ್ ಮಹತ್ವದ ಸೂಚನೆ!

ಸಾರಾಂಶ

ಪ್ರಧಾನಿ ಮೋದಿ ಜೇಬುಗಳ್ಳ ಅನ್ನೋ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿಗೆ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಇದು ಅಭಿರುಚಿಯ ಹೇಳಿಕೆ ಅಲ್ಲ ಎಂದು ಹೈಕೋರ್ಟ್ ಹೇಳಿದೆ. ಇಷ್ಟೇ ಅಲ್ಲ ಚುನಾವಣಾ ಆಯೋಗಕ್ಕೆ ಮಹತ್ವದ ಸೂಚನೆ ನೀಡಿದೆ.

ನವದೆಹಲಿ(ಡಿ.21) ರಾಹುಲ್ ಗಾಂಧಿಗೆ ಇದೀಗ ಸಂಕಷ್ಟ ಹೆಚ್ಚಾಗಿದೆ. ಪ್ರಧಾನಿ ನರೇಂದ್ರ ಮೋದಿ ವಿರುದ್ದ ಹೇಳಿಕೆ ನೀಡಿ ಹಲವು ಬಾರಿ ಕಾನೂನು ಹಿನ್ನಡೆ ಅನುಭವಿಸಿರುವ ರಾಹುಲ್ ಗಾಂಧಿಗೆ ಇದೀಗ ದೆಹಲಿ ಹೈಕೋರ್ಟ್ ಮಹತ್ವದ ಸೂಚನೆ ನೀಡಿದೆ. ಪ್ರಧಾನಿ ಮೋದಿ ಜೇಬುಗಳ್ಳ ಅನ್ನೋ ರಾಹುಲ್ ಗಾಂಧಿ ಹೇಳಿಕೆ ಉತ್ತಮ ಅಭಿರುಚಿ ಹೊಂದಿದೆ ಹೇಳಿಕೆಯಲ್ಲ ಎಂದು ಹೈಕೋರ್ಟ್ ಹೇಳಿದೆ. ಇದೇ ವೇಳೆ ಈ ಪ್ರಕರಣದ ಕುರಿತು 8 ವಾರದೊಳಗೆ ಕ್ರಮ ಕೈಗೊಳ್ಳುವಂತೆ ಚನಾವಣಾ ಆಯೋಗಕಕ್ಕೆ ಸೂಚನೆ ನೀಡಿದೆ.

ಮೋದಿ ವಿರುದ್ಧ ರಾಹುಲ್ ನೀಡಿದ ಜೇಬುಗಳ್ಳ ಹೇಳಿಕೆ ಕುರಿತು ದೂರುಗಳ ದಾಖಲಾಗಿತ್ತು. ಈ ಕುರಿತು  ಜಸ್ಟೀಸ್ ಮನ್‌‌ಮೋಹನ್ ನೇತೃತ್ವದ ಪೀಠ ವಿಚಾರಣೆ ನಡೆಸಿದೆ. ಇದೇ ವೇಳೆ ರಾಹುಲ್ ಗಾಂಧಿಗೆ ಈ ಹೇಳಿಕೆ ಕುರಿತು ನೋಟಿಸ್ ನೀಡಲಾಗಿದೆ. ಆದರೆ ರಾಹುಲ್ ಗಾಂಧಿ ಉತ್ತರ ನೀಡಿಲ್ಲ ಎಂದು ಚುನಾವಣಾ ಆಯೋಗ ಹೈಕೋರ್ಟ್ ಪೀಠದ ಮುಂದೆ ಸ್ಪಷ್ಟಪಡಿಸಿತ್ತು. ಇದೇ ವೇಳೆ ಈ ಪ್ರಕರಣದ ಕುರಿತು ರಾಹುಲ್ ಗಾಂಧಿಯಿಂದ ಹೇಳಿಕೆ ಪಡೆದು 8 ವಾರದೊಳಗೆ ಕ್ರಮ ಕೈಗೊಳ್ಳುವಂತೆ ಕೋರ್ಟ್ ಸೂಚಿಸಿದೆ.

ಮಿಮಿಕ್ರಿ ಮಾಡಿ ಉಪರಾಷ್ಟ್ರಪತಿಗೆ ಅವಮಾನ : ವೀಡಿಯೋ ಮಾಡಿ ಪ್ರೋತ್ಸಾಹಿಸಿದ ರಾಹುಲ್ ಗಾಂಧಿ

ನವೆಂಬರ್ 22 ರಂದು ರಾಜಸ್ಥಾನದ ಚುನಾವಣಾ ಪ್ರಚಾರದ ವೇಳೆ ರಾಹುಲ್ ಗಾಂಧಿ, ವಿವಾದಿತ ಹೇಳಿಕೆ ನೀಡಿದ್ದರು. ಪ್ರಧಾನಿ ಮೋದಿ, ಉದ್ಯಮಿ ಗೌತಮ್‌ ಅದಾನಿ ಹಾಗೂ ಕೇಂದ್ರ ಸಚಿವ ಅಮಿತ್‌ ಶಾ ಅವರು ಜೇಬುಗಳ್ಳರು. ಒಗ್ಗಟ್ಟಿನಿಂದ ಬಂದು ಜನರ ದರೋಡೆ ಮಾಡುತ್ತಾರೆ ಎಂದಿದ್ದರು. ಜೇಬುಗಳ್ಳರು ಹೆಚ್ಚಾಗಿ 3 ಜನರ ತಂಡ ಹೊಂದಿರುತ್ತಾರೆ. ಮೊದಲನೆಯವ ಜನರ ಗಮನವನ್ನು ಬೆರೆಡೆ ಹರಿಸಲು ನಿರತನಾಗಿದ್ದರೆ ಮತ್ತೊಬ್ಬ ಹಿಂದಿನಿಂದ ಜೇಬುಗಳ್ಳತನ ಮಾಡುತ್ತಾನೆ. ಮತ್ತೊಬ್ಬ ಹೊರಗಿನಿಂದ ಯಾರೂ ಗಮನಿಸುತ್ತಿಲ್ಲವೆಂದು ಖಾತರಿ ಮಾಡಿಕೊಳ್ಳುತ್ತಿರುತ್ತಾನೆ. ಅದೇ ರೀತಿ ಮೋದಿ ಅವರು ಟಿವಿಯಲ್ಲಿ ಜನರನ್ನು ಉದ್ದೇಶಿಸಿ ಅಭಿವೃದ್ಧಿ ಹಾಗೂ ಇತರ ವಿಷಯಗಳಲ್ಲಿ ಪ್ರಚೋದನಾತ್ಮಕವಾಗಿ ಭಾಷಣ ಮಾಡುತ್ತಿರುತ್ತಾರೆ. ಆಗ ಅದಾನಿ ಇನ್ನೊಂದು ಕಡೆಯಿಂದ ಜನರ ಸಂಪತ್ತನ್ನು ಹಗಲುದರೋಡೆ ಮಾಡುತ್ತಿರುತ್ತಾರೆ. ಮತ್ತೊಂದೆಡೆ ಅಮಿತ್‌ ಶಾ ಕಾವಲುಗಾರನಾಗಿದ್ದು, ಯಾರಾದರೂ ಪ್ರಶ್ನಿಸಲು ಬಂದರೆ ಅವರ ಮೇಲೆ ದೇಶದ್ರೋಹ, ವಂಚನೆ ಮುಂತಾದ ಪ್ರಕರಣ ದಾಖಲಿಸಿ ತೆಪ್ಪಗಾಗಿಸುತ್ತಾರೆ ಎಂದು ಟೀಕಿಸಿದ್ದರು.

 

 

ರಾಹುಲ್‌ಗಾಂಧಿ ಕರ್ನಾಟಕದಿಂದ ಸ್ಪರ್ಧಿಸಿದರೆ ಅವರ ವಿರುದ್ಧ ಪ್ರಚಾರ ಮಾಡ್ತೇವೆ: ಪ್ರಮೋದ್ ಮುತಾಲಿಕ್

ಈ ಪ್ರಕರಣದ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಚುನಾವಣಾ ಆಯೋಗ ಹೈಕೋರ್ಟ್ ಪೀಠದ ಮುಂದೆ ಭರವಸೆ ನೀಡಿದೆ. ಜೇಬುಗಳ್ಳ ಹೇಳಿಕೆಗೂ ಮೊದಲು, ಪ್ರಧಾನಿ ಮೋದಿ ಅಪಶಕುನ(ಪನೌತಿ) ಅನ್ನೋ ಹೇಳಿಕೆಯೂ ವಿವಾದಕ್ಕೆ ಕಾರಣವಾಗಿತ್ತು. ಈ ಕುರಿತು ಚುನಾವಣಾ ಆಯೋಗ ರಾಹುಲ್ ಗಾಂಧಿಗೆ ನೋಟಿಸ್ ನೀಡಿದೆ. ಏಕದಿ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಮೋದಿ ಹಾಜರಾಗಿದ್ದರು. ಮೋದಿ ಅಪಶಕುನ. ಹೀಗಾಗಿ ಭಾರತ ಪಂದ್ಯ ಸೋತಿತು ಎಂದು ರಾಹುಲ್ ಗಾಂಧಿ ಹೇಳಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?