
ರಾಂಚಿ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟವು ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಮೀಸಲಾತಿ ಮೇಲಿನ ಶೇ.50ರಷ್ಟು ಮಿತಿಯನ್ನು ತೆಗೆದು ಹಾಕಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.
ಉತ್ತರಾಖಂಡದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆ ಇಲ್ಲಿನ ಶಹೀದ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ‘ಈ ಬಾರಿಯ ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಅಸ್ತಿತ್ವದಲ್ಲಿರುವ ಮೀಸಲಾತಿ ಮೇಲಿನ ಶೇ.50ರಷ್ಟು ಮಿತಿಯ ಪ್ರಮಾಣವನ್ನು ತೆಗೆದು ಹಾಕಲಾಗುವುದು’ ಎಂದಿದ್ದಾರೆ.
ಭಾರತೀಯರೆಂದರೆ ಆಲಸಿಗಳು ಅಂದುಕೊಂಡಿದ್ದರು ನೆಹರು, ಇಂದಿರಾಗಾಂಧಿ: ಪ್ರಧಾನಿ ನರೇಂದ್ರ ಮೋದಿ!
ಯಾವುದೇ ವರ್ಗಕ್ಕೆ ಮೀಸಲಾತಿ ನೀಡುವುದಕ್ಕೆ ಮಿತಿ ಇದೆ. ಶೇ.50ಕ್ಕಿಂತ ಹೆಚ್ಚು ಮೀಸಲಾತಿ ನೀಡುವಂತಿಲ್ಲ ಎಂದು ಸದ್ಯ ಕಾನೂನಿದೆ. ಈ ಕಾನೂನನ್ನು ತಿದ್ದುಪಡಿ ಮಾಡುವ ಮೂಲಕ ಮೀಸಲಾತಿಯ ಪ್ರಮಾಣವನ್ನು ಹೆಚ್ಚಿಸಲಾಗುತ್ತದೆ. ಅಂದರೆ ಶೇ.50ಕ್ಕಿಂತ ಹೆಚ್ಚಿನ ಮೀಸಲಾತಿಯನ್ನು ‘ಇಂಡಿಯಾ’ ಸರ್ಕಾರ ನೀಡುತ್ತದೆ ಎಂದು ಗಾಂಧಿ ಹೇಳಿದ್ದಾರೆ.
ರಾಹುಲ್ ಗಾಂಧಿ ವಯನಾಡು ಕ್ಷೇತ್ರ ಕೇಳಿದ ಮುಸ್ಲಿಂ ಲೀಗ್, ಮೈತ್ರಿಯಲ್ಲಿ ಸೀಟು ಹಂಚಿಕೆ ಕಸರತ್ತು!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ