ಚು.ಆಯೋಗ ಬಿಜೆಪಿಯ ಚುನಾವಣಾ ಕಳ್ಳತನದ ಶಾಖೆ: ರಾಗಾ ವಾಗ್ದಾಳಿ

Kannadaprabha News   | Kannada Prabha
Published : Jul 18, 2025, 07:54 AM IST
Rahul Gandhi

ಸಾರಾಂಶ

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕುರಿತು ಬಿಜೆಪಿ ಮತ್ತು ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್‌ ತನ್ನ ವಾಗ್ದಾಳಿ ಮುಂದುವರೆಸಿದೆ.

ನವದೆಹಲಿ: ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕುರಿತು ಬಿಜೆಪಿ ಮತ್ತು ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್‌ ತನ್ನ ವಾಗ್ದಾಳಿ ಮುಂದುವರೆಸಿದೆ. 

ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಲೋಕಸಭೆಯಲ್ಲಿನ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ‘ಮತದಾರ ಪಟ್ಟಿಯ ಪರಿಷ್ಕರಣೆ ಹೆಸರಿನಲ್ಲಿ ಚುನಾವಣಾ ಆಯೋಗ ಮತಗಳನ್ನು ಕಳ್ಳತನ ಮಾಡುವಾಗ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದಿದೆ. 

ಪರಿಷ್ಕರಣೆ ಹೆಸರಿನಲ್ಲಿ ಕಳ್ಳತನದ ಕೆಲಸ ಮಾಡುತ್ತಿದೆ. ಅದನ್ನು ಬಹಿರಂಗಪಡಿಸಿದವರ ವಿರುದ್ಧ ಎಫ್‌ಐಆರ್‌ ದಾಖಲಿಸುತ್ತಿದೆ. ಆಯೋಗ ಈಗಲೂ ಚುನಾವಣಾ ಆಯೋಗವಾಗಿ ಉಳಿದಿದೆಯೇ ಅಥವಾ ಅಥವಾ ಸಂಪೂರ್ಣವಾಗಿ ಬಿಜೆಪಿಯ ಚುನಾವಣಾ ಚೋರಿ(ಕಳ್ಳತನ) ಶಾಖೆಯಾಗಿದೆಯಾ?’ ಎಂದು ಪ್ರಶ್ನಿಸಿದ್ದಾರೆ. 

ಅಜಿತ್‌ ಅಂಜುಮ್ ಎನ್ನವವರು ತಮ್ಮ ಯೂಟ್ಯೂಬ್‌ ಚಾನೆಲ್‌ನಲ್ಲಿ ಬಿಹಾರದಲ್ಲಿ ನಡೆಯುತ್ತಿರುವ ಮತಪಟ್ಟಿ ಪರಿಷ್ಕರಣೆ ವೇಳೆ ಸರಣಿ ವರದಿಗಳನ್ನು ಮಾಡಿದ್ದರು. ಕೋಮು ಉದ್ವಿಗ್ನತೆ ಹರಡುತ್ತಿದ್ದಾರೆ ಎನ್ನುವ ಕಾರಣಕ್ಕೆ ಅವರ ಮೇಲೆ ಎಫ್ಐಆರ್‌ ದಾಖಲಾಗಿತ್ತು. ಹೀಗಾಗಿ ಅವರ ಪೋಸ್ಟ್‌ ಹಂಚಿಕೊಂಡು ರಾಹುಲ್‌ ಈ ರೀತಿ ಬರೆದುಕೊಂಡಿದ್ದಾರೆ.

ಟ್ರಂಪ್‌ ವ್ಯಾಪಾರ ಡೆಡ್‌ಲೈನ್‌ಗೆ ಮೋದಿ ತಲೆ ಬಾಗ್ತಾರೆ : ರಾಹುಲ್‌ ಗಾಂಧಿ

ಅಮೆರಿಕ ಜತೆ ನಡೆಯುತ್ತಿರುವ ವ್ಯಾಪಾರ ಒಪ್ಪಂದ ಮುಂದಿಟ್ಟುಕೊಂಡು ಕೇಂದ್ರ ಸರ್ಕಾರ ವಿರುದ್ಧ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಕಿಡಿಕಾರಿದ್ದಾರೆ. ಟ್ರಂಪ್‌ ಮುಂದೆ ಪ್ರಧಾನಿ ಮೋದಿ ತಮ್ಮ ತಲೆ ತಗ್ಗಿಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಬೇರೆಯವರು ನೀಡಿದ ಡೆಡ್‌ಲೈನ್‌ಗಳ ಅಡಿ ನಾವು ಯಾವುದೇ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವುದಿಲ್ಲ. ಭಾರತದ ಹಿತಾಸಕ್ತಿ ರಕ್ಷಣೆಯಾದರೆ ಮಾತ್ರ ಭಾರತವು ಅಮೆರಿಕ ಜತೆಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲಿದೆ ಎಂದು ವಾಣಿಜ್ಯ ಸಚಿವ ಪಿಯೂಷ್‌ ಗೋಯಲ್‌ ಹೇಳಿಕೊಂಡಿದ್ದರು.

ಇದಕ್ಕೆ ಸಾಮಾಜಿಕ ಜಾಲತಾಣ ಎಕ್ಸ್‌ ಮೂಲಕ ಶನಿವಾರ ಪ್ರತಿಕ್ರಿಯಿ ನೀಡಿರುವ ರಾಹುಲ್‌ ಗಾಂಧಿ, ಟ್ರೇಡ್‌ಡೀಲ್‌ ವಿಚಾರದಲ್ಲಿ ಗೋಯಲ್‌ ಅವರು ಏನೇ ಹೇಳಿದರೂ ಅಂತಿಮವಾಗಿ ಟ್ರಂಪ್‌ ವಿಧಿಸಿರುವ ಗಡುವಿಗೆ ಮೋದಿ ಅವರು ತಲೆಬಾಗುವುದು ನಿಶ್ಚಿತ ಎಂದಿದ್ದಾರೆ. ಟ್ರಂಪ್‌ ಅವರು ಅಮೆರಿಕ ಜತೆಗಿನ ವ್ಯಾಪಾರ ಒಪ್ಪಂದಕ್ಕೆ ಜು.9ರ ಡೆಡ್‌ಲೈನ್‌ ನಿಗದಿಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
ಪುಟಿನ್ ಔತಣಕೂಟಕ್ಕೆ ರಾಹುಲ್ ಗಾಂಧಿ-ಖರ್ಗೆಗಿಲ್ಲ ಆಮಂತ್ರಣ, ಶಶಿ ತರೂರ್‌ಗೆ ಜಾಕ್‌ಪಾಟ್