Rahul Gandhi South America visit: ರಾಹುಲ್ ಗಾಂಧಿಯ ದಕ್ಷಿಣ ಅಮೆರಿಕ ಭೇಟಿ; 'ಭಾರತ ವಿರೋಧಿ' ಎಂದ ಬಿಜೆಪಿ

Published : Sep 27, 2025, 02:05 PM IST
Rahul Gandhi South America visit

ಸಾರಾಂಶ

Rahul Gandhi South America visi: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬ್ರೆಜಿಲ್, ಕೊಲಂಬಿಯಾ ಸೇರಿದಂತೆ ದಕ್ಷಿಣ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಈ ಭೇಟಿ ಭಾರತದ ಜಾಗತಿಕ ಸಂಬಂಧಗಳನ್ನು ಬಲಪಡಿಸುವ ಗುರಿ ಹೊಂದಿದೆ ಎಂದು ಕಾಂಗ್ರೆಸ್ ಹೇಳಿದರೆ, ಬಿಜೆಪಿ ಇದನ್ನು 'ಭಾರತ ವಿರೋಧಿ' ಎಂದು ಟೀಕಿಸಿದೆ.

Rahul Gandhi South America visit: ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದಕ್ಷಿಣ ಅಮೆರಿಕಾದ ನಾಲ್ಕು ರಾಷ್ಟ್ರಗಳಾದ ಬ್ರೆಜಿಲ್, ಕೊಲಂಬಿಯಾ ಸೇರಿದಂತೆ ಇತರ ದೇಶಗಳಿಗೆ ಭೇಟಿ ನೀಡಿದ್ದಾರೆ. ಈ ಪ್ರವಾಸದಲ್ಲಿ ಅವರು ಜಾಗತಿಕ ನಾಯಕರು, ವಿದ್ಯಾರ್ಥಿಗಳು ಮತ್ತು ಉದ್ಯಮಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎನ್ನಲಾಗಿದೆ. ಆದರೆ, ಈ ಭೇಟಿಯನ್ನು ಬಿಜೆಪಿ 'ಭಾರತ ವಿರೋಧಿ' ಎಂದು ಆರೋಪಿಸಿ ತೀವ್ರವಾಗಿ ಟೀಕಿಸಿದೆ.

ಕಾಂಗ್ರೆಸ್ ಪಕ್ಷದ ಮಾಧ್ಯಮ ವಿಭಾಗದ ಉಸ್ತುವಾರಿ ಪವನ್ ಖೇರಾ ಅವರು Xನಲ್ಲಿ ಪೋಸ್ಟ್ ಮಾಡಿರುವಂತೆ, 'ರಾಹುಲ್ ಗಾಂಧಿ ಅವರು ದಕ್ಷಿಣ ಅಮೆರಿಕಾದಲ್ಲಿ ರಾಜಕೀಯ ಮುಖಂಡರು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ವ್ಯಾಪಾರ ಸಮುದಾಯದೊಂದಿಗೆ ಮಾತುಕತೆ ನಡೆಸಲಿದ್ದಾರೆ. ಈ ಭೇಟಿಯು ಭಾರತ ಮತ್ತು ದಕ್ಷಿಣ ಅಮೆರಿಕಾದ ಐತಿಹಾಸಿಕ ಬಂಧವನ್ನು ಬಲಪಡಿಸಲಿದ್ದು, ವ್ಯಾಪಾರ, ತಂತ್ರಜ್ಞಾನ, ಸುಸ್ಥಿರತೆ ಮತ್ತು ಜನರಿಂದ ಜನರಿಗೆ ವಿನಿಮಯದಲ್ಲಿ ಹೊಸ ಸಹಕಾರಕ್ಕೆ ದಾರಿ ಮಾಡಿಕೊಡಲಿದೆ' ಎಂದಿದ್ದಾರೆ.

ಜಾಗತಿಕ ನಾಯಕರೊಂದಿಗೆ ಸಂವಾದ:

ರಾಹುಲ್ ಗಾಂಧಿ ಅವರು ಬ್ರೆಜಿಲ್ ಮತ್ತು ಕೊಲಂಬಿಯಾದಲ್ಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವುದರ ಜೊತೆಗೆ, ಬಹು ದೇಶಗಳ ಅಧ್ಯಕ್ಷರು ಮತ್ತು ಹಿರಿಯ ನಾಯಕರೊಂದಿಗೆ ಸಭೆಗಳನ್ನು ನಡೆಸಿ, ಪ್ರಜಾಪ್ರಭುತ್ವ ಮತ್ತು ಕಾರ್ಯತಂತ್ರದ ಸಂಬಂಧಗಳನ್ನು ಗಟ್ಟಿಗೊಳಿಸಲಿದ್ದಾರೆ. ಅಮೆರಿಕದ ಸುಂಕಗಳ ಹಿನ್ನೆಲೆಯಲ್ಲಿ ಭಾರತದ ವ್ಯಾಪಾರ ವೈವಿಧ್ಯಕರಣಕ್ಕೆ ಈ ಭೇಟಿ ಅವಕಾಶಗಳನ್ನು ತೆರೆಯಲಿದೆ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ.

ರಾಹುಲ್ ಗಾಂಧಿ ಭಾರತ ವಿರೋಧಿ ಎಂದ ಬಿಜೆಪಿ:

ಭಾರತದ ಮೇಲೆ ಅಮೆರಿಕದ ಸುಂಕ ಬೆದರಿಕೆ ನಡುವೆ ರಾಹುಲ್ ಗಾಂಧಿ ದ.ಅಮೆರಿಕ ಭೇಟಿ ನೀಡಿರುವುದನ್ನ ಖಂಡಿಸಿರುವ ಬಿಜೆಪಿ, ರಾಹುಲ್ ಗಾಂಧಿ ಕಾರ್ಯಕ್ರಮವನ್ನು ಭಾರತದ ವಿರೋಧಿ' ಎಂದು ಕರೆದಿದೆ. ಈ ಆರೋಪಕ್ಕೆ ಕಾಂಗ್ರೆಸ್ ತೀವ್ರವಾಗಿ ಪ್ರತಿಕ್ರಿಯಿಸಿದ್ದು, ಈ ಭೇಟಿಯು ಭಾರತದ ಜಾಗತಿಕ ಉಪಸ್ಥಿತಿಯನ್ನು ಬಲಪಡಿಸುವ ಗುರಿಯನ್ನು ಹೊಂದಿದೆ ಎಂದು ಸಮರ್ಥಿಸಿಕೊಂಡಿದೆ.

ಈ ಭೇಟಿಯು ಭಾರತ ಮತ್ತು ದಕ್ಷಿಣ ಅಮೆರಿಕಾದ ದೀರ್ಘಕಾಲೀನ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸುವ ಜೊತೆಗೆ, ಜಾಗತಿಕ ದಕ್ಷಿಣದ ಒಗ್ಗಟ್ಟಿನ ಸಂಪ್ರದಾಯವನ್ನು ಮುಂದುವರೆಸಲಿದೆ ಎಂದು ಕಾಂಗ್ರೆಸ್ ವಿಶ್ವಾಸ ವ್ಯಕ್ತಪಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..