ದೀಪಾವಳಿ ಖುಷಿಯಲ್ಲಿ ಜಹಾಂಗೀರ್, ಬೇಸನ್‌ ಲಾಡು ತಯಾರಿಸಿದ ರಾಗಾ

Kannadaprabha News   | Kannada Prabha
Published : Oct 21, 2025, 05:12 AM IST
RAHUL Gandhi

ಸಾರಾಂಶ

ದೇಶ ದೀಪಾವಳಿ ಆಚರಣೆಯಲ್ಲಿ ತೊಡಗಿರುವ ಹೊತ್ತಿನಲ್ಲಿ, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಜಹಾಂಗೀರ್‌ ಮತ್ತು ಬೇಸನ್‌ ಉಂಡೆ ತಯಾರಿಸಿ ಸಂಭ್ರಮಿಸಿದ್ದಾರೆ. ದೆಹಲಿಯ ಖ್ಯಾತ ಘಂಟೇವಾಲಾ ಮಿಠಾಯಿ ಅಂಗಡಿಗೆ ತರಳಿದ ರಾಹುಲ್‌, ಅಲ್ಲಿ ತಮ್ಮ ಪಾಕಕಲೆ ಪ್ರದರ್ಶಿಸಿದ್ದಾರೆ.

ನವದೆಹಲಿ: ದೇಶ ದೀಪಾವಳಿ ಆಚರಣೆಯಲ್ಲಿ ತೊಡಗಿರುವ ಹೊತ್ತಿನಲ್ಲಿ, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಜಹಾಂಗೀರ್‌ ಮತ್ತು ಬೇಸನ್‌ ಉಂಡೆ ತಯಾರಿಸಿ ಸಂಭ್ರಮಿಸಿದ್ದಾರೆ. ದೆಹಲಿಯ ಖ್ಯಾತ ಘಂಟೇವಾಲಾ ಮಿಠಾಯಿ ಅಂಗಡಿಗೆ ತರಳಿದ ರಾಹುಲ್‌, ಅಲ್ಲಿ ತಮ್ಮ ಪಾಕಕಲೆ ಪ್ರದರ್ಶಿಸಿದ್ದಾರೆ. ತಮ್ಮ ಎಕ್ಸ್‌ ಖಾತೆಯಲ್ಲಿ ಇದರ ವಿಡಿಯೋವನ್ನು ರಾಹುಲ್‌ ಹಂಚಿಕೊಂಡಿದ್ದು, ಅದರಲ್ಲಿ ಅವರು ಬಾಣಸಿಗನಂತೆ ಏಪ್ರನ್‌, ತಲೆಗೆ ಟೋಪಿ ಧರಿಸಿ, ಕೈಯ್ಯಾರೆ ಜಹಾಂಗೀರನ್ನು ಎಣ್ಣೆಗೆ ಬಿಡುತ್ತಿರುವುದು ಹಾಗೂ ಬೇಸನ್‌ ಉಂಡೆ ತಯಾರಿಸುವುದನ್ನು ಕಾಣಬಹುದು.

‘ದೀಪಾವಳಿಯ ನಿಜವಾದ ಮಧುರತೆ ಊಟದ ತಟ್ಟೆಯಲ್ಲಿ ಮಾತ್ರವಲ್ಲ, ಸಂಬಂಧ ಮತ್ತು ಸಮುದಾಯಗಳಲ್ಲೂ ಇದೆ. ದೇಶವು ಹರ್ಷ, ಸಂತಸ, ಸಮೃದ್ಧಿಯ ದೀವಿಗೆಗಳಿಂದ ಬೆಳಗಿ. ಎಲ್ಲಾ ಮನೆಗಳಲ್ಲಿ ಪ್ರೀತಿ ನೆಲೆಸಲಿ’ ಎಂದು ರಾಹುಲ್‌ ಹಾರೈಸಿದ್ದಾರೆ.

ಬೇಗ ಮದುವೆಯಾಗಿ: ರಾಹುಲ್‌ಗೆ ಮಿಠಾಯಿ ಅಂಗಡಿ ಮಾಲೀಕ ಒತ್ತಾಯ

ನವದೆಹಲಿ: ಕಾಂಗ್ರೆಸ್ಸಿಗ ರಾಹುಲ್‌ ಗಾಂಧಿ ಸಿಹಿತಿನಿಸು ತಯಾರು ಮಾಡಿದ್ದರಿಂದ ಖುಷಿಯಾಗಿರುವ ಘಂಟೇವಾಲ ಅಂಗಡಿಯ ಮಾಲೀಕ ಸುಶಾಂತ್‌ ಜೈನ್‌, ‘ನೀವು (ರಾಹುಲ್‌) ಮೋಸ್ಟ್‌ ಎಲಿಜಿಬಲ್‌ ಬ್ಯಾಚುಲರ್‌ ಎಂದು ಇಡೀ ದೇಶವೇ ಮಾತನಾಡುತ್ತಿದೆ. ನೀವು ಬೇಗ ಮದುವೆ ಆಗಿ. ಆಗ ಮದುವೆಗಾಗಿ ಇನ್ನಷ್ಟು ಸಿಹಿತಿಂಡಿಗಳಿಗೆ ಆರ್ಡರ್‌ ಬರುತ್ತದೆ. ಇದಕ್ಕಾಗಿ ನಾವು ಕಾಯುತ್ತಿದ್ದೇವೆ’ ಎಂದು ಹೇಳಿ ಚಟಾಕಿ ಹಾರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರತನ್ ಟಾಟಾ ಮಲತಾಯಿ, ಲ್ಯಾಕ್‌ಮೆ ಫ್ಯಾಶನ್ ಸಂಸ್ಥಾಪಕಿ ಸೈಮನ್ ಟಾಟಾ ನಿಧನ
ಭಾರತದ 2 ಬಿಲಿಯನ್ ಡಾಲರ್ ಪರಮಾಣು ಜಲಾಂತರ್ಗಾಮಿ ಒಪ್ಪಂದ ಅಂತಿಮಗೊಳಿಸಿದ ಪುಟಿನ್ ಭೇಟಿ