
ನವದೆಹಲಿ: ಬಿಹಾರದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಸತತ ವಾಗ್ದಾಳಿ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ‘ಮೃತಪಟ್ಟಿದ್ದಾರೆ’ ಎಂಬ ಕಾರಣ ನೀಡಿ ಚುನಾವಣಾ ಆಯೋಗ ಕೈಬಿಟ್ಟಿದ್ದ 7 ಮತದಾರರ ಜತೆ ‘ಚಾಯ್ ಪೇ ಚರ್ಚಾ’ ನಡೆಸಿದ್ದಾರೆ. ಈ ಮೂಲಕ ಚುನಾವಣಾ ಆಯೋಗದ ಲೋಪಗಳ ವಿರುದ್ಧ ಮತ್ತಷ್ಟು ಸಾಕ್ಷ್ಯಗಳನ್ನು ಹೊರಹಾಕುವ ಯತ್ನ ಮಾಡಿದ್ದಾರೆ.
ಎಕ್ಸ್ನಲ್ಲಿ ಈ ಕುರಿತ ವಿಡಿಯೋವೊಂದನ್ನು ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ‘ಜೀವನದಲ್ಲಿ ಹಲವು ಕುತೂಹಲಕಾರಿ ಅನುಭವಗಳಾಗಿವೆ. ಆದರೆ ಇಲ್ಲಿಯವರೆಗೆ ಸತ್ತವರೊಂದಿಗೆ ಕುಳಿತು ಟೀ ಕುಡಿಯುವ ಅವಕಾಶ ಸಿಕ್ಕಿರಲಿಲ್ಲ. ಈ ಅಮೋಘ ಅನುಭವಕ್ಕಾಗಿ ಚುನಾವಣಾ ಆಯೋಗಕ್ಕೆ ಧನ್ಯವಾದ ತಿಳಿಸುತ್ತೇನೆ’ ಎಂದು ವ್ಯಂಗ್ಯವಾಡಿದ್ದಾರೆ.
ವಿಡಿಯೋದಲ್ಲಿ 4 ಪುರುಷರು ಮತ್ತು 3 ಮಹಿಳೆಯರೊಂದಿಗೆ ರಾಹುಲ್ ಮಾತಾಡುತ್ತಿರುವುದನ್ನು ಕಾಣಬಹುದಾಗಿದೆ. ‘ವಿಶೇಷ ಪರಿಷ್ಕರಣೆ ವೇಳೆ ನಮ್ಮನ್ನು ಮೃತರೆಂದು ಘೋಷಿಸಿದ್ದು ತಿಳಿದುಬಂತು. ಈ ಪ್ರಕ್ರಿಯೆಯಲ್ಲಿ ತೆಗೆದುಹಾಕಲ್ಪಟ್ಟ 65 ಲಕ್ಷ ಜನರಲ್ಲಿ ನಾವೂ ಇದ್ದೆವು. ನಮ್ಮ ಮತದಾನದ ಹಕ್ಕನ್ನು ಮರಳಿ ಪಡೆಯಲು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಈ ಬಗ್ಗೆ ವಿಚಾರಣೆ ನಡೆಯುತ್ತಿದೆ’ ಎಂದು ಅವರು ಹೇಳಿದ್ದಾರೆ.
ಇದೇ ವೇಳೆ ರಾಹುಲ್, ‘ದೆಹಲಿ ಸುತ್ತಿ ಬನ್ನಿ. ಸತ್ತವರ ಬಳಿ ಟಿಕೆಟ್ ಕೇಳುವುದಿಲ್ಲ’ ಎಂದೂ ಮೃತರೆಂದು ಘೋಷಿಸಲ್ಪಟ್ಟವರ ಜತೆ ತಮಾಷೆ ಮಾಡಿದ್ದನ್ನು ಕಾಣಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ