ಇಂದು ಸರ್ಕಾರಿ ಬಂಗಲೆ ತೆರವು ಮಾಡಲಿರೋ ರಾಹುಲ್‌ ಗಾಂಧಿ: ಅಮ್ಮನ ಮನೆಗೆ ಶಿಫ್ಟ್‌ ಆಗ್ತಾರೆ ಕಾಂಗ್ರೆಸ್‌ ನಾಯಕ

Published : Apr 22, 2023, 11:14 AM IST
ಇಂದು ಸರ್ಕಾರಿ ಬಂಗಲೆ ತೆರವು ಮಾಡಲಿರೋ ರಾಹುಲ್‌ ಗಾಂಧಿ: ಅಮ್ಮನ ಮನೆಗೆ ಶಿಫ್ಟ್‌ ಆಗ್ತಾರೆ ಕಾಂಗ್ರೆಸ್‌ ನಾಯಕ

ಸಾರಾಂಶ

ಮೋದಿ ಉಪನಾಮ ಟೀಕಿಸಿದ ಕ್ರಿಮಿನಲ್‌ ಪ್ರಕರಣದಲ್ಲಿ ರಾಹುಲ್‌ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ಅವರ ಲೋಕಸಭಾ ಸದಸ್ಯತ್ವ ಅನರ್ಹಗೊಳಿಸಲಾಗಿತ್ತು. ಹೀಗಾಗಿ ತಮಗೆ ನೀಡಿದ ಮನೆಯನ್ನು ಏಪ್ರಿಲ್ 22ರೊಳಗೆ ಖಾಲಿ ಮಾಡಿ ಎಂದು ಸರ್ಕಾರ ರಾಹುಲ್‌ ಗಾಂಧಿಗೆ ಸೂಚಿಸಿತ್ತು.

ನವದೆಹಲಿ (ಏಪ್ರಿಲ್ 22, 2023): ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಲೋಕಸಭಾ ಸದಸ್ಯರಾಗಿದ್ದ ಕಾರಣಕ್ಕಾಗಿ ತಮಗೆ ದೆಹಲಿಯಲ್ಲಿ ನೀಡಲಾಗಿದ್ದ ಸರ್ಕಾರಿ ಬಂಗಲೆಯನ್ನು ಶನಿವಾರ ತೆರವು ಮಾಡಲಿದ್ದಾರೆ. ಕಳೆದ ಕೆಲವು ದಿನಗಳಿಂದ ಮನೆಯಲ್ಲಿದ್ದ ವಸ್ತುಗಳನ್ನು ಒಂದೊಂದಾಗಿ ತೆರವು ಮಾಡಲಾಗುತ್ತಿದ್ದು, ಶುಕ್ರವಾರ ತೆರವು ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿ ಶನಿವಾರ ಮನೆಯ ಕೀಯನ್ನು ಅಧಿಕೃತವಾಗಿ ಸರ್ಕಾರಿ ಅಧಿಕಾರಿಗಳಿಗೆ ಹಸ್ತಾಂತರ ಮಾಡಲಿದ್ದಾರೆ.

ಮೋದಿ ಉಪನಾಮ ಟೀಕಿಸಿದ ಕ್ರಿಮಿನಲ್‌ ಪ್ರಕರಣದಲ್ಲಿ ರಾಹುಲ್‌ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ಅವರ ಲೋಕಸಭಾ ಸದಸ್ಯತ್ವ ಅನರ್ಹಗೊಳಿಸಲಾಗಿತ್ತು. ಹೀಗಾಗಿ ತಮಗೆ ನೀಡಿದ ಮನೆಯನ್ನು ಏಪ್ರಿಲ್ 22ರೊಳಗೆ ಖಾಲಿ ಮಾಡಿ ಎಂದು ಸರ್ಕಾರ ರಾಹುಲ್‌ ಗಾಂಧಿಗೆ ಸೂಚಿಸಿತ್ತು. ಅದರಂತೆ ರಾಹುಲ್‌ ಗಾಂಧಿ ಮನೆ ಖಾಲಿ ಮಾಡಿದ್ದಾರೆ. ಅವರು ಸದ್ಯ ತಮ್ಮ ತಾಯಿ ಸೋನಿಯಾ ಗಾಂಧಿ ನಿವಾಸದಲ್ಲೇ ಉಳಿದುಕೊಳ್ಳಲಿದ್ದಾರೆ ಎನ್ನಲಾಗಿದೆ.

ಇದನ್ನು ಓದಿ: ರಾಹುಲ್‌ ಗಾಂಧಿಗೆ ತೀವ್ರ ಹಿನ್ನೆಡೆ: 2 ವರ್ಷ ಜೈಲು ಶಿಕ್ಷೆ ಎತ್ತಿ ಹಿಡಿದ ಸೂರತ್‌ ಕೋರ್ಟ್‌

ಈಗಾಗಲೇ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷರು ಏಪ್ರಿಲ್ 14 ರಂದು ತಮ್ಮ ಕಚೇರಿ ಮತ್ತು ಕೆಲವು ವೈಯಕ್ತಿಕ ವಸ್ತುಗಳನ್ನು ಬಂಗಲೆಯಿಂದ ತಮ್ಮ ತಾಯಿ ಸೋನಿಯಾ ಗಾಂಧಿಯವರ ಅಧಿಕೃತ ನಿವಾಸಕ್ಕೆ ಸ್ಥಳಾಂತರಿಸಿದ್ದರು ಎಂದು ವರದಿಗಳು ಹೇಳಿವೆ. ಇನ್ನು, ಶುಕ್ರವಾರ ಸಂಜೆ ಬಂಗಲೆಯಿಂದ ತಮ್ಮ ಉಳಿದ ವಸ್ತುಗಳನ್ನು ರಾಹುಲ್‌ ಗಾಂಧಿ ಸ್ಥಳಾಂತರಿಸಿದರು ಎಂದು ಮೂಲಗಳು ತಿಳಿಸಿವೆ. ಅವರ ವಸ್ತುಗಳೊಂದಿಗೆ ಟ್ರಕ್ ಕಟ್ಟಡದಿಂದ ಹೊರಗೆ ಹೋಗುತ್ತಿರುವುದು ಕಂಡುಬಂದಿದೆ.

ಸುಮಾರು ಎರಡು ದಶಕಗಳಿಂದ ರಾಹುಲ್ ಗಾಂಧಿ ಇದೇ ಬಂಗಲೆಯಲ್ಲಿ ವಾಸಿಸುತ್ತಿದ್ದಾರೆ. ತನ್ನ ಕಚೇರಿಯನ್ನು ಬದಲಾಯಿಸಿದ ನಂತರ, ಅವರು ತಮ್ಮ ತಾಯಿ ಮತ್ತು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಯವರೊಂದಿಗೆ ಅವರ 10, ಜನಪಥ್ ನಿವಾಸದಲ್ಲಿ ವಾಸಿಸಲು ಪ್ರಾರಂಭಿಸಿದರು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ರಾಹುಲ್ ಗಾಂಧಿಗೆ ಅಗ್ನಿಪರೀಕ್ಷೆ: ಜೈಲು ಶಿಕ್ಷೆ ಬಗ್ಗೆ ಇಂದು ತೀರ್ಮಾನ; ಶಿಕ್ಷೆಗೆ ತಡೆಯಾದ್ರೆ ಅನರ್ಹತೆ ರದ್ದು..!

ಮಾರ್ಚ್ 23 ರಂದು ಸೂರತ್ ನ್ಯಾಯಾಲಯವು ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್‌ ಗಾಂಧಿ ಅವರನ್ನು ಎರಡು ವರ್ಷಗಳ ಶಿಕ್ಷೆಯನ್ನು ವಿಧಿಸಿ, ಅವರನ್ನು ಅನರ್ಹಗೊಳಿಸಲು ಕಾರಣವಾಯಿತು. ಬಳಿಕ ಅವರು ಸೂರತ್‌ನ ಸೆಷನ್ಸ್ ನ್ಯಾಯಾಲಯದಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿದ್ದರು. ಅದು ಶಿಕ್ಷೆಯನ್ನು ರದ್ದುಗೊಳಿಸುವಂತೆ ಮಾಡಿದ ಮನವಿಯನ್ನು ತಿರಸ್ಕರಿಸಿತು. ಈ ಮಧ್ಯೆ, ಅವರನ್ನು ಅನರ್ಹಗೊಳಿಸಿದ ಒಂದು ದಿನದ ನಂತರ, ಲೋಕಸಭೆ ಸೆಕ್ರೆಟರಿಯೇಟ್ ಏಪ್ರಿಲ್ 22 ರೊಳಗೆ ಜಾಗವನ್ನು ಖಾಲಿ ಮಾಡುವಂತೆ ರಾಹುಲ್‌ ಗಾಂಧಿಗೆ ನೋಟಿಸ್ ಕಳುಹಿಸಿತ್ತು.

2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ನ್ಯಾಯಾಲಯ ತಿರಸ್ಕರಿಸಿದ ನಂತರ ಕಾನೂನಿನಡಿಯಲ್ಲಿ ಇನ್ನೂ ಲಭ್ಯವಿರುವ ಎಲ್ಲಾ ಆಯ್ಕೆಗಳನ್ನು ಪಡೆದುಕೊಳ್ಳುವುದನ್ನು ಮುಂದುವರಿಸುವುದಾಗಿ ಕಾಂಗ್ರೆಸ್ ಗುರುವಾರ ಹೇಳಿದೆ. ಈ ತೀರ್ಪು ದುರದೃಷ್ಟಕರ ಎಂದು ಕಾಂಗ್ರೆಸ್ ನಾಯಕ ಡಾ. ಅಭಿಷೇಕ್ ಮನು ಸಿಂಘ್ವಿ ಹೇಳಿದ್ದಾರೆ. "ತಪ್ಪಾದ ತೀರ್ಪು ದೃಢೀಕರಿಸಲ್ಪಟ್ಟಿದೆ, ನಾವು ನಮ್ಮ ಪರ್ಯಾಯಗಳನ್ನು ಬಳಸುತ್ತೇವೆ" ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದು ಪಕ್ಷವು ಆದಷ್ಟು ಬೇಗ ಉನ್ನತ ನ್ಯಾಯಾಲಯವನ್ನು ಸಂಪರ್ಕಿಸುತ್ತದೆ ಎಂದೂ ಮಾಹಿತಿ ನೀಡಿದರು.

ಇದನ್ನೂ ಓದಿ: ರಾಹುಲ್ ಗಾಂಧಿ ವಿದೇಶದಲ್ಲಿ ಭೇಟಿಯಾಗೋ ಉದ್ಯಮಿಗಳು ಯಾರು..? ಬಿಜೆಪಿ ಪ್ರಶ್ನೆ

ವಕೀಲ-ರಾಜಕಾರಣಿ ಸೂರತ್ ತೀರ್ಪನ್ನು "ಸಂಶಯಾಸ್ಪದ" ಎಂದು ಕರೆದರು. "ಈ ಎರಡು ತೀರ್ಪುಗಳಲ್ಲಿ ಕಂಡುಬರುವ ಕಾನೂನು ದೋಷಗಳನ್ನು ಉನ್ನತ ನ್ಯಾಯಾಲಯಗಳು ಅಂದರೆ ಉಚ್ಚ ನ್ಯಾಯಾಲಯಗಳು ಮತ್ತು ಸುಪ್ರೀಂ ಕೋರ್ಟ್ ಸರಿಪಡಿಸುತ್ತದೆ ಎಂದು ನಮಗೆ ವಿಶ್ವಾಸವಿದೆ. ತೀರ್ಪು ಮಾನ್ಯವಾದ ಕಾನೂನು ಸುಸ್ಥಿರ ತಾರ್ಕಿಕತೆಯಿಂದ ದೂರವಿರುವುದು ನಮಗೆ ಸ್ಪಷ್ಟವಾಗಿದೆ" ಎಂದು ಡಾ. ಅಭಿಷೇಕ್ ಮನು ಸಿಂಘ್ವಿ ಟೀಕಿಸಿದರು. 

ಮುಂದಿನ ವಾರ ಗುಜರಾತ್ ಹೈಕೋರ್ಟ್‌ನಲ್ಲಿ ಸೆಷನ್ಸ್ ಕೋರ್ಟ್ ಆದೇಶವನ್ನು ಪ್ರಶ್ನಿಸುವುದಾಗಿಯೂ ಕಾಂಗ್ರೆಸ್‌ ಪಕ್ಷ ಹೇಳಿದೆ.

ಇದನ್ನೂ ಓದಿ: ಸಂಸದ ಸ್ಥಾನದಿಂದ ತೆಗೆದು, ಪ್ರಶ್ನೆ ಕೇಳದಂತೆ ಹೆದರಿಸಲಾಗದು: ರಾಹುಲ್‌ ಗಾಂಧಿ; ನಾಳೆ ಮಾನನಷ್ಟ ಮೊಕದ್ದಮೆ ಕೇಸ್‌ ವಿಚಾರಣೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಯೋಧ್ಯೆಯ ರಾಮಲಲ್ಲಾ ಪ್ರತ್ಯಕ್ಷನಾಗಿ ಆಶೀರ್ವದಿಸಿದರೆ ಹೇಗಿರತ್ತೆ? ರೋಮಾಂಚಕಾರಿ ವಿಡಿಯೋ ವೈರಲ್​
ಮೆಹೆಂದಿಯಾಗಿತ್ತು, ಆದರೆ ಮದುವೆಯಾಗಲ್ಲ: ಕೊನೆಗೂ Palash Muchhal ಜೊತೆಗಿನ ಸಂಬಂಧಕ್ಕೆ ತೆರೆ ಎಳೆದ Smriti Mandhana