ಜಲ್ಲಿಕಟ್ಟು ವೀಕ್ಷಣೆಗೆ ರಾಹುಲ್‌ ತಮಿಳ್ನಾಡಿಗೆ, ಚುನಾವಣೆಗೆ ಕ್ಷಣಗಣನೆ ಬೆನ್ನಲ್ಲೇ ಪ್ರವಾಸ!

Published : Jan 13, 2021, 02:40 PM IST
ಜಲ್ಲಿಕಟ್ಟು ವೀಕ್ಷಣೆಗೆ ರಾಹುಲ್‌ ತಮಿಳ್ನಾಡಿಗೆ, ಚುನಾವಣೆಗೆ ಕ್ಷಣಗಣನೆ ಬೆನ್ನಲ್ಲೇ ಪ್ರವಾಸ!

ಸಾರಾಂಶ

ಸಾಂಪ್ರದಾಯಿಕ ಗ್ರಾಮೀಣ ಕ್ರೀಡೆ ಜಲ್ಲಿಕಟ್ಟು | ಜಲ್ಲಿಕಟ್ಟು ವೀಕ್ಷಣೆಗೆ ರಾಹುಲ್‌ ತಮಿಳ್ನಾಡಿಗೆ| ಚುನಾವಣೆಗೆ ಕ್ಷಣಗಣನೆ ಬೆನ್ನಲ್ಲೇ ದಕ್ಷಿಣ ರಾಜ್ಯ ಪ್ರವಾಸ

ಚೆನ್ನೈ(ಜ.13): ಸಾಂಪ್ರದಾಯಿಕ ಗ್ರಾಮೀಣ ಕ್ರೀಡೆ ಜಲ್ಲಿಕಟ್ಟು ವೀಕ್ಷಣೆಗಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಜ.14ರ ಗುರುವಾರ ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವ ಹೊತ್ತಿನಲ್ಲೇ ದಿಢೀರ್‌ ಈ ಭೇಟಿ ನಿಗದಿಯಾಗಿದ್ದು, ಕುತೂಹಲ ಕೆರಳಿಸಿದೆ.

ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಕೆ.ಎಸ್‌. ಅಳಗಿರಿ, ‘ಜ.14ರ ಬೆಳಗ್ಗೆ 11ಕ್ಕೆ ಮದುರೈಗೆ ಆಗಮಿಸಲಿರುವ ರಾಹುಲ್‌ ಗಾಂಧಿ, ಅವನಿಯಾಪುರಂನಲ್ಲಿ ಹೋರಿ ಮಣಿಸುವ ಸ್ಪರ್ಧೆ ಜಲ್ಲಿಕಟ್ಟು ವೀಕ್ಷಿಸಲಿದ್ದಾರೆ. ಈ ಮೂಲಕ ಕೇಂದ್ರ ಜಾರಿಗೆ ತಂದಿರುವ ವಿವಾದಾತ್ಮಕ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಅನ್ನದಾತರಿಗೆ ನೈತಿಕ ಬೆಂಬಲ ಸೂಚಿಸಲಿದ್ದಾರೆ.

ಈ ಭೇಟಿಯ ಹಿಂದೆ ಚುನಾವಣಾ ಪ್ರಚಾರದ ಉದ್ದೇಶವಿಲ್ಲ. ಗುರುವಾರದ ಭೇಟಿ ವೇಳೆ ರೈತರು ಸೇರಿದಂತೆ ಯಾವುದೇ ಮುಖಂಡರ ಜೊತೆ ರಾಜಕೀಯ ಚರ್ಚೆಗಳು ನಿಗದಿಯಾಗಿಲ್ಲ. ಜೊತೆಗೆ ಯುಪಿಎ ಕೂಟದ ಭಾಗವಾಗಿರುವ ಡಿಎಂಕೆ ಅಧ್ಯಕ್ಷ ಎಂ.ಕೆ ಸ್ಟಾಲಿನ್‌ ಸೇರಿದಂತೆ ಯಾವುದೇ ರಾಜಕೀಯ ಮುಖಂಡರನ್ನು ಅವರು ಭೇಟಿಯಾಗಲ್ಲ’ ಎಂದು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!