ಕಾಂಗ್ರೆಸ್‌ಗೆ ಮುಖಭಂಗ, ರಾಹುಲ್ ಗಾಂಧಿ ಕಚೇರಿ ಧ್ವಂಸ ಪ್ರಕರಣದಲ್ಲಿ ತಮ್ಮದೇ ಪಕ್ಷದ ಕಾರ್ಯಕರ್ತರ ಬಂಧನ!

Published : Aug 19, 2022, 05:10 PM IST
ಕಾಂಗ್ರೆಸ್‌ಗೆ ಮುಖಭಂಗ, ರಾಹುಲ್ ಗಾಂಧಿ ಕಚೇರಿ ಧ್ವಂಸ ಪ್ರಕರಣದಲ್ಲಿ ತಮ್ಮದೇ ಪಕ್ಷದ ಕಾರ್ಯಕರ್ತರ ಬಂಧನ!

ಸಾರಾಂಶ

ವಯನಾಡು ಸಂಸದ ರಾಹುಲ್ ಗಾಂಧಿ ಕಚೇರಿಯಲ್ಲಿ ಪೀಠೋಪಕರಣ ಧ್ವಂಸ ಹಾಗೂ ಮಹಾತ್ಮ ಗಾಂಧಿ ಫೋಟೋ ಧ್ವಂಸ ಪ್ರಕರಣದಲ್ಲಿ ಇದೀಗ ಸ್ವತಃ ರಾಹುಲ್ ಗಾಂಧಿ ಪಿಎ ಸೇರಿ ನಾಲ್ವರು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಇದು ಎಸ್ಎಫ್ಐ  ಕೃತ್ಯ ಎಂದಿದ್ದ ಕಾಂಗ್ರೆಸ್‌ಗೆ ಇದೀಗ ಮುಖಭಂಗವಾಗಿದೆ.

ವಯನಾಡು(ಆ.19):  ಓರ್ವ ರಾಹುಲ್ ಗಾಂಧಿ ಪಿಎ, ಇನ್ನೂ ಮೂವರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತು ಇದೀಗ ಪೊಲೀಸರ ಅತಿಥಿಗಳಾಗಿದ್ದಾರೆ. ಇದಕ್ಕೆ ಕಾರಣ ಕಾಂಗ್ರೆಸ್ ಕಚೇರಿ ಧ್ವಂಸ ಪ್ರಕರಣ.  ವಯನಾಡು ಸಂಸದ ರಾಹುಲ್ ಗಾಂಧಿ ಕಚೇರಿಯನ್ನು ಧ್ವಂಸ ಮಾಡಿ, ಕಚೇರಿಯಲ್ಲಿದ್ದ ಮಹಾತ್ಮಾ ಗಾಂಧಿ ಫೋಟೋವನ್ನು ಪುಡಿ ಮಾಡಿದ್ದರು. ಇದು ಎಸ್ಎಫ್ಐ ಕೃತ್ಯ ಎಂದಿತ್ತು. ಘಟನೆ ನಡೆದ ಬೆನ್ನಲ್ಲೇ ಎಸ್ಎಫ್ಐ ಮೇಲೆ ಗೂಬೆ ಕೂರಿಸಿದ್ದ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಇದೀಗ ತೀವ್ರ ಹಿನ್ನಡೆಯಾಗಿದೆ. ಕಚೇರಿ ಧ್ವಂಸ ಮಾಡಿದ ಪ್ರಕರಣದಲ್ಲಿ ತಮ್ಮದೇ ಪಕ್ಷದ ಕಾರ್ಯಕರ್ಕರು, ವಯನಾಡು ಸಂಸದ ರಾಹುಲ್ ಗಾಂಧಿ ಪಿಎ ಬಂಧಿಸಲಾಗಿದೆ.  

ಈ ನಡೆ ಇದೀಗ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್‌ಗೆ ಹಿನ್ನಡೆ ತಂದಿದೆ. ಈ ಕುರಿತು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಟ್ವೀಟ್ ಮೂಲಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ ಸುಳ್ಳುಗಳು ಬಟಾಬಯಲಾಗಿದೆ ಎಂದಿದ್ದಾರೆ.

 

 

ಜೂನ್ ತಿಂಗಳಲ್ಲಿ ನಡೆದಿದ್ದ ಕೃತ್ಯ 
ಕೇರಳದ ವಯನಾಡು ಕ್ಷೇತ್ರದ ಸಂಸದ ರಾಹುಲ್‌ ಗಾಂಧಿ ಅವರ ಕಚೇರಿಯನ್ನು  ಧ್ವಂಸಗೊಳಿಸಿದ ಘಟನೆ ನಡೆದಿತ್ತು. ಇದರ ಬೆನ್ನಲ್ಲೇ ಇದು ಎಸ್ಎಫ್ಐ ಕೃತ್ಯ. ಇದಕ್ಕೆ ಸಿಪಿಎಂ ಕಾರ್ಯಕರ್ತರು ಸಾಥ್ ನೀಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಇತ್ತ ಪೊಲೀಸರು ಸಿಪಿಎಂ ಯುವ ವೇದಿಕೆಯ ಕಾರ್ಯಕರ್ತರು ಸೇರಿದಂತೆ 8 ಮಂದಿಯನ್ನು  ಬಂಧಿಸಿದ್ದರು.  ಈ ದಾಳಿಯನ್ನು ಕಾಂಗ್ರೆಸ್‌ ನಾಯಕರು ಕಟುವಾಗಿ ಟೀಕಿಸಿದ್ದರು. 

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ವಯ್ನಾಡ್‌ ಕಚೇರಿ ಧ್ವಂಸ

ಕೇರಳದ ಬೆಟ್ಟಗುಡ್ಡ ಪ್ರದೇಶಗಳಲ್ಲಿ ಬಫರ್‌ ಜೋನ್‌ ನಿರ್ಮಾಣ ವಿಚಾರದಲ್ಲಿ ಸಂಸದ ರಾಹುಲ್‌ ಗಾಂಧಿ ಸಫಲರಾಗಿಲ್ಲ ಎಂದು ಆರೋಪಿಸಿ ಎಸ್‌ಎಫ್‌ಐನ ನೂರಾರು ಕಾರ್ಯಕರ್ತರು ಶುಕ್ರವಾರ ರಾಹುಲ್‌ ಕಚೇರಿ ಬಳಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಕಚೇರಿ ಸಿಬ್ಬಂದಿ ಮತ್ತು ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದಿತ್ತು. ಇದರ ನಡುವೆ ಕಚೇರಿಯೂ ಧ್ವಂಸಗೊಂಡಿತ್ತು. ದೇಶದೆಲ್ಲೆಡೆ ರಾಹುಲ್ ಗಾಂಧಿ ಕಚೇರಿ ಮೇಲೆ, ಕಾಂಗ್ರೆಸ್ ಮೇಲೆ ದಾಳಿಯಾಗುತ್ತಿದೆ ಎಂದು ಬಿಂಬಿಸಲು ರಾಹುಲ್ ಗಾಂಧಿ ಸಹಾಯಕ ಹಾಗೂ ಮೂವರು ಕಾಂಗ್ರೆಸ್ ಕಾರ್ಯಕರ್ತರೇ ಇದನ್ನು ಮಾಡಿದ್ದಾರೆ ಅನ್ನೋದು ಸಾಬೀತಾಗಿದೆ. ಹೀಗಾಗಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

 

 

ಪಿಎಫ್ಐ ಭಾವುಟ ಹಿಡಿದು ಒಳನುಗ್ಗಿದ ಕಾರ್ಯಕರ್ತರು ಕಚೇರಿ ಧ್ವಂಸ ಮಾಡಿರುವ ವಿಡಿಯೋ ತನಿಖೆಯನ್ನು ಬೇರೊಂದು ದಿಕ್ಕಿನತ್ತ ಸಾಗುವಂತೆ ಮಾಡಿತ್ತು. ಆದರೆ ಅಸಲಿಗೆ ಕಾಂಗ್ರೆಸ್ ಕಾರ್ಯಕರ್ತರೇ ಪಿಎಫ್ಐ ಬಾವುಟ ಹಿಡಿದು ತಮ್ಮದೇ ಕಚೇರಿಗೆ ನುಗ್ಗಿ ಧ್ವಂಸ ಮಾಡಿದ್ದರು. ಇದು ಪೂರ್ವನಿಯೋಜಿತ ಕೃತ್ಯ. ಕೇರಳದಲ್ಲಿ ಅರಾಜಕತೆ ತಾಂಡವವಾಡುತ್ತಿದೆ. ಕೇರಳ ಕಾಂಗ್ರೆಸ್ ಕಚೇರಿ ಮೇಲೆ ದಾಳಿಯಾಗಿದ್ದರೆ, ಕೇಂದ್ರದಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮೇಲೆ ಇಡಿ ಮುಂದಿಟ್ಟು ದಾಳಿ ಮಾಡಲಾಗುತ್ತಿದೆ ಎಂದು ಕೇರಳ ಕಾಂಗ್ರೆಸ್ ಮುಖಂಡ ಟಿ ಸಿದ್ದಿಕಿ ಆರೋಪಿಸಿದ್ದರು. ಇದೀಗ ಈ ಎಲ್ಲಾ ಹೇಳಿಕೆಗಳು ಕಾಂಗ್ರೆಸ್‌ಗೆ ತಿರುಗುಬಾಣವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕರ್ನಾಟಕಕ್ಕೆ ಶೀತ ಅಲೆಯ ಕಂಟಕ: ರಾಯಚೂರಿನಲ್ಲಿ 9.4 ಡಿಗ್ರಿಗೆ ಕುಸಿದ ತಾಪಮಾನ! ಎಲ್ಲೆಲ್ಲಿ ಆರೆಂಜ್ ಅಲರ್ಟ್?
ಮುಕೇಶ್ ಅಂಬಾನಿ 68ರಲ್ಲೂ ಫಿಟ್ & ಎನರ್ಜಿಟಿಕ್‌ ಆಗಿರಲು ಬೆಳಗ್ಗಿನ ಈ ಅಭ್ಯಾಸ ಕಾರಣ!