ರಾಹುಲ್ ಗಾಂಧಿ ಬೆಂಕಿ ಭಾಷಣ: ಪಾಕಿಸ್ತಾನ ಮಾಜಿ ಸಚಿವ ಮೆಚ್ಚುಗೆ

Published : May 03, 2024, 04:38 AM IST
ರಾಹುಲ್ ಗಾಂಧಿ ಬೆಂಕಿ ಭಾಷಣ: ಪಾಕಿಸ್ತಾನ ಮಾಜಿ ಸಚಿವ ಮೆಚ್ಚುಗೆ

ಸಾರಾಂಶ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಇತ್ತೀಚಿನ ಭಾಷಣವನ್ನು ಮೆಚ್ಚಿ ಪಾಕಿಸ್ತಾನದ ಮಾಜಿ ಸಚಿವ ಫವಾದ್ ಹುಸ್ಸೇನ್‌ ನೀಡಿದ ಹೇಳಿಕೆಯೊಂದು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. 

ನವದೆಹಲಿ (ಮೇ.03): ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಇತ್ತೀಚಿನ ಭಾಷಣವನ್ನು ಮೆಚ್ಚಿ ಪಾಕಿಸ್ತಾನದ ಮಾಜಿ ಸಚಿವ ಫವಾದ್ ಹುಸ್ಸೇನ್‌ ನೀಡಿದ ಹೇಳಿಕೆಯೊಂದು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚಿನ ಚುನಾವಣಾ ಪ್ರಚಾರ ಭಾಷಣವೊಂದರಲ್ಲಿ ರಾಹುಲ್‌ ಗಾಂಧಿ, ಬಿಜೆಪಿ ಮತ್ತು ಪ್ರಧಾನಿ ಮೋದಿ ಬಗ್ಗೆ ತೀವ್ರ ವಾಗ್ದಾಳಿ ನಡೆಸಿದ್ದರು. ಜೊತೆಗೆ ರಾಮಮಂದಿರ ಉದ್ಘಾಟನೆ, ಬಿಜೆಪಿಯಿಂದ ದಮನಿತ ಸಮುದಾಯದ ಕಡೆಗಣನೆ ವಿಷಯವನ್ನು ಪ್ರಸ್ತಾಪಿಸಿದ್ದಸರು. ಈ ಭಾಷಣದ ಕ್ಲಿಪ್‌ ಒಂದನ್ನು ಜಾಲತಾಣದಲ್ಲಿ ಹಾಕಿರುವ ಪಾಕಿಸ್ತಾನದ ಮಾಜಿ ಸಚಿವ ಫವಾದ್‌ ಹುಸ್ಸೇನ್‌, ‘ರಾಹುಲ್‌ ಬೆಂಕಿ ಭಾಷಣ’ ಎಂದು ಹೊಗಳಿದ್ದರು.

ಈ ವಿಷಯದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಅಮಿತ್‌ ಮಾಳವೀಯ, ಪಾಕಿಸ್ತಾನದ ಜೊತೆಗಿನ ತನ್ನ ಸಂಬಂಧವನ್ನು ಕಾಂಗ್ರೆಸ್‌ ಬಹಿರಂಗಪಡಿಸಬೇಕು. ರಾಹುಲ್‌ ಗಾಂಧಿಯನ್ನು ಪಾಕಿಸ್ತಾನದ ಮಾಜಿ ಸಚಿವರು ಹೊಗಳುತ್ತಿದ್ದಾರೆ. ಕಾಂಗ್ರೆಸ್‌ ಪಾಕಿಸ್ತಾನದಿಂದ ಚುನಾವಣೆಗೆ ಸ್ಪರ್ಧಿಸುತ್ತಿದೆಯೇ? ಎಂದು ಪ್ರಶ್ನಿಸಿದ್ದಾರೆ. ಜೊತೆಗೆ, ಮುಸ್ಲಿಂ ಲೀಗ್‌ನ ಛಾಯೆ ಇದ್ದ ಪ್ರಣಾಳಿಕೆಯಿಂದ ಹಿಡಿದು, ಗಡಿಯಾಚೆಗಿಂದ ಬೆಂಬಲದವರೆಗಿನ ಘಟನೆ ನೋಡಿದರೆ, ಪಾಕಿಸ್ತಾನದ ಜೊತೆಗಿನ ಕಾಂಗ್ರೆಸ್‌ ನಂಟು ಮತ್ತಷ್ಟು ಖಚಿತಪಡುತ್ತಿದೆ ಎಂದು ಆರೋಪಿಸಿದ್ದಾರೆ.

ರಾಕ್ಷಸ ಪರಾರಿಯಾದ ಬಗ್ಗೆ ಪ್ರಧಾನಿ ಮೋದಿ ಹೇಳಲಿ: ರಾಹುಲ್ ಗಾಂಧಿ

ಬಿಜೆಪಿ ಮತ್ತೊಬ್ಬ ನಾಯಕ ಶೆಹಜಾದ್‌ ಪೂನಾವಾಲಾ, ‘ಕಾಂಗ್ರೆಸ್‌ ಕೇ ಹಾಥ್‌ ಪಾಕಿಸ್ತಾನ್‌ ಕೇ ಸಾಥ್‌’ ಎಂದು ಕಿಡಿಕಾರಿದ್ದಾರೆ. ಈ ಮೊದಲು ಲಷ್ಕರ್‌ ಉಗ್ರ ಹಫೀಜ್‌ ಸಯೀದ್‌ ಕಾಂಗ್ರೆಸ್‌ ನನ್ನ ಅತ್ಯಂತ ನೆಚ್ಚಿನ ಪಕ್ಷ ಎಂದಿದ್ದರು. ಮಣಿಶಂಕರ್‌ ಅಯ್ಯರ್‌ ಮೋದಿ ಟೀಕಿಸುತ್ತಾ ಪಾಕಿಸ್ತಾನವನ್ನು ಬೆಂಬಲಿಸಿದ್ದರು. ಅದರ ಜೊತೆಗೆ ಇತ್ತೀಚೆಗೆ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಿದ್ದೂ ನೋಡಿದ್ದೆವು; ಕಾಂಗ್ರೆಸ್‌ ನಾಯಕ ಬಿ.ಕೆ.ಹರಿಪ್ರಸಾದ್‌ ಬಹಿರಂಗವಾಗಿಯೇ ಪಾಕಿಸ್ತಾನದ ಪರ ಬ್ಯಾಟಿಂಗ್‌ ಮಾಡಿದ್ದರು. ಜೊತೆಗೆ ಪದೇ ಪದೇ ಕಾಂಗ್ರೆಸ್‌ ನಾಯಕರು ಪಾಕ್‌ ಉಗ್ರರನ್ನು ಬೆಂಬಲಿಸಿದ್ದನ್ನು ನಾವು ಮರೆಯುವಂತಿಲ್ಲ ಎಂದು ಕಿಡಿಕಾರಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ
ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ