
ನವದೆಹಲಿ(ಅ. 12) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಮೇಲೆ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ವಾಗ್ದಾಳಿ ಮಾಡಿದ್ದಾರೆ. ಕೃಷಿ ಮಸೂದೆ ವಿಚಾರದಲ್ಲಿ ರಾಹುಲ್ ಮತ್ತು ಪ್ರಿಯಾಂಕಾ ರೈತರನ್ನು ತಪ್ಪು ದಾರಿಗೆ ಎಳೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಹುಲ್ ಮತ್ತು ಪ್ರಿಯಾಂಕಾಗೆ ಮೇಕೆ ಮತ್ತು ಕುರಿ ನಡುವಿನ ವ್ಯತ್ಯಾಸ ಹೇಳಲು ಗೊತ್ತಿಲ್ಲ,, ತಿಳಿದುಕೊಳ್ಳದೆ ಕೃಷಿ ಮಸೂದೆ ವಿಚಾರದಲ್ಲಿ ಟೀಕೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
'ರಾಹುಲ್ ಗಾಂಧಿ ತಮ್ಮನ್ನು ತಾವು ರಾಜ ಎಂದುಕೊಂಡಿದ್ದಾರೆ'
ಬಿಜೆಪಿ ರೈತ ಘಟಕವನ್ನು ಮುನ್ನಡೆಸುತ್ತಿರುವ ಶೇಖಾವತ್, ರಾಹುಲ್ ಮತ್ತು ಪ್ರಿಯಾಂಕಾಗೆ ಹೊಲದಲ್ಲಿ ಬೆಳೆದಿರುವ ಬೆಳೆಯ ಎಲೆಗಳನ್ನು ನೋಡಿ ಅದು ಯಾವುದೆಂದು ಗುರುತಿಸಲು ಸಾಧ್ಯವಿಲ್ಲ. ಒಂದು ವೇಳೆ ಸರಿಯಾಗಿ ಗುರುತಿಸಿದರೆ ನಾನು ರಾಜಕಾರಣದಿಂದ ನಿವೃತ್ತಿ ಪಡೆದುಕೊಳ್ಳುತ್ತೇನೆ ಎಂದು ಸವಾಲು ಹಾಕಿದ್ದಾರೆ.
ಕೃಷಿ ಕಾಯ್ದೆ ವಿರೋಧಿಸಿ ರಾಹುಲ್ ಗಾಂಧಿ ಪಂಜಾಬಿನಲ್ಲಿ 'ಖೇತಿ ಬಚಾವೊ ಯಾತ್ರೆ' ನಡೆಸಿದ್ದರು. ಎಪಿಎಂಸಿ ಕಾಯಿದೆ ಮತ್ತು ಕೃಷಿ ಕಾಯಿದೆ ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ