ಯುವಕರಿಗೆ ಹೆಚ್ಚು ಆದ್ಯತೆ ಕೊಟ್ಟು ತಪ್ಪು ಮಾಡಿದೆ: ರಾಹುಲ್‌ ಗಾಂಧಿ

Published : Mar 10, 2021, 01:44 PM IST
ಯುವಕರಿಗೆ ಹೆಚ್ಚು ಆದ್ಯತೆ ಕೊಟ್ಟು ತಪ್ಪು ಮಾಡಿದೆ: ರಾಹುಲ್‌ ಗಾಂಧಿ

ಸಾರಾಂಶ

ಯುವಕರಿಗೆ ಹೆಚ್ಚು ಆದ್ಯತೆ ಕೊಟ್ಟು ತಪ್ಪು ಮಾಡಿದೆ: ರಾಹುಲ್‌ ಗಾಂಧಿ| ಮತ್ತೆ ಹಿರಿಯರಿಗೂ ಮಣೆ ಹಾಕುವ ಸುಳಿವು

ನವದೆಹಲಿ(ಮಾ.10): ತಾವು ಕಾಂಗ್ರೆಸ್‌ ಅಧ್ಯಕ್ಷರಾಗಿದ್ದ ವೇಳೆ ಯುವ ನಾಯಕರಿಗೆ ಹೆಚ್ಚಿನ ಆದ್ಯತೆ ನೀಡಿ ತಪ್ಪು ಮಾಡಿದೆ ಎಂದು ರಾಹುಲ್‌ ಗಾಂಧಿ ಹೇಳಿಕೆ ನೀಡಿದ್ದಾರೆ. ಪಕ್ಷದ ಹಲವು ಹಿರಿಯ ನಾಯಕರು ಹೈಕಮಾಂಡ್‌ ವಿರುದ್ಧ ಹಲವು ಸುತ್ತಿನಲ್ಲಿ ಬಂಡೆದ್ದ ಬೆನ್ನಲ್ಲೇ ರಾಹುಲ್‌ ನೀಡಿರುವ ಈ ಹೇಳಿಕೆ ಸಾಕಷ್ಟುಕುತೂಹಲ ಕೆರಳಿಸಿದೆ.

ಯುವ ಕಾಂಗ್ರೆಸ್‌ನ ಪದಾಧಿಕಾರಿಗಳ ಸಭೆ ಉದ್ದೇಶಿಸಿ ಸೋಮವಾರ ಮಾತನಾಡಿದ ರಾಹುಲ್‌ ಗಾಂಧಿ ರಾಜಕೀಯದಲ್ಲಿ ವಿಶ್ವಾಸ, ನಂಬಿಕೆ ಮತ್ತು ಪಕ್ಷದ ಸಿದ್ಧಾಂತಗಳ ಬಗೆಗಿನ ಬದ್ಧತೆಯ ಬಗ್ಗೆ ಗಂಭೀರವಾಗಿ ಪ್ರಸ್ತಾಪಿಸಿದ್ದಾರೆ. ಅಲ್ಲದೆ ಹೃದಯಪೂರ್ವಕವಾಗಿ ಪಕ್ಷವನ್ನು ನಂಬಿರುವವರಿಗೆ ಪಕ್ಷದಲ್ಲಿ ಹೆಚ್ಚಿನ ಮನ್ನಣೆ ನೀಡಬೇಕಾದ ಅಗತ್ಯವಿದೆ ಎಂದು ಪ್ರಸ್ತಾಪಿಸಿದ್ದಾರೆ.

ರಾಹುಲ್‌ ಗಾಂಧಿ ಶೀಘ್ರವೇ ಮತ್ತೆ ಪಕ್ಷದ ಅಧ್ಯಕ್ಷ ಹುದ್ದೆ ವಹಿಸಿಕೊಳ್ಳಬಹುದು ಎಂಬ ವರದಿಗಳ ಬೆನ್ನಲ್ಲೇ ಅವರಿಂದ ಇಂಥ ಹೇಳಿಕೆ ವ್ಯಕ್ತವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶೇ.100ರಷ್ಟು ಕ್ರಿಶ್ಚಿಯನ್ ಜನಸಂಖ್ಯೆ ಇರುವ ಕೇರಳದ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಗೆಲುವು
ಬಾಡಿಗೆದಾರರ ಮನೆಯಿಂದ ಹೊರಹಾಕಲು ಬಂದ ಮಾಲೀಕನಿಗೆ ಆಘಾತ, ತಾಯಿ-ಇಬ್ಬರು ಮಕ್ಕಳ ಶವಪತ್ತೆ