ರೈಲಿನ ಜತೆಗೇ ಓಡಿ ಅಳುತ್ತಿದ್ದ ಮಗುವಿಗೆ ಹಾಲು ಕೊಟ್ಟ ಪೇದೆ; ಕರ್ತವ್ಯ ಪ್ರಜ್ಞೆಗೆ ಸಲಾಂ ಎಂದ ಗೋಯೆಲ್

Published : Jun 05, 2020, 12:19 PM ISTUpdated : Jun 05, 2020, 12:29 PM IST
ರೈಲಿನ ಜತೆಗೇ ಓಡಿ ಅಳುತ್ತಿದ್ದ ಮಗುವಿಗೆ ಹಾಲು ಕೊಟ್ಟ ಪೇದೆ; ಕರ್ತವ್ಯ ಪ್ರಜ್ಞೆಗೆ ಸಲಾಂ ಎಂದ ಗೋಯೆಲ್

ಸಾರಾಂಶ

ಪ್ರಾಣದ ಹಂಗು ತೊರೆದು ಹಸುಗೂಸಿಗೆ ಚಲಿಸುತ್ತಿದ್ದ ರೈಲಿಗೆ ಓಡಿ ಹೋಗಿ ಹಾಲು ನೀಡಿದ ರೈಲ್ವೇ ಪೊಲೀಸ್ ಕಾರ್ಯ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ನವದೆಹಲಿ(ಜೂ.05)‌: ಕರ್ನಾಟಕದ ಬೆಳಗಾವಿಯಿಂದ ಉತ್ತರಪ್ರದೇಶದ ಗೋರಖ್‌ಪುರಕ್ಕೆ ವಲಸಿಗ ಕಾರ್ಮಿಕರನ್ನು ಹೊತ್ತು ಸಾಗುತ್ತಿದ್ದ ಶ್ರಮಿಕ ಸ್ಪೆಷಲ್‌ ರೈಲಿನ ಜತೆಜತೆಗೇ ಓಡಿ, ಹಸಿವು ತಾಳಲಾರದೆ ರಚ್ಚೆ ಹಿಡಿದ್ದ 4 ತಿಂಗಳ ಕಂದಮ್ಮವೊಂದಕ್ಕೆ ಹಾಲಿನ ಪ್ಯಾಕೆಟ್‌ ನೀಡುವ ಮೂಲಕ ಮಧ್ಯಪ್ರದೇಶದ ರೈಲ್ವೆ ರಕ್ಷಣಾ ದಳ (ಆರ್‌ಪಿಎಫ್‌)ದ ಪೇದೆಯೊಬ್ಬರು ಮಾನವೀಯತೆ ಮೆರೆದಿದ್ದಾರೆ.

ಪ್ರಾಣದ ಹಂಗು ತೊರೆದು ಹಸುಗೂಸಿನ ಹಸಿವು ನೀಗಿಸಿದ ಈ ಪೇದೆಯ ಕಾರ್ಯಕ್ಕೆ ಸ್ವತಃ ರೈಲ್ವೆ ಸಚಿವ ಪೀಯೂಷ್‌ ಗೋಯಲ್‌ ಅವರೇ ಫಿದಾ ಆಗಿದ್ದು, ನಗದು ಬಹುಮಾನ ಘೋಷಿಸಿದ್ದಾರೆ. ರೈಲು ಹೊರಟು ಬಿಡುತ್ತೆ ಎಂಬ ಧಾವಂತದಲ್ಲಿ ಈ ಪೇದೆ ಶರವೇಗದಲ್ಲಿ ಓಡುವ ವಿಡಿಯೋ ಭಾರಿ ವೈರಲ್‌ ಆಗಿದೆ.

ಈ ಸಾಹಸ ಮಾಡಿದ ಪೇದೆ- ಇಂದರ್‌ ಸಿಂಗ್‌ ಯಾದವ್‌ (33). ಬೆಳಗಾವಿಯಿಂದ ಗೋರಖ್‌ಪುರಕ್ಕೆ ಹೊರಟಿದ್ದ ಶ್ರಮಿಕ್‌ ಸ್ಪೆಷಲ್‌ ರೈಲು ಮೇ 31ರಂದು ಬೆಳಗ್ಗೆ 8.30ಕ್ಕೆ ಭೋಪಾಲ್‌ ನಿಲ್ದಾಣಕ್ಕೆ ಬಂದಿತ್ತು. ಈ ವೇಳೆ ಯಾದವ್‌ರನ್ನು ಕಂಡ ಶರೀಫ್‌ ಹಾಶ್ಮಿ ಎಂಬ ಮಹಿಳೆಯೊಬ್ಬಳು, ತನ್ನ 4 ತಿಂಗಳ ಮಗುವಿಗೆ ಹಾಲು ಸಿಗುತ್ತಿಲ್ಲ. ಮಗು ಹಸಿವು ತಾಳದೇ ನಿರಂತರವಾಗಿ ಅಳುತ್ತಿದೆ. ಸಹಾಯ ಮಾಡಿ ಎಂದು ಬೇಡಿದ್ದಳು.

'ಸಿದ್ದರಾಮಯ್ಯ ಮೋಸ ಮಾಡಿದ್ದಕ್ಕೆ ನಾವು ಕಾಂಗ್ರೆಸ್‌ ಬಿಟ್ಟಿದ್ದು'

ತಡ ಮಾಡದೆ ಯಾದವ್‌ ಅವರು ನಿಲ್ದಾಣದಿಂದ ಹೊರಗೆ ಓಡಿ ಹೋಗಿ ಒಂದು ಪ್ಯಾಕೆಟ್‌ ಹಾಲು ಖರೀದಿಸಿದರು. ಅಷ್ಟರಲ್ಲಾಗಲೇ ರೈಲು ಹೊರಟಿತ್ತು. ತಕ್ಷಣವೇ ಯಾದವ್‌ ಅವರು ರೈಲಿನ ಜತೆಗೇ ಓಡಿ ಮಹಿಳೆಯ ಕೈಗೆ ಹಾಲಿನ ಪ್ಯಾಕೆಟ್‌ ತಲುಪಿಸಿದರು. ಅಪರಿಚಿತ ಪೇದೆಯ ಈ ಸಾಹಸ ಕಂಡು ಹಸುಗೂಸಿನ ತಾಯಿ ನಮಸ್ಕರಿಸಿ ಕೃತಜ್ಞತೆ ತೋರಿದಳು. ಈ ದೃಶ್ಯ ನೆರೆದಿದ್ದವರ ಹೃದಯ ಸ್ಪರ್ಶಿಸಿತು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಒಂದೇ ತಿಂಗಳಲ್ಲಿ ಲಕ್ಷ ಸಂಬಳದ ಕೆಲಸದಿಂದ ವಜಾಗೊಂಡ ಆಘಾತ, ತಿಂಗಳಲ್ಲಿ 6 ಆ್ಯಪ್ ಮಾಡಿ ಪುಟಿದೆದ್ದ 21ರ ಐಐಟಿ ಯುವಕ!
ಸಂತ್ರಸ್ತೆಯ ರಕ್ಷಣೆಗೆ ಧಾವಿಸಿದ 'ಶ್ವಾನ ಪಡೆ': ಸಿಸಿಟಿವಿಯಲ್ಲಿ ಸೆರೆಯಾಯ್ತು ಮೈ ನವಿರೇಳಿಸುವ ದೃಶ್ಯ!