ರೈಲ್ವೆ ಚಾಲಕರಿಗೆ 10 ದಿನಕ್ಕೆ ಒಂದೇ ರಜೆ : ರಾಹುಲ್‌ಗೆ ಚಾಲಕರ ಸಂಘದ ಅಧ್ಯಕ್ಷನ ದೂರು

Published : Jul 07, 2024, 10:47 AM IST
ರೈಲ್ವೆ ಚಾಲಕರಿಗೆ 10 ದಿನಕ್ಕೆ  ಒಂದೇ ರಜೆ : ರಾಹುಲ್‌ಗೆ ಚಾಲಕರ ಸಂಘದ ಅಧ್ಯಕ್ಷನ ದೂರು

ಸಾರಾಂಶ

ಇತ್ತೀಚೆಗೆ ದೇಶದ ವಿವಿಧ ಭಾಗಗಳಲ್ಲಿ ನಡೆದ ರೈಲು ಅಪಘಾತಗಳಿಗೆ, ರೈಲಿನ ಚಾಲಕರಿಗೆ ಸೂಕ್ತ ವಿಶ್ರಾಂತಿ ನೀಡದೇ ಇರುವುದೇ ಕಾರಣ ಎಂದು ದೂರಿರುವ ದಕ್ಷಿಣ ಭಾರತದ ರೈಲ್ವೆ ಚಾಲಕರ ಸಂಘದ ಅಧ್ಯಕ್ಷ ಕುಮಾರೇಶನ್‌, ಈ ಕುರಿತು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರ ಗಮನ ಸೆಳೆದಿದ್ದಾಗಿ ಹೇಳಿದ್ದಾರೆ.  

ನವದೆಹಲಿ: ಇತ್ತೀಚೆಗೆ ದೇಶದ ವಿವಿಧ ಭಾಗಗಳಲ್ಲಿ ನಡೆದ ರೈಲು ಅಪಘಾತಗಳಿಗೆ, ರೈಲಿನ ಚಾಲಕರಿಗೆ ಸೂಕ್ತ ವಿಶ್ರಾಂತಿ ನೀಡದೇ ಇರುವುದೇ ಕಾರಣ ಎಂದು ದೂರಿರುವ ದಕ್ಷಿಣ ಭಾರತದ ರೈಲ್ವೆ ಚಾಲಕರ ಸಂಘದ ಅಧ್ಯಕ್ಷ ಕುಮಾರೇಶನ್‌, ಈ ಕುರಿತು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರ ಗಮನ ಸೆಳೆದಿದ್ದಾಗಿ ಹೇಳಿದ್ದಾರೆ.

ಶುಕ್ರವಾರ ಇಲ್ಲಿ ರಾಹುಲ್‌ ಗಾಂಧಿ ಅವರು ರೈಲ್ವೆ ಚಾಲಕರನ್ನು ಭೇಟಿ ಮಾಡಿ ಅವರ ಕಷ್ಟ-ಸುಖ ಆಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರೇಶನ್‌, ‘ರೈಲ್ವೆ ಚಾಲಕರು ಅದರಲ್ಲೂ ಗೂಡ್ಸ್‌ ರೈಲಿನ ಚಾಲಕರು ದಿನಕ್ಕೆ 14-16 ಗಂಟೆ ಕೆಲಸ ಮಾಡುವ ಅನಿವಾರ್ಯತೆ ಇದೆ. ಒಮ್ಮೊಮ್ಮೆ ಸತತ 4 ರಾತ್ರಿ ಕೆಲಸ ಮಾಡಬೇಕಾಗಿ ಬರುತ್ತದೆ. ಚಾಲಕರಿಗೆ 3-4 ದಿನಗಳಿಗೆ ಒಮ್ಮೆ ಮನೆಗೆ ಹೋಗುವ ಅವಕಾಶ ಸಿಗುತ್ತದೆ. ಇದೆಲ್ಲರ ಹೊರತಾಗಿಯೂ ಅವರಿಗೆ ವಾರಕ್ಕೆ ಒಂದು ರಜೆ ನೀಡುವ ಬದಲು 10 ದಿನಗಳಿಗೆ ಒಂದು ರಜೆ ನೀಡಲಾಗುತ್ತಿದೆ’ ಎಂದು ದೂರಿದರು.

ಮಂಗಳೂರಿಗೆ ಬೇಕು ಪ್ರತ್ಯೇಕ ರೈಲ್ವೆ ವಿಭಾಗ: ಜಿಲ್ಲೆಯ ರೈಲ್ವೆ ಬಳಕೆದಾರರಿಂದ ಸಹಿ ಅಭಿಯಾನ!

‘ನಿಯಮಗಳ ಅನ್ವಯ ಚಾಲಕರಿಗೆ ವಾರಕ್ಕೆ 40-64 ಗಂಟೆಗಳ ವಿಶ್ರಾಂತಿ ನೀಡಬೇಕು. ಆದರೆ ಅವರಿಗೆ 30 ತಾಸು ಮಾತ್ರವೇ ನೀಡಲಾಗುತ್ತಿದೆ. ರೈಲ್ವೆಯಲ್ಲಿ ವೀಕ್ಲಿ ರೆಸ್ಟ್‌ ಬದಲು ಪೀರಿಯಾಡಿಕ್‌ ರೆಸ್ಟ್‌ ಎಂಬ ನಿಯಮ ಇದೆ. ಇದರನ್ವಯ ಕರ್ತವ್ಯದ ಒತ್ತಡದಿಂದ ನಿವಾರಣೆಗೆ 16 ತಾಸು ವಿಶ್ರಾಂತಿ ನೀಡಲಾಗುತ್ತದೆ. ಅದಾದ ಬಳಿಕ ಸತತ 30 ತಾಸು ವಿಶ್ರಾಂತಿ ನೀಡಿದರೆ ಮಾತ್ರವೇ ಚಾಲಕರು ಪೂರ್ಣ ವಿಶ್ರಾಂತಿ ಪಡೆಯಲು ಸಾಧ್ಯ. ಆದರೆ ಈ 30 ತಾಸಿನ ವಿಶ್ರಾಂತಿ ನೀಡುತ್ತಿಲ್ಲ. ಈ ಎಲ್ಲಾ ಕಾರಣಗಳಿಂದಾಗಿ ಸೂಕ್ತಿ ವಿಶ್ರಾಂತಿ ಸಿಗದ ಚಾಲಕರು ಅಪಘಾತದ ಘಟನೆಗಳಿಗೆ ಕಾರಣರಾಗುತ್ತಿದ್ದಾರೆ’ ಎಂದು ಕುಮಾರೇಷನ್‌ ಹೇಳಿದ್ದಾರೆ.

ವಿಶ್ವದ ಅತೀ ಎತ್ತರದ ರೈಲ್ವೆ ಬ್ರಿಡ್ಜ್‌ನಲ್ಲಿ ಭಾರತೀಯ ರೈಲ್ವೆಯ ಯಶಸ್ವಿ ಟ್ರಯಲ್ ರನ್ : ಮೋಹಕ ವೀಡಿಯೋ ವೈರಲ್

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ
ಭೂರೂಪ ಬದಲಾಯಿಸಿದ ಪ್ರವಾಹ.. ವಿಶ್ವದ ಅತಿದೊಡ್ಡ ನದಿ ಮಜುಲಿ ದ್ವೀಪ ಬಗ್ಗೆ ನಿಮಗೆ ಗೊತ್ತೇ?