
ನವದೆಹಲಿ(ಮಾ.31): ಇನ್ನು ಮುಂದಿನ ದಿನಗಳಲ್ಲಿ ದೂರದ ಊರಿಗೆ ಪ್ರಯಾಣಿಸುವ ಪ್ರಯಾಣಿಕರು ರೈಲಿನಲ್ಲಿ ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ತಮ್ಮ ಮೊಬೈಲ್ ಚಾಜ್ರ್ ಹಾಕಿಕೊಳ್ಳುವಂತಿಲ್ಲ.
ಹೌದು, ಇತ್ತೀಚಿನ ದಿನಗಳಲ್ಲಿ ರಾತ್ರಿ ಹೊತ್ತು ರೈಲಿನಲ್ಲಿ ಸಂಭವಿಸುತ್ತಿರುವ ಅಗ್ನಿ ಅವಘಡ ನಿಯಂತ್ರಣಕ್ಕಾಗಿ ಈ ಕ್ರಮಕ್ಕೆ ನಿರ್ಧರಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಈ ಬಗ್ಗೆ ಪಿಟಿಐ ಸುದ್ದಿಸಂಸ್ಥೆಗೆ ಮಾಹಿತಿ ನೀಡಿದ ಪಶ್ಚಿಮ ರೈಲ್ವೆ ವಿಭಾಗದ ಸಿಪಿಆರ್ಒ ಸುಮಿತ್ ಠಾಕೂರ್, ‘ಮಾ.16ರಿಂದಲೇ ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಮೊಬೈಲ್ ಚಾಜ್ರ್ ಹಾಕಿಕೊಳ್ಳದ ಕ್ರಮವನ್ನು ಜಾರಿ ಮಾಡಲಾಗುತ್ತಿದೆ. ಈ ಬಗ್ಗೆ ಎಲ್ಲಾ ರೈಲ್ವೆ ವಲಯಗಳಿಗೆ ರೈಲ್ವೆ ಮಂಡಳಿ ಸೂಚಿಸಿದೆ’ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ