ಸೋಲಿನಿಂದ ಕಂಗೆಟ್ಟ ಕಾಂಗ್ರೆಸ್, ಇಂದು ಸಂಜೆ ಸಿಎಂ ಸ್ಥಾನಕ್ಕೆ ಗೆಹ್ಲೋಟ್ ರಾಜೀನಾಮೆ!

Published : Dec 03, 2023, 04:08 PM ISTUpdated : Dec 03, 2023, 04:22 PM IST
ಸೋಲಿನಿಂದ ಕಂಗೆಟ್ಟ ಕಾಂಗ್ರೆಸ್, ಇಂದು ಸಂಜೆ ಸಿಎಂ ಸ್ಥಾನಕ್ಕೆ ಗೆಹ್ಲೋಟ್ ರಾಜೀನಾಮೆ!

ಸಾರಾಂಶ

ಪಂಚ ರಾಜ್ಯಗಳ ಪೈಕಿ ಕಾಂಗ್ರೆಸ್ ಕೇವಲ ತೆಲಂಗಾಣದಲ್ಲಿ ಅಧಿಕಾರ ಹಿಡಿದಿದೆ. ರಾಜಸ್ಥಾನ, ಮಧ್ಯಪ್ರದೇಶ, ಚತ್ತೀಸಘಡದಲ್ಲಿ ಕೈಸುಟ್ಟುಕೊಂಡಿದೆ. ರಾಜಸ್ಥಾನದಲ್ಲಿ ಗೆಲುವಿನ ವಿಶ್ವಾಸದಲ್ಲಿದ್ದ ಸಿಎಂ ಅಶೋಕ್ ಗೆಹ್ಲೋಟ್ ತೀವ್ರ ಮುಖಭಂಗ ಅನುಭವಿಸಿದ್ದಾರೆ. ಹೀನಾ ಸೋಲಿನ ಬೆನ್ನಲ್ಲೇ ಅಶೋಕ್ ಗೆಹ್ಲೋಟ್ ಇಂದು ಸಂಜೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದಾರೆ.  

ಜೈಪುರ್(ಡಿ.03) ಪಂಚ ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಮೂರು ರಾಜ್ಯಗಳಲ್ಲಿ ಜಯಭೇರಿ ಬಾರಿಸಿದೆ. ಇತ್ತ ಕಾಂಗ್ರೆಸ್ ತೆಲಂಗಾಣದಲ್ಲಿ ಗೆಲುವಿನ ನಗೆ ಬೀರಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಅಧಿಕಾರ ಉಳಿಸಿಕೊಳ್ಳುವ ವಿಶ್ವಾಸದಲ್ಲಿತ್ತು. ಜಿದ್ದಾಜಿದ್ದಿನ ಸ್ಪರ್ದೆ ಎರ್ಪಟ್ಟರೂ ಕಾಂಗ್ರೆಸ್ ಗೆಲುವು ದಾಖಲಿಸಲಿದೆ ಅನ್ನೋದು ಕಾಂಗ್ರೆಸ್ ನಾಯಕರ ಮಾತಾಗಿತ್ತು. ಆದರೆ ರಾಜಸ್ಥಾನದಲ್ಲಿ ಕಾಂಗ್ರೆಸ್ ನೆಲಕಚ್ಚಿದೆ. ಈ ಹೀನಾಯ ಸೋಲಿನ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಅಶೋಕ್ ಗೆಹ್ಲೋಟ್ ರಾಜೀನಾಮೆ ನೀಡಲು ಸಜ್ಜಾಗಿದ್ದಾರೆ. ಇಂದು ಸಂಜೆ 5.30ಕ್ಕೆ ಅಶೋಕ್ ಗೆಹ್ಲೋಟ್ ರಾಜೀನಾಮೆ ಸಲ್ಲಿಸಲಿದ್ದಾರೆ.

ಅಧಿಕಾರದಲ್ಲಿರುವ ಪಕ್ಷ ಚುನಾವಣೆ ಸೋಲು ಅನುಭವಿಸುತ್ತಿದ್ದಂತೆ ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊಸ ಸರ್ಕಾರ ರಚನೆಗೆ ಅನುವು ಮಾಡಿಕೊಡುತ್ತಾರೆ. ಇದರಂತೆ ಅಶೋಕ್ ಗೆಹ್ಲೋಟ್ ಇಂದು ಸಂಜೆ 5.30ಕ್ಕೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ರಾಜಸ್ಥಾನ ರಾಜ್ಯಪಾಲ ಕಾಲ್ರಾಜ್ ಮಿಶ್ರಾ ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ. ಹೊಸ ಸರ್ಕಾರ ರಚನೆ ಆಗುವ ವರೆಗೆ ಅಶೋಕ್ ಗೆಹ್ಲೋಟ್ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. 

ಕಾಂಗ್ರೆಸ್ ಚುನಾವಣಾ ಸೋಲಿಗೆ ಸ್ಫೋಟಕ ಕಾರಣ ಬಿಚ್ಚಿಟ್ಟ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್!

ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 115 ಸ್ಥಾನ ಗೆಲ್ಲುವ ಮೂಲಕ ಅಭೂತಪೂರ್ವ ಗೆಲುವು ದಾಖಲಿಸಿದೆ. ಕಾಂಗ್ರೆಸ್ 70 ಸ್ಥಾನಕ್ಕೆ ಕುಸಿದಿದೆ. ಇನ್ನು ಬಿಎಸ್‌ಪಿ 2 ಸ್ಥಾನಕ್ಕೆ ಕುಸಿದಿದ್ದರೆ, ಇತರರು 14 ಸ್ಥಾನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ರಾಜಸ್ಥಾನ ಚುನಾವಣಾ ಮತಎಣಿಕೆ ಬಹುತೇಕ ಪೂರ್ಣಗೊಂಡಿದೆ. ಶೀಘ್ರದಲ್ಲೇ ಚುನಾವಣಾ ಆಯೋಗ ಅಧಿಕೃತ ಘೋಷಣೆ ಮಾಡಲಿದೆ.

ರಾಜಸ್ಥಾನದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಜಿದ್ದಾಜಿದ್ದಿನ ಪೈಪೋಟಿ ಇದೆ. ಆದರೆ ಕಾಂಗ್ರೆಸ್ ಪೂರ್ಣಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದಿತ್ತು. ರಾಹುಲ್ ಗಾಂಧಿ ಜಾತಿ ಗಣತಿ ವಿಚಾರ ಮುಂದಿಟ್ಟು ಭಾರಿ ಪ್ರಚಾರ ಮಾಡಿದ್ದರು. ಇಷ್ಟೇ ಅಲ್ಲ ಐಸಿಸಿ ವಿಶ್ವಕಪ್ ಫೈನಲ್ ಪಂದ್ಯದ ಸೋಲಿಗೆ ಮೋದಿ ಉಪಸ್ಥಿತಿ ಕಾರಣ, ಮೋದಿ ಅಪಶಕುನ(ಪನೌತಿ) ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಕಾಂಗ್ರೆಸ್ ನಾಯಕರು ಮತ್ತಷ್ಟು ಪ್ರಚಾರ ಮಾಡಿದ್ದರು. ಆದರೆ ಫಲಿತಾಂಶ ಕಾಂಗ್ರೆಸ್‌ಗೆ ತೀವ್ರ ಮುಖಭಂಗ ತರಿಸಿದೆ.

ಮಧ್ಯಪ್ರದೇಶದಲ್ಲಿ ಬಿಜೆಪಿ ಪಾರುಪತ್ಯ: 'ಶಿವರಾಜ'ನ ಜತೆ 'ಮಹಾರಾಜ'ನ ನೆರವಿಗೆ ಕಾಂಗ್ರೆಸ್‌ ಧೂಳೀಪಟ!

ಮಧ್ಯಪ್ರದೇಶದಲ್ಲೂ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದೆ. ಇನ್ನು ಚತ್ತೀಸಘಡದಲ್ಲಿ ಕಾಂಗ್ರೆಸ್ ಅದಿಕಾರಕ್ಕೇರುವುದು ಬಹುತೇಕ ಖಚಿತ ಅನ್ನೋ ಮಾತುಗಳು ಕೇಳಿಬಂದಿತ್ತು. ಮತಗಟ್ಟೆ ಸಮೀಕ್ಷೆ ಕೂಡ ಇದನ್ನೇ ಹೇಳಿತ್ತು. ಆದರೆ ಫಲಿತಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್‌ಗೆ ಆಘಾತವಾಗಿದೆ. ಅಧಿಕಾರದಲ್ಲಿ ಚತ್ತೀಸಘಡವೂ ಕೈತಪ್ಪಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!