
ಕೋಟಾ(ಡಿ.28): ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ 10 ನವಜಾತ ಶಿಶುಗಳ ಅಕಾಲಿಕ ಮರಣದ ಕುರಿತು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ 'ಹುವಾ ತೋ ಹುವಾ'(ಆಗಿದ್ದಾಯ್ತು) ಎಂದು ಉಡಾಫೆಯ ಪ್ರತಿಕ್ರಿಯೆ ನೀಡಿದ್ದಾರೆ.
ಕೋಟಾ ಸರ್ಕಾರಿ ಆಸ್ಪತ್ರೆಯಲ್ಲಿ ಸುಮಾರು 10ಕ್ಕೂ ಅಧಿಕ ನವಜಾತ ಶಿಶುಗಳು ಮರಣ ಹೊಂದಿದ್ದು, ಇದಕ್ಕೆ ರಾಜಸ್ಥಾನ ಸಿಎಂ ನೀಡಿರುವ ಪ್ರತಿಕ್ರಿಯೆ ತೀವ್ರ ವಿವಾದ ಸೃಷ್ಟಿಸಿದೆ.
'ಮಕ್ಕಳು ಪ್ರತಿವರ್ಷ ಸಾಯುತ್ತಾರೆ ಇದರಲ್ಲೇನು ವಿಶೇಷ..' ಎಂದು ಸಿಎಂ ಅಶೋಕ್ ಗೆಹ್ಲೋಟ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ರಾಜಸ್ಥಾನದ ಆಸ್ಪತ್ರೇಲಿ 48 ಗಂಟೆಯಲ್ಲಿ 10 ನವಜಾತ ಮಕ್ಕಳ ಸಾವು!
ಇನ್ನು ಅಶೋಕ್ ಗೆಹ್ಲೋಟ್ ಹೇಳಿಕೆಯನ್ನು ಪ್ರತಿಪಕ್ಷ ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ಇದು ಅಮಾನವೀಯ ಹೇಳಿಕೆ ಎಂದು ಕಿಡಿಕಾರಿದೆ.
ಸದ್ಯ ಘಟನೆಯ ಕುರಿತು ವಿಸ್ತೃತ ತನಿಖೆಗೆ ಆದೇಶ ನೀಡಿರುವ ಅಶೋಕ್ ಗೆಹ್ಲೋಟ್, ತಪ್ಪಿಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ