ಬಿಜೆಪಿಗೆ ರಾಜಸ್ಥಾನ ತಲೆನೋವು, ಸಿಎಂ ಮಾಡದಿದ್ದರೆ 30 ಶಾಸಕರ ಜೊತೆ ಕಾಂಗ್ರೆಸ್ ಸೇರ್ತಾರ ವಸುಂಧರಾ?

Published : Dec 07, 2023, 11:39 AM ISTUpdated : Dec 07, 2023, 11:40 AM IST
ಬಿಜೆಪಿಗೆ ರಾಜಸ್ಥಾನ ತಲೆನೋವು, ಸಿಎಂ ಮಾಡದಿದ್ದರೆ 30 ಶಾಸಕರ ಜೊತೆ ಕಾಂಗ್ರೆಸ್ ಸೇರ್ತಾರ ವಸುಂಧರಾ?

ಸಾರಾಂಶ

ಪಂಚ ರಾಜ್ಯ ಚುನಾವಣೆಯಲ್ಲಿ ಮೂರು ರಾಜ್ಯ ಗೆದ್ದ ಬಿಜೆಪಿಗೆ ಖುಷಿಗಿಂತ ತಲೆನೋವೇ ಹೆಚ್ಚಾಗಿದೆ. ಮೂರು ರಾಜ್ಯದಲ್ಲಿ ಸಿಎಂ ಆಯ್ಕೆ ಕಗ್ಗಂಟಾಗುತ್ತಿದೆ. ಈ ಪೈಕಿ ರಾಜಸ್ಥಾನದಲ್ಲಿ ಅಧಿಕಾರ ಕೈತಪ್ಪು ಭೀತಿಯೂ ಎದುರಾಗುತ್ತಿದೆ. ಹೊಸ 30 ಶಾಸಕರನ್ನು ಮನೆಗೆ ಕರೆಸಿಕೊಂಡು ಸಭೆ ನಡೆಸಿರುವ ಮಾಜಿ ಸಿಎಂ, ಬಿಜೆಪಿ ನಾಯಕಿ ವಸುಂಧರಾ ರಾಜೆ, ಸಿಎಂ ಮಾಡದಿದ್ದರೆ ಪಕ್ಷಾಂತರ ಮಾಡುವ ಸಾಧ್ಯತೆಗಳಿವೆ ಅನ್ನೋ ಮಾತುಗಳು ಕೇಳಿಬರುತ್ತಿದೆ.

ನವದೆಹಲಿ(ಡಿ.07) ಪಂಚ ರಾಜ್ಯ ಚುನಾವಣೆಯಲ್ಲಿ ತೆಲಂಗಾಣ ಮಾತ್ರ ಗೆದ್ದ ಕಾಂಗ್ರೆಸ್‌ನಲ್ಲಿರುವ ಖುಷಿ, ಮೂರು ರಾಜ್ಯ ಗೆದ್ದ ಬಿಜೆಪಿ ಪಾಳಯದಲ್ಲಿ ಕಾಣಿಸುತ್ತಿಲ್ಲ. ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತಿಸಘಡದಲ್ಲಿ ಸಿಎಂ ಆಯ್ಕೆ ತೀವ್ರ ತಲೆನೋವಾಗಿ ಪರಿಣಮಿಸುತ್ತಿದೆ. ಈ ಪೈಕಿ ರಾಜಸ್ಥಾನ ಇದೀಗ ಬಿಜೆಪಿ ಹೈಕಮಾಂಡ್‌ಗೆ ಕಗ್ಗಂಟಾಗಿದೆ. ರಾಜಸ್ಥಾನದಲ್ಲಿ ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿರುವ ಮಾಜಿ ಸಿಎಂ ಬಿಜೆಪಿ ಹಿರಿಯ ನಾಯಕಿ ವಸಂಧರಾ ರಾಜೆ ತೆರೆಮರೆಯಲ್ಲಿ ಸಭೆ ನಡೆಸುತ್ತಿದ್ದಾರೆ. ಹೊಸದಾಗಿ ಗೆದ್ದಿರುವ 30 ಶಾಸಕರನ್ನು ತಮ್ಮ ಮನೆಗೆ ಕರೆಸಿ ಸಭೆ ನಡೆಸಿದ್ದಾರೆ. ಮೂಲಗಳ ಪ್ರಕಾರ, ತಮ್ಮನ್ನು ಸಿಎಂ ಮಾಡುವಂತೆ ಬಿಜೆಪಿ ಹೈಕಮಾಂಡ್‌ಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ. 

ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ತಮ್ಮನ್ನು ಆಯ್ಕೆ ಮಾಡದಿದ್ದರೆ, ಹೊಸದಾಗಿ ಆಯ್ಕೆಯಾಗಿರುವ ಹಾಗೂ ವಸುಂಧರಾ ರಾಜೆ ಮೇಲೆ ನಿಷ್ಠೆ ಹೊಂದಿರು 30 ಶಾಸಕರು ಜೊತೆ ಬಿಜೆಪಿಯಿಂದ ಹೊರನಡೆಯುವ ಸಾಧ್ಯತೆಗಳನ್ನು ಕೆಲ ರಾಜಕೀಯ ವಿಶ್ಲೇಷಕರು ಹೇಳುತ್ತಿದ್ದಾರೆ. ಇತರ ರಾಜಕೀಯ ಪಕ್ಷ ಸೇರಿಕೊಂಡ ಹೊಸ ಸರ್ಕಾರ ರಚಿಸುತ್ತಾರಾ ಅಥವಾ ಕಾಂಗ್ರೆಸ್ ಸೇರಿಕೊಳ್ಳುತ್ತಾರಾ ಅನ್ನೋ ಕುರಿತು ಯಾವುದೇ ಮಾಹಿತಿಗಳು ಲಭ್ಯವಿಲ್ಲ. ಆದರೆ ಕಾಂಗ್ರೆಸ್ ನಾಯಕರ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಮೂಲಗಳು ಹೇಳುತ್ತಿವೆ.

ಗೆದ್ದ ಮೂರು ರಾಜ್ಯಗಳಿಗೂ ಹೊಸ ಸಿಎಂ ನೇಮಕಕ್ಕೆ ಮುಂದಾದ ಬಿಜೆಪಿ ಹೈಕಮಾಂಡ್‌!

ರಾಹುಲ್ ಗಾಂಧಿ, ಸೋನಿಯ ಗಾಂಧಿ ಬೆಂಬಲಿಗರು ಇದೀಗ ಈ ಮಾಹಿತಿಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈ ಕುರಿತು ಯಾವುದೇ ಸ್ಪಷ್ಟ ಮಾಹಿತಿಗಳು ಲಭ್ಯವಿಲ್ಲ. ಆದರೆ ತೆರೆಮರೆಯಲ್ಲಿ ಭಾರಿ ಕಸರತ್ತು ನಡೆಯುತ್ತಿರುವುದು ಸತ್ಯ. ಇತ್ತ ಬಿಜೆಪಿ ಹೈಕಮಾಂಡ್‌ಗೂ ರಾಜಸ್ಥಾನ ಸಿಎಂ ಆಯ್ಕೆ ಕಗ್ಗಂಟಾಗುತ್ತಿರುವುದು ಅಚ್ಚರಿ ವಿಚಾರವೇನಲ್ಲ. 

 

 

ಇದರ ನಡುವೆ ದೆಹಲಿ ತಲುಪಿರುವ ವಸುಂಧರಾ ರಾಜೆ ಕುತೂಹಲ ಮತ್ತಷ್ಟು ಹೆಚ್ಚಿಸಿದ್ದಾರೆ. ದೆಹಲಿಯಲ್ಲಿ ಬಿಜೆಪಿ ಹೈಕಮಾಂಡ್ ರಾಜಸ್ಥಾನ ಹಾಗೂ ಇತರ ಎರಡು ರಾಜ್ಯಗಳ ಸಿಎಂ ಆಯ್ಕೆಗೆ ಸತತ ಸಭೆ ನಡೆಸುತ್ತಿದೆ. ಇದರ ಬೆನ್ನಲ್ಲೇ ವಸುಂಧರಾ ರಾಜೆಗೆ ಹೈಕಮಾಂಡ್ ಬುಲಾವ್ ನೀಡಿದ್ದಾರೋ ಅಥವಾ ತಾವೇ ಶಕ್ತಿ ಪ್ರದರ್ಶನ ಮಾಡಲು ದೆಹಲಿಗೆ ತೆರಳಿದ್ದಾರೋ ಅನ್ನೋ ಕುರಿತು ಸ್ಪಷ್ಟತೆ ಇಲ್ಲ. ಆದರೆ ಈ ಕುರಿತು ಪ್ರತಿಕ್ರಿಯೆ ನೀಡಿರುವ ವಸುಂಧರಾ ರಾಜೆ, ಸೊಸೆಯನ್ನು ನೋಡಲು ದೆಹಲಿಗೆ ಆಗಮಿಸಿದ್ದಾರೆ ಎಂದಿದ್ದಾರೆ. ಈ ಎಲ್ಲಾ ಬೆಳವಣಿಗೆ ಭಾರಿ ಕುತೂಹಲಕ್ಕೆ ಕಾರಣವಾಗಿದೆ.

ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಎಲ್ಲಾ 10 ಬಿಜೆಪಿ ಸಂಸದರು ಲೋಕಸಭೆಗೆ ರಾಜೀನಾಮೆ
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!