ನಿಶ್ಚಿತಾರ್ಥದ ಬೆನ್ನಲ್ಲೇ ವಧುವಿನೊಂದಿಗೆ ಮೊದಲರಾತ್ರಿ ಮಿಲನ ಆಚರಿಸಿದ ವರ; ಈಗ ಮದುವೆ ಬೇಡವಂತೆ!

Published : Dec 15, 2024, 08:24 PM IST
ನಿಶ್ಚಿತಾರ್ಥದ ಬೆನ್ನಲ್ಲೇ ವಧುವಿನೊಂದಿಗೆ ಮೊದಲರಾತ್ರಿ ಮಿಲನ ಆಚರಿಸಿದ ವರ; ಈಗ ಮದುವೆ ಬೇಡವಂತೆ!

ಸಾರಾಂಶ

ನಿಶ್ಚಿತಾರ್ಥ ಮಾಡಿಕೊಂಡು ಮದುವೆ ನಿಶ್ಚಯ ಮಾಡಿಕೊಂಡ ಜೋಡಿ ಮದುವೆಗೂ ಮೊದಲೇ ಮೊದಲ ರಾತ್ರಿಯ ಮಿಲನ ಮಹೋತ್ಸವ ಆಚರಿಸಿದ್ದಾರೆ. ಆದರೆ, ಇದೀಗ ಯುವಕ ನನಗೆ ಮದುವೆ ಬೇಡ ಎಂದು ನಿರಾಕರಿಸಿದ್ದಾನೆ..

ರಾಜಸ್ಥಾನ (ಡಿ.15): ಸಾಮಾನ್ಯವಾಗಿ ಭಾರತೀಯ ಸಂಪ್ರದಾಯದಲ್ಲಿ ಮದುವೆಗೆ ಹೆಚ್ಚಿನ ಪ್ರಾಶಸ್ತ್ಯವನ್ನು ನೀಡಲಾಗಿದೆ. ಹಿಂದಿನ ಕಾಲದಲ್ಲಿ ಮದುವೆಯಾದ ನಂತರವೇ ಹುಡುಗ-ಹುಡುಗಿ ನೋಡಬೇಕಿತ್ತು. ಆದರೆ, ಇದೀಗ ನಿಶ್ಚಿತಾರ್ಥವಾದ ತಕ್ಷಣ ಗಂಡ-ಹೆಂಡತಿ ಎಂಬಂತೆ ಎಲ್ಲವನ್ನೂ ಮಾಡುತ್ತಾರೆ. ಅದೇ ರೀತಿ ಇಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ಜೋಡಿಯೊಂದು ಮದುವೆಗೂ ಮುನ್ನವೇ ಮೊದಲ ರಾತ್ರಿಯ ಸುಖವನ್ನು ಅನುಭವಿಸಿದೆ. ನಂತರ, ಹುಡುಗ ತನಗೆ ಈ ಹುಡುಗಿಯೊಂದಿಗೆ ಮದುವೆ ಬೇಡ ಎಂದು ನಿರಾಕರಿಸಿದ್ದಾರೆ. ಆಗ ಯುವತಿ ಪಾಡು ಏನಾಗಿದೆ? ಈ ಘಟನೆ ಎಲ್ಲಿ ನಡೆದಿದೆ ಎಂಬ ವಿವರ ಇಲ್ಲಿದೆ ನೋಡಿ..

ರಾಜಸ್ಥಾನದ ಝುನ್ಝುನು ಜಿಲ್ಲೆಯಲ್ಲಿ ನಿಶ್ಚಿತಾರ್ಥದ ನಂತರ ಮದುವೆಯಾಗಲು ನಿರಾಕರಿಸಿದ್ದರಿಂದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಚರ್ಚೆಗೆ ಗ್ರಾಸವಾಗಿದೆ. ನಿಶ್ಚಿತಾರ್ಥದ ನಂತರ ಯುವಕ ಯುವತಿಗೆ ಮೋಸ ಮಾಡಿ ಮದುವೆಯಾಗಲು ನಿರಾಕರಿಸಿದ್ದರಿಂದ ಮನನೊಂದು ಯುವತಿ ಈ ಮಾರಕ ಕ್ರಮ ಕೈಗೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಝುನ್ಝುನು ಸದರ್ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸ್ ಅಧಿಕಾರಿ ಅಶೋಕ್ ಚೌಧರಿ ಘಟನೆಯ ವಿವರ ನೀಡಿದ್ದು, ಕಾಲೇಜಿನಲ್ಲಿ ಓದುತ್ತಿದ್ದ ಯುವತಿಯೊಬ್ಬಳು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶನಿವಾರ ಯುವತಿ ಬಹಳ ಹೊತ್ತು ಕೋಣೆಯ ಬಾಗಿಲು ತೆರೆಯದಿದ್ದಾಗ ಕರೆದರೂ ಪ್ರತಿಕ್ರಿಯೆ ಬರಲಿಲ್ಲ. ಕಿಟಕಿಯಿಂದ ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾಳೆ ಎಂದು ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದಾರೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೇಳೆಗೆ ವೈದ್ಯರು ಆಕೆಯನ್ನು ಮೃತ ಎಂದು ಘೋಷಿಸಿದರು.

ಇದನ್ನೂ ಓದಿ: ಈ ₹100 ನೋಟು ಇದ್ದರೆ, ನೀವು ಈಗಲೇ ಲಕ್ಷಾಧಿಪತಿ ಆಗಬಹುದು!

ಮದುವೆಗೂ ಮುನ್ನ ಯುವಕ ದೈಹಿಕ ಸಂಬಂಧ: ಯುವತಿಯ ಚಿಕ್ಕಪ್ಪ ಪೊಲೀಸರಿಗೆ ತಿಳಿಸಿದಂತೆ, ಒಂದೂವರೆ ತಿಂಗಳ ಹಿಂದೆ ಆಕೆಯ ನಿಶ್ಚಿತಾರ್ಥ ಗುಡಗೌಡ್ಜಿ ನಿವಾಸಿ ಯುವಕನೊಂದಿಗೆ ನಡೆದಿತ್ತು. ನಿಶ್ಚಿತಾರ್ಥದ ನಂತರ ಯುವಕ ಸಂಬಂಧದ ಲಾಭ ಪಡೆದು ಯುವತಿಯನ್ನು ಮೋಸಗೊಳಿಸಿ ದೈಹಿಕ ಸಂಬಂಧ ಹೊಂದಿದ್ದ. ನಂತರ ಯುವಕ ಮದುವೆಯಾಗಲು ನಿರಾಕರಿಸಿದ್ದ. ಈ ಮೋಸ ಮತ್ತು ಅವಮಾನದಿಂದ ಯುವತಿ ತೀವ್ರವಾಗಿ ಮನನೊಂದು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಳು. ಕೊನೆಗೆ ಈ ಕಠಿಣ ಕ್ರಮ ಕೈಗೊಂಡಿದ್ದಾಳೆ ಎಂದು ಆರೋಪಿಸಿದ್ದಾರೆ.

ಆರೋಪಿ ಯುವಕನ ಬಂಧನ: ಕುಟುಂಬಸ್ಥರ ದೂರಿನ ಮೇರೆಗೆ ನಿನ್ನೆ ರಾತ್ರಿ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಠಾಣಾ ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದ್ದು, ಯುವತಿಯ ಸಾವಿಗೆ ಕಾರಣವಾದ ಎಲ್ಲಾ ಅಂಶಗಳನ್ನು ಪರಿಶೀಲಿಸಲಾಗುತ್ತಿದೆ.

ಇದನ್ನೂ ಓದಿ: ಪತ್ನಿ, ಮಕ್ಕಳು ಸಹಿತ ತೆರೆದ ಗುಂಡಿಗೆ ಬಿದ್ದ ಬೈಕ್‌ ಸವಾರ: ಶಾಕಿಂಗ್‌ ವಿಡಿಯೋ ಸಿಸಿವಿಟಿಯಲ್ಲಿ ಸೆರೆ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..
ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್