
ರಾಜಸ್ಥಾನ(ಜು.13): ಜಮ್ಮು ಕಾಶ್ಮೀರ, ಉತ್ತರ ಪ್ರದೇಶ ಸೇರಿದಂತೆ ಭಾರತದೆ ಕೆಲ ರಾಜ್ಯಗಳಲ್ಲಿ ಉಗ್ರರ ಚಟುವಟಿಕೆಯನ್ನು ಹತ್ತಿಕ್ಕಲಾಗಿದೆ. ಉಗ್ರ ಚಟುವಟಿಕೆಯಲ್ಲಿ ತೊಡಗಿದ್ದವರ ಬಂಧವಾಗಿದೆ. ಇದರ ಬೆನ್ನಲ್ಲೇ ಮತ್ತೊಂದು ಮಾಹಿತಿ ಬಹಿರಂಗವಾಗಿದೆ. ರಾಜಸ್ಥಾನದ ಮೇಲೆ ಉಗ್ರರ ದಾಳಿ ಮಾಡುವ ಸಾಧ್ಯತೆ ಕುರಿತು ಸರ್ಕಾರಕ್ಕೆ ಮಾಹಿತಿ ಲಭ್ಯವಾಗಿದೆ.
ಪಾಕಿಸ್ತಾನಕ್ಕೆ ತಿರುಗುಬಾಣ; ಉಗ್ರರ ದಾಳಿಯಲ್ಲಿ ಪಾಕ್ ಸೇನಾ ಕ್ಯಾಪ್ಟನ್, 11 ಯೋಧರು ಹತ್ಯೆ!
ಗಡಿ ಪ್ರದೇಶಗಳ ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧ ಹೇರಲಾಗಿದೆ. 114 ಸೆಕ್ಷನ್, ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಭಾರತ-ಪಾಕಿಸ್ತಾನ ಗಡಿ ಪ್ರದೇಶವಾದ ಶ್ರೀಗಂಗನಗರ, ಕರಣಪುರ, ರೈಸಿಂಗ್ ನಗರ, ಅನೂಪ್ ಗರ್, ಘರ್ಸಾನಾ ಬ್ಲಾಕ್ ಪ್ರದೇಶದಲ್ಲಿ ಸುಮಾರು 2 ಕಿ.ಮೀ ವ್ಯಾಪ್ತಿ ವರೆಗೆ ನಿರ್ಬಂಧ ಹೇರಲಾಗಿದೆ.
ಶರಣಾದ 22 ಆಫ್ಘಾನಿಸ್ತಾನ ಯೋಧರ ಮೇಲೆ ಗುಂಡಿನ ಸುರಿಮಳೆಗೈದ ತಾಲಿಬಾನ್ ಉಗ್ರರು!
ಗಡಿಯೊಳಗೆ ಉಗ್ರರ ಒಳ ನುಸುಳುವಿಕೆ ಹಾಗೂ ದಾಳಿ ಮಾಹಿತಿ ಪಡೆದ ರಾಜಸ್ಥಾನ ಸರ್ಕಾರ ತಕ್ಷಣ ಅಲರ್ಟ್ ಆಗಿದೆ. ರಾತ್ರಿ 7 ಗಂಟೆಯಿಂದ ಬೆಳಗ್ಗೆ 6 ಗಂಟೆ ವರೆಗೆ ಜನರ ಚಲನವಲನಕ್ಕೆ ಅನುಮತಿ ನಿರಾಕರಿಸಲಾಗಿದೆ. ಆ ಸಮಯದಲ್ಲಿ ಯಾವುದೇ ಕ್ರ್ಯಾಕರ್ ಸಿಡಿಸಲು ಅವಕಾಶವಿಲ್ಲ. ರೈತರು ಸಶಸ್ತ್ರ ಪಡೆ ಅಧಿಕಾರಿಯಿಂದ ಅನುಮತಿ ಪಡೆಯಬೇಕಾಗುತ್ತದೆ ಎಂದು ಸರ್ಕಾರ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ