ರಾಜಸ್ಥಾನದಲ್ಲಿ ಬಿಜೆಪಿ ಭರ್ಜರಿ ಸೆಂಚುರಿ: ಗೆಹ್ಲೋಟ್‌ಗೆ ತೀವ್ರ ಮುಖಭಂಗ, ಕ್ರ್ಯಾಶ್‌ ಆಗುತ್ತಾ ಪೈಲಟ್‌?

Published : Dec 03, 2023, 10:45 AM ISTUpdated : Dec 03, 2023, 03:16 PM IST
 ರಾಜಸ್ಥಾನದಲ್ಲಿ ಬಿಜೆಪಿ ಭರ್ಜರಿ ಸೆಂಚುರಿ: ಗೆಹ್ಲೋಟ್‌ಗೆ ತೀವ್ರ ಮುಖಭಂಗ, ಕ್ರ್ಯಾಶ್‌ ಆಗುತ್ತಾ ಪೈಲಟ್‌?

ಸಾರಾಂಶ

ಸಿಎಂ ಅಶೋಕ್‌ ಗೆಹ್ಲೋಟ್‌ ಸತತ 2ನೇ ಬಾರಿ ಪಕ್ಷವನ್ನು ಅಧಿಕಾರಕ್ಕೆ ತರಲು ವಿಫಲರಾದಂತಿದೆ. ಸಚಿನ್‌ ಪೈಲಟ್‌ ತಮ್ಮ ಕ್ಷೇತ್ರದಲ್ಲಿ ಗೆದ್ದರೂ, ಅಧಿಕಾರ ಮರೀಚಿಕೆಯಾಗುವ ಸಂಭವವಿದೆ.

ಹೊಸದಿಲ್ಲಿ (ಡಿಸೆಂಬರ್ 3, 2023): ರಾಜಸ್ಥಾನ ವಿಧಾನಸಭೆ ಚುನಾವಣೆ ಭಾರಿ ಕುತೂಹಲ ಕೆರಳಿಸಿದ್ದು, ಒಂದೊಂದು ಎಕ್ಸಿಟ್‌ ಪೋಲ್‌ಗಳು ಒಂದೊಂದು ರೀತಿ ಭವಿಷ್ಯ ನುಡಿದಿದೆ. ಬಿಜೆಪಿಗೆ ಹೆಚ್ಚು ಸ್ಥಾನ, ಅಧಿಕಾರ ಎಂದು ಕೆಲ ಎಕ್ಸಿಟ್‌ ಪೋಲ್‌ಗಳು ಹೇಳಿದ್ದರೆ, ಕಾಂಗ್ರೆಸ್‌ ಅಧಿಕಾರದತ್ತ ಹೋಗಲಿದೆ ಎಂದು ಇನ್ನು ಕೆಲವು ಎಕ್ಸಿಟ್‌ ಪೋಲ್‌ಗಳು ಹೇಳ್ತಿವೆ. ಹಾಗೂ, ಎರಡು ಪಕ್ಷಗಳಿಗೂ ಅಧಿಕಾರ ಸಿಗದೆ ಅತಂತ್ರವಾಗ್ಬಹುದು ಎಂದೂ ಹೇಳಲಾಗ್ತಿದೆ. ಆದರೆ, ಫಲಿತಾಂಶ ಸದ್ಯ ಬೇರೆಯೇ ಹೇಳುತ್ತಿದೆ. 

ಬಿಜೆಪಿ 100ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದು, ಕಾಂಗ್ರೆಸ್ 70 ರಿಂದ 80ರ ಸನಿಹದಲ್ಲಿ ತೆವಳುತ್ತಿದೆ. ರಾಜಸ್ಥಾನ ವಿಧಾನಸಭೆಯಲ್ಲಿ 199 ಸ್ಥಾನಗಳಿದ್ದು, 100 ಹೊಡೆದರೆ ಅಧಿಕಾರ ಸಿಗುತ್ತದೆ. ಬಿಜೆಪಿ ಕನಿಷ್ಠ 100 ಸೀಟು ಗೆದ್ದರೆ ಅಧಿಕಾರ ಹಿಡಿಯಲಿದ್ದರೂ, ಸಿಎಂ ಯಾರಾಗಬಹುದು ಅನ್ನೋ ಗುಟ್ಟು ಮಾತ್ರ ಈವರೆಗೆ ಬಿಟ್ಟುಕೊಟ್ಟಿಲ್ಲ. 

ಇದನ್ನು ಓದಿ: ಸಂಕಷ್ಟದಲ್ಲಿ ಕೆಸಿಆರ್‌; ನನಸಾಗಲ್ಲ ಹ್ಯಾಟ್ರಿಕ್‌ ಕನಸು! ಮ್ಯಾಜಿಕ್‌ ನಂಬರ್‌ ದಾಟಿದ ಕಾಂಗ್ರೆಸ್‌

ಇನ್ನೊಂದೆಡೆ, ಸಿಎಂ ಅಶೋಕ್‌ ಗೆಹ್ಲೋಟ್‌ ಸತತ 2ನೇ ಬಾರಿ ಪಕ್ಷವನ್ನು ಅಧಿಕಾರಕ್ಕೆ ತರಲು ವಿಫಲರಾದಂತಿದೆ. ಈ ಮಧ್ಯೆ , ಸಚಿನ್‌ ಪೈಲಟ್‌ ತಮ್ಮ ಕ್ಷೇತ್ರದಲ್ಲೇ ಹಿನ್ನೆಡೆ ಅನುಭವಿಸುತ್ತಿದ್ದು, ಭಾರಿ ಸಂಚಲನ ಮೂಡಿಸುತ್ತಿದ್ದ, ಹಾಗೂ ಸಿಎಂ ಕನಸು ಕಾಣುತ್ತಿದ್ದ ಅವರಿಗೆ ತಮ್ಮ ಕ್ಷೇತ್ರದಲ್ಲಿ ಗೆದ್ದರೂ, ಅಧಿಕಾರ ಮರೀಚಿಕೆಯಾಗುವ ಸಂಭವವಿದೆ.

ರಾಜಸ್ಥಾನಲ್ಲಿ 5 ವರ್ಷಕ್ಕೊಮ್ಮೆ ಮತದಾರ ಸಾಮಾನ್ಯವಾಗಿ ಪಕ್ಷವನ್ನು ಬದಲಿಸುತ್ತಾರೆ. ಇದೇ ರೀತಿ, ಈ ಬಾರಿಯೂ ಕೈನಿಂದ ಅಧಿಕಾರ ಕಸಿದುಕೊಂಡು ಮರುಭೂಮಿಯಲ್ಲಿ ಕಮಲ ಅರಳಲಿದೆ ಎನ್ನುವಂತೆ ಕಾಣ್ತಿದೆ. ಕಳೆದ ಅವಧಿಯಲ್ಲಿ ರಾಜಸ್ಥಾನದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. 2018ರ ಚುನಾವಣೆಯಲ್ಲಿ ಬಿಜೆಪಿಗೆ ಶೇ 38.77 ಮತ್ತು ಕಾಂಗ್ರೆಸ್‌ಗೆ ಶೇ 39.30 ಮತ ಹಂಚಿಕೆಯಾಗಿತ್ತು.

ಇದನ್ನು ಓದಿ: ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ, ಚುನಾವಣಾ ಆಯೋಗದ ವೆಬ್‌ಸೈಟ್ ಕ್ರ್ಯಾಶ್!

ರಾಜಸ್ಥಾನದಲ್ಲಿ ಬಂಡಾಯವೂ ಹೆಚ್ಚು ಸದ್ದು ಮಾಡಿದ್ದು, ಎರಡೂ ಪಕ್ಷಗಳು ಗೆಲ್ಲುವ ಸ್ವತಂತ್ರ ಅಭ್ಯರ್ಥಿಗಳು ಮತ್ತು ಬಂಡಾಯ ಅಭ್ಯರ್ಥಿಗಳನ್ನು ಸಂಪರ್ಕ ಮಾಡ್ತಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ರಾಜಸ್ಥಾನ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಿದ ನಂತರ ಬಿಜೆಪಿ ಮತ್ತು ಕಾಂಗ್ರೆಸ್ ಎರಡು ಪಕ್ಷಗಳಿಂದಲೂ 40ಕ್ಕೂ ಹೆಚ್ಚು ಬಂಡಾಯಗಾರರು ಸ್ಪರ್ಧಿಸಿದ್ದರು.

ಹೆಚ್ಚಿನ ಎಕ್ಸಿಟ್ ಪೋಲ್‌ಗಳು ಬಿಜೆಪಿಗೆ ಹೆಚ್ಚು ಸ್ಥಾನ ಎಂದಿದ್ದರೆ, ಮೂರು ಎಕ್ಸಿಟ್ ಪೋಲ್‌ಗಳು ರಾಜಸ್ಥಾನದಲ್ಲಿ ಕಾಂಗ್ರೆಸ್ ಗೆಲ್ಲುವ ಮುನ್ಸೂಚನೆ ನೀಡಿವೆ.

ಇಂದು 4 ರಾಜ್ಯಗಳ ಫಲಿತಾಂಶ: ತೆಲಂಗಾಣ ವೀಕ್ಷಕರಾಗಿ ಡಿಕೆಶಿ, ಜಾರ್ಜ್‌ ನೇಮಕ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!