PUC Exam ರಾಜಸ್ಥಾನ ದ್ವಿತೀಯ ಪಿಯುಸಿ ಪರೀಕ್ಷೆ, ಆಡಳಿತ ಪಕ್ಷ ಕಾಂಗ್ರೆಸ್ ಹೊಗಳುವ 6 ಪ್ರಶ್ನೆಗೆ ಆಕ್ರೋಶ!

Published : Apr 22, 2022, 08:20 PM IST
PUC Exam ರಾಜಸ್ಥಾನ ದ್ವಿತೀಯ ಪಿಯುಸಿ ಪರೀಕ್ಷೆ, ಆಡಳಿತ ಪಕ್ಷ ಕಾಂಗ್ರೆಸ್ ಹೊಗಳುವ 6 ಪ್ರಶ್ನೆಗೆ ಆಕ್ರೋಶ!

ಸಾರಾಂಶ

ಅಂಕಕ್ಕಾಗಿ ಕಾಂಗ್ರೆಸ್ ಹೊಗಳಲೇಬೇಕು,ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಗೋಳು ರಾಜಸ್ಥಾನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಆಡಳಿತ ಪಕ್ಷದ ಕೈಚಳಕ ಈ ರೀತಿಯ ಪ್ರಶ್ನೆಗಳ ಸಂಪ್ರದಾಯಕ್ಕೆ ಬ್ರೇಕ್ ಹಾಕಲು ಆಗ್ರಹ  

ರಾಜಸ್ಥಾನ(ಏ.22): ದೇಶದ ಎಲ್ಲಾ ರಾಜ್ಯಗಳಲ್ಲಿ ಪಿಯುಸಿ ಪರೀಕ್ಷೆಗಳು ಆರಂಭಗೊಂಡಿದೆ. ಒಂದೊಂದು ರಾಜ್ಯಗಳಲ್ಲಿ ಪರೀಕ್ಷೆ ನಡೆಸಲು ಒಂದೊಂದು ಸಮಸ್ಯೆ ಎದುರಾಗುತ್ತಿದೆ. ಕರ್ನಾಟಕದಲ್ಲಿ ಹಿಜಾಬ್ ಸಮಸ್ಯೆಯಾದರೆ ರಾಜಸ್ಥಾನದಲ್ಲಿ ಪ್ರಶ್ನೆಗಳ ಸಮಸ್ಯೆ ಎದುರಾಗಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಅಂಕ ಗಳಿಸಬೇಕಾದರೆ ಕಾಂಗ್ರೆಸ್ ಪಕ್ಷವನ್ನು ಹೊಗಳಲೇಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ. 

ದ್ವಿತೀಯ ಪಿಯುಸಿ ರಾಜ್ಯಶಾಸ್ತ್ರ ಪರೀಕ್ಷೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಹೊಗಳುವ 6 ಪ್ರಶ್ನೆಗಳನ್ನು ಕೇಳಲಾಗಿದೆ.ಇದರಿಂದ ಕಾಂಗ್ರೆಸ್ ಸಾಧನೆಯನ್ನು ವಿದ್ಯಾರ್ಥಿಗಳು ಬರೆಯಲೇಬೇಕಾದ ಅನಿವಾರ್ಯತೆ ಸೃಷ್ಟಿ ಮಾಡಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

Udupi ಪರೀಕ್ಷೆ ಬರೆಯಲು ಬಂದ ಹಿಜಾಬ್ ಹೋರಾಟಗಾರ್ತಿಯರ ಹೈಡ್ರಾಮಾ

ರಾಜ್ಯಶಾಸ್ತ್ರ ಪರೀಕ್ಷೆಯ 12ನೇ ಪ್ರಶ್ನೆಯಲ್ಲಿ ಕಾಂಗ್ರೆಸ್ ಪಕ್ಷದ ಸಾಮಾಜಿಕ ಹಾಗೂ ಬೌದ್ಧಿಕ ಮೈತ್ರಿ ಕುರಿತು ವಿವರಿಸಿ ಎಂಬ ಪ್ರಶ್ನೆ ಕೇಳಲಾಗಿದೆ. ಈ ಮೂಲಕ ಕಾಂಗ್ರೆಸ್ ಸಾಧನೆ, ಮೈತ್ರಿ ಸಾಮಾಜಿಕ ಬದ್ಧತೆ ಕುರಿತು ಮಕ್ಕಳು ಬರೆಯಬೇಕಿದೆ. ಮತ್ತೊಂದು ಪರೀಕ್ಷೆಯಲ್ಲಿ 1984ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ ಸ್ಥಾನವೆಷ್ಟು? ಅನ್ನೋ ಪ್ರಶ್ನೆಯನ್ನು ಕೇಳಲಾಗಿದೆ.

ಮೊದಲ ಮೂರು ಸಾರ್ವತ್ರಿಕ ಚುನಾವಣೆಯಲ್ಲಿ ಯಾವ ಪಕ್ಷ ಅಧಿಪತ್ಯ ಸಾಧಿಸಿದೆ? ಅನ್ನೋ ಪ್ರಶ್ನೆಯನ್ನು ಕೇಳಲಾಗಿದೆ. 1971ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಪುನರುತ್ಥಾನ ಹೇಗಾಯ್ತು? ವಿವರಿಸಿ ಸೇರಿದಂತೆ 6 ಪ್ರಶ್ನೆಗಳನ್ನು ಕಾಂಗ್ರೆಸ್ ಸಾಧನೆ ವಿವರಿಸುವಂತೆ ಕೇಳಲಾಗಿದೆ. 

ಕಾಂಗ್ರೆಸ್ ಆಡಳಿತವಿರುವ ರಾಜಸ್ಥಾನದಲ್ಲಿ ಮಕ್ಕಳಲ್ಲೇ ಕಾಂಗ್ರೆಸ್ ಪ್ರೀತಿ ಹುಟ್ಟಿಸಲು ಭ್ರಷ್ಟಾಚಾರ, ಕೆಟ್ಟ ಆಡಳಿತ ಮರೆ ಮಾಚಿ ಸಾಧನೆಗಳನ್ನೇ ಬಿಂಬಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. 

6 ಲಕ್ಷ ವಿದ್ಯಾರ್ಥಿಗಳು ಮುಖ್ಯವೇ ಹೊರತು, 6 ವಿದ್ಯಾರ್ಥಿಗಳಲ್ಲ: ಸಚಿವ ನಾಗೇಶ್

ಕರ್ನಾಟಕದಲ್ಲಿ ಹಿಜಾಬ್ ವಿವಾದ
ಕರ್ನಾಟಕದಲ್ಲೂ ಪಿಯುಸಿ ಪರೀಕ್ಷೆಗಳು ಆರಂಭಗೊಂಡಿದೆ. ಉಡುಪಿಯಲ್ಲಿ ಹಿಜಾಬ್ ಹೋರಾಟ ಮಾಡಿದ ಇಬ್ಬರು ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೆ ವಾಪಾಸ್ಸಾಗಿದ್ದಾರೆ. ಹಿಜಾಬ್ ಅವಕಾಶ ನೀಡಲು ಪಟ್ಟು ಹಿಡಿದ ವಿದ್ಯಾರ್ಥಿಗಳ ಮನವಿಯನ್ನು ಶಾಲೆ ತಿರಸ್ಕರಿಸಿದೆ. ಪರಿಣಾಮ ಪರೀಕ್ಷೆ ಬರೆಯದೆ ವಾಪಾಸ್ಸಾಗಿದ್ದರು. 

ರಾಜ್ಯದಲ್ಲಿ 6 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆ ಬರೆಯುತ್ತಿದ್ದು, ಉಪನ್ಯಾಸಕರು, ಅಧಿಕಾರಿಗಳು ಧೈರ್ಯ ತುಂಬಿದ್ದಾರೆ. ಎಲ್ಲ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆ​ಯು​ತ್ತಿ​ದ್ದಾ​ರೆ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಹೇಳಿದರು.

ಬೆಂಗಳೂರು ನಗರ 5.83 ಲಕ್ಷ ಅತೀ ಹೆಚ್ಚು ವಿದ್ಯಾರ್ಥಿಗಳಿರುವ ಕೇಂದ್ರ, ಕೊಡಗು 6093 ವಿದ್ಯಾರ್ಥಿಗಳಿರುವ ಚಿಕ್ಕ ಕೇಂದ್ರ. ಉಳಿದಂತೆ ಪರೀಕ್ಷೆಯ ಸಿದ್ಧತೆಗಳನ್ನು ಪರಿಶೀಲಿಸಿದ್ದೇನೆ. ಎಲ್ಲ ಜಿಲ್ಲೆಗಳಲ್ಲೂ ಉತ್ತಮವಾಗಿ ವ್ಯವಸ್ಥೆ ಮಾಡಿದ್ದಾರೆ. ಮೊದಲನೆ ದಿನ ಕೆಎಸ್‌ಆರ್‌ಟಿಸಿ ಬಸ್‌ ಸಮಸ್ಯೆಗಳಿದ್ದರೆ ಮುಂದೆ ಅದನ್ನು ಸರಿಪಡಿಸುವ ಕೆಲಸ ಇಲಾಖೆ ಮಾಡುತ್ತದೆ. ಅಧಿಕಾರಿಗಳು ಪರೀಕ್ಷೆಗಳನ್ನು ಉತ್ತಮವಾಗಿ ನಡೆಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಎರಡು ವರ್ಷ ಪರೀಕ್ಷೆಗಳನ್ನು ಬರೆಯಲಾಗದೆ ಕೋರೊನಾ ನಂತರ ಮೊದಲ ಬಾರಿ ಪರೀಕ್ಷೆಗೆ ಮಕ್ಕ​ಳು ಹಾಜರಾಗಿದ್ದಾರೆ. ಮಕ್ಕಳು ಆತ್ಮವಿಶ್ವಾಸದಿಂದಿದ್ದಾರೆ. ಅವರ ಪಾಲಕರು ಧೈರ್ಯವಾಗಿ ಬೆನ್ನುತಟ್ಟಿಕಳುಹಿಸಿದರೆ ಪರೀಕ್ಷೆಯನ್ನು ಚೆನ್ನಾಗಿ ಬರೆಯುತ್ತಾರೆ ಎಂಬ ವಿಶ್ವಾಸವಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪೌರತ್ವಕ್ಕೂ ಮುನ್ನ ಮತಪಟ್ಟೀಲಿ ಹೆಸರು : ಸೋನಿಯಾಗೆ ನೋಟಿಸ್‌
ಲೋಕಸಭೆಯಲ್ಲಿ ಮತಚೋರಿ ಕದನ : ಕೈ ಮತಗಳವಿಂದ ಅಂಬೇಡ್ಕರ್‌ಗೆ ಸೋಲು-ಬಿಜೆಪಿ