
ಜೈಪುರ(ಅ.10): ದೇವಾಲಯದ ಭೂಮಿಯ ಮೇಲಿನ ಆಸೆಗೆ ಐವರು ದುರುಳರು ಅರ್ಚಕರೊಬ್ಬರನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದಿರುವ ಭೀಕರ ಘಟನೆ ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ ನಡೆದಿದೆ
ಸುಟ್ಟಗಾಯಗಳಿಂದ ತೀವ್ರವಾಗಿ ಗಾಯಗೊಂಡಿದ್ದ ಬುಕ್ನಾ ಗ್ರಾಮದಲ್ಲಿರುವ ರಾಧಾಕೃಷ್ಣ ದೇವಾಲಯದ ಅರ್ಚಕ ಬಾಬುಲಾಲ್ ವೈಷ್ಣವ್ ಚಿಕಿತ್ಸೆ ಫಲಿಸದೇ ಜೈಪುರದ ಎಸ್ಎಂಎಸ್ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ನಿಧನರಾಗಿದ್ದಾರೆ.
"
ದೇವಾಲಯಕ್ಕೆ ಸಂಬಂಧಿಸಿದ 5.2 ಎಕರೆ ಜಮೀನನ್ನು ಬಾಬುಲಾಲ್ ನೋಡಿಕೊಳ್ಳುತ್ತಿದ್ದರು. ಈ ಜಮೀನಿನ ಪಕ್ಕದಲ್ಲಿ ತಮಗಾಗಿ ಒಂದು ಸಣ್ಣ ಮನೆ ನಿರ್ಮಿಸಿಕೊಳ್ಳಲು ನಿರ್ಧರಿಸಿದ್ದರು. ಆದರೆ, ಈ ಜಮೀನನ್ನು ಅತಿಕ್ರಮಿಸಲು ಅದೇ ಗ್ರಾಮದ ಇನ್ನೊಂದು ಗುಂಪು ಬಯಸಿತ್ತು. ಈ ಕಾರಣಕ್ಕೆ ಕಲಹ ಏರ್ಪಟ್ಟಿತ್ತು. ಬುಧವಾರ ಐವರು ಆರೋಪಿಗಳು ಅರ್ಚಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದರು.
ಆಸ್ಪತ್ರೆಗೆ ದಾಖಲಾಗಿದ್ದ ಅವರು ಗುರುವಾರ ನಿಧನರಾಗಿದ್ದಾರೆ. ಘಟನೆ ಸಂಬಂಧ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ