ಯುವಕರ ಭವಿಷ್ಯಕ್ಕೆ ನೆರವಾಗುವ ರೀತಿ ಕೆಲಸ ಮಾಡುವೆ : ಆರ್‌ ಸಿ

Kannadaprabha News   | Asianet News
Published : Jul 09, 2021, 09:24 AM ISTUpdated : Jul 09, 2021, 09:30 AM IST
ಯುವಕರ ಭವಿಷ್ಯಕ್ಕೆ ನೆರವಾಗುವ ರೀತಿ ಕೆಲಸ ಮಾಡುವೆ : ಆರ್‌ ಸಿ

ಸಾರಾಂಶ

ಕೇಂದ್ರದ ನೂತನ ಮಾಹಿತಿ ತಂತ್ರಜ್ಞಾನ, ಎಲೆಕ್ಟ್ರಾನಿಕ್ಸ್‌ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾಗಿ ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್‌ ಅವರು ಗುರುವಾರ ಅಧಿಕಾರ ಸ್ವೀಕಾರ ಕೌಶಲ್ಯಾಭಿವೃದ್ಧಿ ಸಚಿವರಾಗಿ ಶಕ್ತಿ ಮೀರಿ ಕೆಲಸ ಮಾಡುವುದಾಗಿ ತಿಳಿಸಿರುವ ಅವರು, ಯುವಕರ ಭವಿಷ್ಯಕ್ಕೆ ನೆರವಾಗುವ ರೀತಿಯಲ್ಲಿ ಕಾರ‍್ಯ ನಿರ್ವಹಿಸುವ ಭರವಸೆ 

 ನವದೆಹಲಿ (ಜು.09):  ಕೇಂದ್ರದ ನೂತನ ಮಾಹಿತಿ ತಂತ್ರಜ್ಞಾನ, ಎಲೆಕ್ಟ್ರಾನಿಕ್ಸ್‌ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾಗಿ ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್‌ ಅವರು ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ. ಕೌಶಲ್ಯಾಭಿವೃದ್ಧಿ ಸಚಿವರಾಗಿ ಶಕ್ತಿ ಮೀರಿ ಕೆಲಸ ಮಾಡುವುದಾಗಿ ತಿಳಿಸಿರುವ ಅವರು, ಯುವಕರ ಭವಿಷ್ಯಕ್ಕೆ ನೆರವಾಗುವ ರೀತಿಯಲ್ಲಿ ಕಾರ‍್ಯ ನಿರ್ವಹಿಸುವ ಭರವಸೆ ನೀಡಿದ್ದಾರೆ.

ಪ್ರಮಾಣವಚನ ಮುಗಿದ 24 ಗಂಟೆಯೊಳಗೆ ಅಧಿಕಾರ ಸ್ವೀಕರಿಸಿದ ಸಚಿವ ರಾಜೀವ್ ಚಂದ್ರಶೇಖರ್ ..

ಕೇಂದ್ರ ಸಚಿವರಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಿದ್ದ ಅವರು ದೆಹಲಿಯ ಶ್ರಮಶಕ್ತಿ ಭವನದಲ್ಲಿರುವ ಕೌಶಲ್ಯ ಅಭಿವೃದ್ಧಿ ಸಚಿವಾಲಯದಲ್ಲಿ ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದರು. ನಂತರ ಮಾತನಾಡಿ, ಸಚಿವ ಸ್ಥಾನದ ಮೂಲಕ ದೇಶ ಸೇವೆ ಮಾಡಲು ಪ್ರಧಾನಿ ಮೋದಿ ಅವಕಾಶ ನೀಡಿದ್ದಾರೆ. 

ಇದಕ್ಕಾಗಿ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ನನ್ನ ಶಕ್ತಿ ಮೀರಿ ಇಲಾಖೆಯಲ್ಲಿ ಕೆಲಸ ಮಾಡುತ್ತೇನೆ. ಕೌಶಲ್ಯ ಅಭಿವೃದ್ಧಿ ಇಲಾಖೆ ಪ್ರಧಾನಿ ಮೋದಿ ಕನಸು. ಇದು ತುಂಬಾ ಮಹತ್ವದ ಇಲಾಖೆ. ಯುವಕರ ಭವಿಷ್ಯಕ್ಕೆ ನೆರವಾಗುವ ರೀತಿ ನಾನು ಕೆಲಸ ನಿರ್ವಹಿಸುತ್ತೇನೆ. ಇಲಾಖೆಯಲ್ಲಿ ಯುವಕರಿಗೆ ಸಾಕಷ್ಟುನೆರವು ನೀಡುವ ಬಗ್ಗೆ ಚಿಂತಿಸಲಾಗುವುದು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮದುವೆ ನಂತರ ಕಾರಿನ ಸ್ಟೇರಿಂಗ್ ಹಿಡಿದ ವಧು; ದೇವ್ರೇ ಕಾಪಾಡಪ್ಪಾ ಎಂದು ಕೈಮುಗಿದು ಕುಳಿತುಕೊಂಡ ವರ!
ಇಂಟರ್ನೆಟ್ ಇಲ್ಲದೆಯೂ UPI ಪಾವತಿ ಮಾಡಬಹುದು, *99# ಮೂಲಕ ಹಣ ಕಳುಹಿಸುವುದು ಹೇಗೆ?