ವಿಪಕ್ಷಗಳ ಆಟಾಟೋಪ; ಕಣ್ಣೀರು ಹಾಕಿದ ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು

Published : Aug 11, 2021, 10:23 PM ISTUpdated : Aug 11, 2021, 10:27 PM IST
ವಿಪಕ್ಷಗಳ ಆಟಾಟೋಪ; ಕಣ್ಣೀರು ಹಾಕಿದ ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು

ಸಾರಾಂಶ

* ಸಂಸತ್ ಉಭಯ ಸದನಗಳ ಕಾರ್ಯ ಕಲಾಪಕ್ಕೆ ನಿರಂತರ ಅಡ್ಡಿ * ನಿದ್ರೆಯಿಲ್ಲದೆ ರಾತ್ರಿ ಕಳೆದಿದ್ದೇನೆ *  ನೊಂದು ಕಣ್ಣೀರಾದ ವೆಂಕಯ್ಯ ನಾಯ್ಡು * ರಾಜ್ಯಸಭೆ  ಕಲಾಪದಲ್ಲಿ ವೆಂಕಯ್ಯ ನಾಯ್ಡು ಭಾವುಕ

ನವದೆಹಲಿ(ಆ. 11)  ಸಂಸತ್ ನ ಉಭಯ ಸದನಗಳ ಕಾರ್ಯ ಕಲಾಪಕ್ಕೆ ವಿಪಕ್ಷದ ಸದಸ್ಯರು ಅಡ್ಡಿ ಪಡಿಸುತ್ತಲೆ ಬಂದಿದ್ದಾರೆ.  ಈ ವಿಚಾರಕ್ಕೆ ಖೇದ ವ್ಯಕ್ತಪಡಿಸಿದ ರಾಜ್ಯಸಭೆ ಸಭಾಪತಿ ಎಂ.ವೆಂಕಯ್ಯ ನಾಯ್ಡು ಕಣ್ಣೀರು ಹಾಕಿದ್ದಾರೆ.

ಮಾತನಾಡುತ್ತ ಇರುವಾಗಲೇ ನಾಯ್ಡು ಗದ್ಗದಿತರಾದರು.  ಸದನದಲ್ಲಿ ವಿರೋಧ ಪಕ್ಷದ ಸಂಸದರಿಂದ ಮಂಗಳವಾರ ನಡೆದ ಗದ್ದಲದ ಬಗ್ಗೆ ಮಾತನಾಡುತ್ತ  ಕಣ್ಣೀರಾದರು.

ಮಾಧ್ಯಮದ ವರದಿಗಾರರು ಕುಳಿತುಕೊಳ್ಳುವ ಜಾಗಕ್ಕೆ ಅದರದ್ದೇ ಆದ ಪಾವಿತ್ರ್ಯತೆ ಇದೆ. ಆದರೆ ವಿಪಕ್ಷ ನಾಯಕರು ನಡೆದುಕೊಂಡ ವರ್ತನೆ ಎಲ್ಲ ಸಂಪ್ರದಾಯವನ್ನು ಹಾಳು ಮಾಡಿದೆ ಎಂದು ನಾಯ್ಡು ಆತಂಕ ತೋಡಿಕೊಂಡರು.

ಕಲಾಪ ಬಲಿಯಿಂದ ಆದ ನಷ್ಟವೆಷ್ಟು?

ಕೆಲವರ ಈ ವರ್ತನೆಯಿಂದ ಈ ಮನೆಯ ಎಲ್ಲಾ ಪಾವಿತ್ರ್ಯತೆ ನಾಶವಾಯಿತು. ವಿರೋಧ ಪಕ್ಷದ ಸಂಸದರಿಗೆ ಬುದ್ಧಿ ಮಾತು ಹೇಳಲು ನನ್ನ ಬಳಿ ಪದಗಳಿಲ್ಲ. ಚ ನಿದ್ರೆಯಿಲ್ಲದೇ  ರಾತ್ರಿ ಕಳೆದಿದ್ದೇನೆ ಎಂದರು.

ಕೃಷಿ ಕಾನೂನುಗಳಿಗೆ ಸಂಬಂಧಿಸಿ ವಿರೋಧ ಪಕ್ಷಗಳ ಬಳಿ ಆಕ್ಷೇಪಣೆಗಳಿದ್ದರೆ ಆ ಬಗ್ಗೆ ಸದನದಲ್ಲಿ ಚರ್ಚೆ ನಡೆಸಬಹುದು. ಪ್ರತಿಭಟಿಸಬಹುದು ಅಥವಾ ಅದರ ವಿರುದ್ಧ ಮತ ಚಲಾಯಿಸಬಹುದು. ಆದರೆ, ಈ ಬಗ್ಗೆ ಅಂತಿಮವಾಗಿ ಸರ್ಕಾರನೇ ನಿರ್ಧಾರ ಕೈಗೊಳ್ಳಬೇಕು.  ದಾಖಲೆಗಳನ್ನು ಇಟ್ಟುಕೊಂಡು ಚರ್ಚೆ ಮಾಡಬಹುದಿತ್ತು. ಆದರೆ ಈ ರೀತಿಯ ವರ್ತನೆಗೆ ಏನು ಹೇಳಲು ಸಾಧ್ಯ? ಎಂದು ಪ್ರಶ್ನೆ ಮಾಡಿದರು.

ಪೆಗಾಸಸ್ ಬೇಹುಗಾರಿಕೆ ಮತ್ತು ಕೃಷಿ ಕಾಯ್ದೆಗಳ ಸಂಬಂಧ ಚರ್ಚೆಗೆ ಅವಕಾಶಕ್ಕೆ ಒತ್ತಾಯಿಸಿ ಕಾಂಗ್ರೆಸ್ ಸದಸ್ಯ ಪ್ರತಾಪ್ ಸಿಂಗ್ ಬಜ್ವಾ, ಸದನದ ಪ್ರಧಾನ ಕಾರ್ಯದರ್ಶಿಗಳ ಮೇಜು ಹತ್ತಿ ಕೋಲಾಹಲವೆಬ್ಬಿಸಿದ್ದರು.  ಮೇಜು ಹತ್ತಿ-ಕಾಗದ ಪತ್ರಗಳನ್ನು  ಹರಿದು ಕಾಂಗ್ರೆಸ್ ಮತ್ತು ಬೆಂಬಲಿತ ಪಕ್ಷದ ಸದಸ್ಯರು ಉದ್ಧಟತನ ತೋರಿದ್ದರು .
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

India Latest News Live: ನಾವು ದೇಶಕ್ಕಾಗಿ, ನೀವು ಚುನಾವಣೆಗಾಗಿ: ಬಿಜೆಪಿ. ಮೋದಿ ವಿರುದ್ದ ಪ್ರಿಯಾಂಕಾ ಗಾಂಧಿ ವಾಗ್ದಾಳಿ
18 ದಿನದಲ್ಲಿ 10 ಲಕ್ಷ ಪ್ರಯಾಣಿಕರ ಇಂಡಿಗೋ ಟಿಕೆಟ್‌ ರದ್ದು