ಕೃಷಿ ಮಸೂದೆ ಕೋಲಾಹಲ; ವಿಪಕ್ಷ ಸಂಸದರ ವರ್ತನೆಗೆ ರಾಜೀವ್ ಚಂದ್ರಶೇಖರ್ ಆಕ್ರೋಶ

Published : Sep 20, 2020, 08:10 PM ISTUpdated : Sep 20, 2020, 08:17 PM IST
ಕೃಷಿ ಮಸೂದೆ ಕೋಲಾಹಲ; ವಿಪಕ್ಷ ಸಂಸದರ ವರ್ತನೆಗೆ ರಾಜೀವ್ ಚಂದ್ರಶೇಖರ್ ಆಕ್ರೋಶ

ಸಾರಾಂಶ

ಕೃಷಿ ಮಸೂದೆ ವೇಳೆ ಕೋಲಾಹಲ/ ಸಂಸದರ ದುರ್ವರ್ತನೆಗೆ ಎಂಪಿ ರಾಜೀವ್ ಚಂದ್ರಶೇಖರ್ ಆಕ್ರೋಶ/ ಸಂಸತ್ತಿನ ಇತಿಹಾಸದಲ್ಲಿ ಇಂಥ ಘಟನೆ ಕಂಡಿಲ್ಲ/ ಈ ರೀತಿಯ ವರ್ತನೆ ಸಹಿಸಿಕೊಳ್ಳಲು ಅಸಾಧ್ಯ

ನವದೆಹಲಿ(ಸೆ. 20)  ಕೃಷಿ ಮಸೂದೆ ವಿಚಾರ ರಾಜ್ಯಸಭೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣ ಮಾಡಿತ್ತು.   ಕೃಷಿ ಮಸೂದೆ ಮಂಡನೆ ವೇಳೆ ವಿಪಕ್ಷಗಳ ಎಂಪಿಗಳು ನಡೆದುಕೊಂಡ ವರ್ತನೆ ಬಗ್ಗೆ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯಸಭೆಯಲ್ಲಿ ಟಿಎಂಸಿ ಸಂಸದರ ಕೋಲಾಹಲ ಎದ್ದಿತ್ತು. ಕೃಷಿ ವಿಧೇಯಕ ಚರ್ಚೆ ವೇಳ  ಉಪ ಸಭಾಪತಿ ಎದುರು ಸಂಸದರು ಆಕ್ರೋಶ ವ್ಯಕ್ತಪಡಿಸಿ . ರೂಲ್ ಬುಕ್ ಹರಿದು ಹಾಕಿದ್ದರು. ಟಿಎಂಸಿ ಸಂಸದ ಡೆರೆಕ್ ಒಬ್ರಿಯನ್  ಆಕ್ರೋಶ ಕಟ್ಟೆ ಒಡೆದಿತ್ತು.

ರೂಲ್ ಬುಕ್ ಹರಿದು ಸಂಸದನ ಕೋಲಾಹಲ

ಸಂಸತ್ತಿನಲ್ಲಿ ನಾನು ಇಷ್ಟು ವರ್ಷದಲ್ಲಿ ಇಂಥ ಹಿಂಸಾತ್ಮಕ  ಚಟುವಟಿಕೆ ನೋಡಿರಲಿಲ್ಲ. ಸಿಪಿಎಂ, ಟಿಎಂಸಿ ಮತ್ತು ಕಾಂಗ್ರೆಸ್ ಸಂಸದರು ಸಭಾಪತಿ ಮತ್ತು ಮಾರ್ಷಲ್ ಗಳ ಜತೆ ನಡೆದುಕೊಂಡ ರೀತಿಯನ್ನು ಯಾರೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ರಾಜೀವ್ ಚಂದ್ರಶೇಖರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಪಕ್ಷಗಳ ಗದ್ದಲದ ಹಿನ್ನೆಲೆಯಲ್ಲಿ ರಾಜ್ಯಸಭೆಯ ಕಲಾಪವನ್ನು ಸೋಮವಾರ ಬೆಳಿಗ್ಗೆ 9 ಗಂಟೆವರೆಗೆ ಮುಂದೂಡಲಾಗಿದೆ. ವಿರೋಧದ ನಡುವೆಯೂ ಕೃಷಿ ಮಸೂದೆ ಪಾಸ್ ಆಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮುಸ್ಲಿಂ ಲೀಗ್‌, ಜಿನ್ನಾಗೆ ಮಣಿದ ನೆಹರು, ವಂದೇ ಮಾತರಂ ಅನ್ನು ಹರಿದು ಹಾಕಿದ್ದು ಕಾಂಗ್ರೆಸ್‌: ಮೋದಿ ವಾಗ್ದಾಳಿ
ಮದುವೆಯಾದ್ರೆ ಸಿಗುತ್ತೆ 2.5 ಲಕ್ಷ ರೂಪಾಯಿ; ಶೇ.99 ಜನರಿಗೆ ಈ ವಿಷಯವೇ ಗೊತ್ತಿಲ್ಲ